ಹಣ್ಣುಗಳ ರಾಜ ಮಾರುಕಟ್ಟೆ ಪ್ರವೇಶ ನಿಧಾನ

ಮಾವಿನಮರಗಳಲ್ಲಿ ಹೂವುಗಳು ತಡವಾಗಿ ಅರಳುತ್ತಿದೆ. ವಾಡಿಕೆಯಂತೆ ಡಿಸೆಂಬರ್ ತಿಂಗಳ ಕೊನೆ ವಾರ ಅಥವಾ ಜನವರಿ ಮೊದಲ ಅಥವಾ ಎರಡನೇ ವಾರದ ವೇಳೆಗೆ ಹೂವುಗಳು ಪೂರ್ಣವಾಗಿ ಅರಳಬೇಕಾಗಿತ್ತು. ಪ್ರತಿ ಬಾರಿ ಏಪ್ರಿಲ್ ಕೊನೆಗೆ ಅಥವಾ ಮೇ ಮೊದಲ ವಾರದ ಹೊತ್ತಿಗೆ ಹಣ್ಣು ಮಾರುಕಟ್ಟೆಗೆ ಬರುತ್ತದೆ. ಆದರೆ, ಈಗ ಒಂದು ತಿಂಗಳು ತಡವಾಗಿದೆ. ಈ ಬಾರಿ ಮೇ ಕೊನೆ ವಾರ ಅಥವಾ ಜೂನ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ.
ಇಳುವರಿಯಲ್ಲಿ ತೊಂದರೆ ಇಲ್ಲ: ಮಾರುಕಟ್ಟೆ ಪ್ರವೇಶ ತಡವಾದರೂ ಈ ಬಾರಿ ರೈತರಿಗೆ ನಷ್ಟವಾಗುವ ಸಾಧ್ಯತೆ ಕಮ್ಮಿ. ಈ ಬಾರಿ ಮಾವಿನ ಇಳುವರಿ ಭರ್ಜರಿಯಾಗಿ ಹೆಚ್ಚಾಗಿದೆ. ಕಳೆದ ಎರಡು ವರ್ಷಗಳಲ್ಲಿ ಪೂರ್ಣ ಇಳುವರಿ ಕಾಣದೆ, ಪ್ರಕೃತಿ ವಿಕೋಪಗಳಿಗೆ ಸಿಲುಕು ತತ್ತರಿಸಿದ ರೈತರು ಈ ಬಾರಿ ನೆಮ್ಮದಿಯನ್ನು ಕಾಣಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಹೇಳುತ್ತಾರೆ. ಒಟ್ಟಿನಲ್ಲಿ ಹಣ್ಣುಗಳ ರಾಜನ ಆಗಮನಕ್ಕೆ ರಾಜಧಾನಿಯಲ್ಲಿ ಸಿದ್ಧತೆ ನಡೆದಿದೆ. ಗ್ರಾಹಕರು ಮುಗಿಬಿದ್ದು ಖರಿದೀಸುತ್ತಾರೆ ಎಂಬ ಆಶಾಭಾವ ಶ್ರೀನಿವಾಸಪುರ ರೈತರಲ್ಲಿ ಮನೆ ಮಾಡಿದೆ.
ಟಿಪ್ಪಣಿ: ರಾಜ್ಯದಲ್ಲಿ ಬೆಳೆಯಲಾಗುವ ಒಟ್ಟು ಮಾವಿನ ಬೆಳೆಯ ಪ್ರಮಾಣ(ಸುಮಾರು 1,17,381 ಹೆಕ್ಟೇರು)ದಲ್ಲಿ ಶೇ.47ರಷ್ಟು ಕೋಲಾರ ಜಿಲ್ಲೆಯಲ್ಲಿಯೇ ಕಾಣಬಹುದು. ಮಾವಿನ ತವರೂರು ಎಂದೇ ಖ್ಯಾತಿ ಗಳಿಸಿರುವ ಶ್ರೀನಿವಾಸಪುರ, ಮುಳಬಾಗಿಲು, ಬಂಗಾರಪೇಟೆ, ಮಾಲೂರು, ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲಭಾಗದಲ್ಲಿ ಹೆಚ್ಚೆಚ್ಚು ಫಲವನ್ನು ಕಾಣಬಹುದು. ಕಳೆದ ಎರಡು ವರ್ಷಗಳಲ್ಲಿ ಇಳುವರಿ ವ್ಯತ್ಯಯದ ನಡುವೆಯೂ 4 ರಿಂದ 5 ಲಕ್ಷ ಟನ್ ಮಾವು ಬೆಳೆಯಲಾಗಿತ್ತು. ಈ ಬಾರಿ ಅದಕ್ಕಿಂತಲ್ಲೂ ಹೆಚ್ಚಿನ ಫಸಲು ಬರುವ ನಿರೀಕ್ಷೆಯಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications