ಹಣ್ಣುಗಳ ರಾಜ ಮಾರುಕಟ್ಟೆ ಪ್ರವೇಶ ನಿಧಾನ

ಮಾವಿನಮರಗಳಲ್ಲಿ ಹೂವುಗಳು ತಡವಾಗಿ ಅರಳುತ್ತಿದೆ. ವಾಡಿಕೆಯಂತೆ ಡಿಸೆಂಬರ್ ತಿಂಗಳ ಕೊನೆ ವಾರ ಅಥವಾ ಜನವರಿ ಮೊದಲ ಅಥವಾ ಎರಡನೇ ವಾರದ ವೇಳೆಗೆ ಹೂವುಗಳು ಪೂರ್ಣವಾಗಿ ಅರಳಬೇಕಾಗಿತ್ತು. ಪ್ರತಿ ಬಾರಿ ಏಪ್ರಿಲ್ ಕೊನೆಗೆ ಅಥವಾ ಮೇ ಮೊದಲ ವಾರದ ಹೊತ್ತಿಗೆ ಹಣ್ಣು ಮಾರುಕಟ್ಟೆಗೆ ಬರುತ್ತದೆ. ಆದರೆ, ಈಗ ಒಂದು ತಿಂಗಳು ತಡವಾಗಿದೆ. ಈ ಬಾರಿ ಮೇ ಕೊನೆ ವಾರ ಅಥವಾ ಜೂನ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ.
ಇಳುವರಿಯಲ್ಲಿ ತೊಂದರೆ ಇಲ್ಲ: ಮಾರುಕಟ್ಟೆ ಪ್ರವೇಶ ತಡವಾದರೂ ಈ ಬಾರಿ ರೈತರಿಗೆ ನಷ್ಟವಾಗುವ ಸಾಧ್ಯತೆ ಕಮ್ಮಿ. ಈ ಬಾರಿ ಮಾವಿನ ಇಳುವರಿ ಭರ್ಜರಿಯಾಗಿ ಹೆಚ್ಚಾಗಿದೆ. ಕಳೆದ ಎರಡು ವರ್ಷಗಳಲ್ಲಿ ಪೂರ್ಣ ಇಳುವರಿ ಕಾಣದೆ, ಪ್ರಕೃತಿ ವಿಕೋಪಗಳಿಗೆ ಸಿಲುಕು ತತ್ತರಿಸಿದ ರೈತರು ಈ ಬಾರಿ ನೆಮ್ಮದಿಯನ್ನು ಕಾಣಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಹೇಳುತ್ತಾರೆ. ಒಟ್ಟಿನಲ್ಲಿ ಹಣ್ಣುಗಳ ರಾಜನ ಆಗಮನಕ್ಕೆ ರಾಜಧಾನಿಯಲ್ಲಿ ಸಿದ್ಧತೆ ನಡೆದಿದೆ. ಗ್ರಾಹಕರು ಮುಗಿಬಿದ್ದು ಖರಿದೀಸುತ್ತಾರೆ ಎಂಬ ಆಶಾಭಾವ ಶ್ರೀನಿವಾಸಪುರ ರೈತರಲ್ಲಿ ಮನೆ ಮಾಡಿದೆ.
ಟಿಪ್ಪಣಿ: ರಾಜ್ಯದಲ್ಲಿ ಬೆಳೆಯಲಾಗುವ ಒಟ್ಟು ಮಾವಿನ ಬೆಳೆಯ ಪ್ರಮಾಣ(ಸುಮಾರು 1,17,381 ಹೆಕ್ಟೇರು)ದಲ್ಲಿ ಶೇ.47ರಷ್ಟು ಕೋಲಾರ ಜಿಲ್ಲೆಯಲ್ಲಿಯೇ ಕಾಣಬಹುದು. ಮಾವಿನ ತವರೂರು ಎಂದೇ ಖ್ಯಾತಿ ಗಳಿಸಿರುವ ಶ್ರೀನಿವಾಸಪುರ, ಮುಳಬಾಗಿಲು, ಬಂಗಾರಪೇಟೆ, ಮಾಲೂರು, ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲಭಾಗದಲ್ಲಿ ಹೆಚ್ಚೆಚ್ಚು ಫಲವನ್ನು ಕಾಣಬಹುದು. ಕಳೆದ ಎರಡು ವರ್ಷಗಳಲ್ಲಿ ಇಳುವರಿ ವ್ಯತ್ಯಯದ ನಡುವೆಯೂ 4 ರಿಂದ 5 ಲಕ್ಷ ಟನ್ ಮಾವು ಬೆಳೆಯಲಾಗಿತ್ತು. ಈ ಬಾರಿ ಅದಕ್ಕಿಂತಲ್ಲೂ ಹೆಚ್ಚಿನ ಫಸಲು ಬರುವ ನಿರೀಕ್ಷೆಯಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications