ರೈತರಿಗೆ ಒಂದು ಅಜೆಂಡಾ ಎಂಬುದೇ ಇಲ್ಲ; ಹೇಮಾ ಮಾಲಿನಿ
ನವದೆಹಲಿ, ಜನವರಿ 13: ದೆಹಲಿ ಗಡಿಗಳಲ್ಲಿ ಸಾವಿರಾರು ರೈತರು ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಅವರಿಗೇ ತಮಗೆ ಏನು ಬೇಕು, ಈ ಹೊಸ ಕಾಯ್ದೆಗಳಲ್ಲಿ ಏನು ದೋಷವಿದೆ ಎಂಬುದು ತಿಳಿದಿಲ್ಲ ಎಂದು ಬಾಲಿವುಡ್ ನಟಿ ಹಾಗೂ ಮಥುರಾ ಸಂಸದೆ ಹೇಮಾ ಮಾಲಿನಿ ಹೇಳಿದ್ದಾರೆ.
ದೆಹಲಿಯಲ್ಲಿ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಈ ಹೇಳಿಕೆ ನೀಡಿದ ಅವರು, ಕೃಷಿ ಕಾಯ್ದೆಗಳನ್ನು ತಡೆ ಹಿಡಿದಿರುವ ಸುಪ್ರೀಂ ಕೋರ್ಟ್ ಆದೇಶವನ್ನೂ ಸ್ವಾಗತಿಸಿದ್ದಾರೆ. ಈ ಒಂದು ನಡೆ ಆಕ್ರೋಶವನ್ನು ತಣ್ಣಗಾಗಿಸಬಹುದು ಎಂದು ಹೇಳಿದ್ದಾರೆ. ಮುಂದೆ ಓದಿ...

"ತಮಗೆ ಏನು ಬೇಕು ಎಂಬುದು ರೈತರಿಗೇ ತಿಳಿದಿಲ್ಲ"
ಮಂಗಳವಾರ ಕೇಂದ್ರದ ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಒಳ್ಳೆಯದೇ ಆಗಿದೆ. ಈ ಆದೇಶ ಪರಿಸ್ಥಿತಿಯನ್ನು ನಿಯಂತ್ರಿಸಲು ಸಹಕರಿಸುತ್ತದೆ. ಹಲವು ಸುತ್ತಿನ ಮಾತುಕತೆ ನಂತರವೂ ರೈತರು ಒಂದು ಒಪ್ಪಂದಕ್ಕೆ ಬರಲು ಸಿದ್ಧರಿಲ್ಲ. ಅವರಿಗೆ ಏನು ಬೇಕು ಎಂಬುದು ಅವರಿಗೇ ತಿಳಿದಿಲ್ಲ" ಎಂದಿದ್ದಾರೆ.

"ಕಾಯ್ದೆಗಳಲ್ಲಿ ದೋಷವೇನಿದೆ?"
ಕೇಂದ್ರ ಪರಿಚಯಿಸಿರುವ ಈ ನೂತನ ಕೃಷಿ ಕಾಯ್ದೆಗಳಲ್ಲಿ ಏನು ತಪ್ಪಿದೆ, ಯಾವ ದೋಷವಿದೆ ಎಂಬುದು ರೈತರಿಗೆ ತಿಳಿದಿಲ್ಲ. ಸುಮ್ಮನೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇದರರ್ಥ, ಅವರಿಂದ ಬೇರೆ ಯಾರೋ ಈ ಕೆಲಸ ಮಾಡಿಸುತ್ತಿದ್ದಾರೆ ಎಂಬುದು. ಬೇರೆಯವರು ಹೇಳಿಕೊಟ್ಟು ಮಾಡಿಸುತ್ತಿರುವ ಪ್ರತಿಭಟನೆ ಇದು. ರೈತರ ಮೂಲಕ ಬೇರೆಯವರು ಪರಿಸ್ಥಿತಿಯ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಮೊಬೈಲ್ ಟವರ್ ಧ್ವಂಸಗೊಳಿಸಿದ್ದಕ್ಕೆ ಆಕ್ರೋಶ
ಪಂಜಾಬ್ ನಲ್ಲಿ ರೈತರು ಮೊಬೈಲ್ ಟವರ್ ಗಳನ್ನು ಧ್ವಂಸಗೊಳಿಸಿದ್ದು ಸರಿಯಲ್ಲ. ಇದರಿಂದ ಪಂಜಾಬ್ ನಲ್ಲಿ ಸಾಕಷ್ಟು ನಷ್ಟವಾಗಿದೆ. ಸರ್ಕಾರ ಪದೇ ಪದೇ ಮಾತುಕತೆಗೆ ಕರೆಯುತ್ತಿದ್ದರೂ ಹೀಗೆ ವಿನಾಕಾರಣ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ. ಇದರಿಂದ ಯಾರಿಗೆ ಲಾಭ ಎಂದು ಪ್ರಶ್ನಿಸಿದ್ದಾರೆ.

"ರೈತರಿಗೆ ಅಜೆಂಡಾ ಎಂಬುದೇ ಇಲ್ಲ"
ಸುಮ್ಮನೆ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಅಜೆಂಡಾ ಎಂಬುದೇ ಇಲ್ಲ. ಸರ್ಕಾರ ಮಾತುಕತೆಗೆ ಕರೆಯುತ್ತಿದ್ದರೂ ಅದನ್ನು ನಿರಾಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಯಾವ ಅರ್ಥವೂ ಇಲ್ಲ ಎಂದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications