ದಾವಣಗೆರೆಯ ಈ ರೈತನಿಗೆ ಸಿಹಿಯಾಯಿತು "ಮಗಧೀರ ಮೆಣಸಿನಕಾಯಿ"
ದಾವಣಗೆರೆ, ಜುಲೈ 29: ಮುಂಗಾರು ಮಳೆ ಅಲ್ಲಲ್ಲಿ ಕೈಕೊಟ್ಟಿದೆ. ಮಳೆಯನ್ನೇ ನಂಬಿ ಕೃಷಿ ಕೈಗೊಂಡ ಹಲವರು ಕೈಸುಟ್ಟುಕೊಂಡಿದ್ದಾರೆ. ಆದರೆ ಇದೇ ಸಮಯದಲ್ಲಿ, ಬುದ್ಧಿವಂತಿಕೆ ಉಪಯೋಗಿಸಿ, ಹೆಚ್ಚು ನೀರು ಬೇಡದ, ರೋಗನಿರೋಧಕ ಶಕ್ತಿ ಹೆಚ್ಚಿರುವ ಮೆಣಸಿನ ಕಾಯಿ ತಳಿಯನ್ನು ಹಾಕಿ ಲಾಭ ಪಡೆದುಕೊಂಡಿದ್ದಾರೆ ದಾವಣಗೆರೆಯ ಈ ರೈತ. ಖಾರದ ಮೆಣಸಿನಕಾಯಿ ಈ ರೈತನ ಬಾಳಲ್ಲಿ ಈಗ ಸಿಹಿ ತಂದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಬಸವಪುರದ ಗ್ರಾಮದ ಉದಯ್ ಕುಮಾರ್ ಎಂಬ ರೈತ ಹಸಿರು ಮೆಣಸಿನಕಾಯಿ ಬೆಳೆದು ಯಶಸ್ಸನ್ನು ಕಂಡವರು.
ಬೇಸಿಗೆ ಕಾಲದಲ್ಲಿ ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗುತ್ತವೆ. ನಂತರ ಮಳೆಗಾಲದಲ್ಲಿ ಮಳೆ ಸರಿಯಾಗಿ ಬಂದರೆ ನೀರು ದೊರೆಯುತ್ತದೆ. ನದಿ ತೊರೆಗಳು ಹರಿದು ಕೃಷಿ ಸರಾಗವಾಗಿ ಸಾಗುತ್ತದೆ. ಆದರೆ ಮಳೆ ಕೈಕೊಟ್ಟರೆ ಎಲ್ಲವೂ ಎಡವಟ್ಟು. ನೀರಿಲ್ಲದೇ ಗಿಡಗಳು ಒಣಗುವುದು ಶತಸಿದ್ಧ. ಹೀಗಿದ್ದಾಗ ಲಾಭದ ಮಾತೆಲ್ಲಿ? ಹೀಗೆಯೇ ಯೋಚಿಸಿದ ಉದಯ್ ಅವರು, ಇರುವ ಅಲ್ಪ ನೀರನ್ನೇ ಸದುಪಯೋಗಪಡಿಸಿಕೊಂಡಿದ್ದಾರೆ. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು, ಹಸಿರು ಮೆಣಸಿನಕಾಯಿ ಬೆಳೆದಿದ್ದಾರೆ.

ಒಂದು ಹೆಕ್ಟೇರ್ ಜಮೀನಿನಲ್ಲಿ ಆಧುನಿಕ "ಮಗಧೀರ' ತಳಿಯ ಹಸಿರು ಮೆಣಸಿನಕಾಯಿಯನ್ನು ನಾಟಿ ಮಾಡಿದ್ದಾರೆ. ಅರವತ್ತೇ ದಿನದಲ್ಲಿ ಉತ್ತಮ ಇಳುವರಿಯನ್ನೂ ಪಡೆದಿದ್ದಾರೆ.
"ಮಗಧೀರ ಮೆಣಸಿನ ಕಾಯಿ ಹತ್ತು ಸೆಂಟಿ ಮೀಟರ್ ಗಳಷ್ಟು ಉದ್ದ ಬೆಳೆಯುತ್ತದೆ. ಹಳದಿ ಮಿಶ್ರಿತ ಹಸಿರು ಬಣ್ಣ ಇರುವ ಈ ಮೆಣಸಿನ ಕಾಯಿ ಗಿಡಕ್ಕೆ ರೋಗ ನಿರೋಧಕ ಶಕ್ತಿ ಜಾಸ್ತಿ. ಮಾತ್ರವಲ್ಲದೆ ಕಡಿಮೆ ತೇವದಲ್ಲಿ ಹೆಚ್ಚು ತಾಪಮಾನವಿದ್ದರೂ ಉತ್ಕೃಷ್ಟವಾಗಿ ಬೆಳೆಯುತ್ತದೆ" ಎಂದು ಮಾಹಿತಿ ನೀಡುತ್ತಾರೆ ಉದಯ್ ಕುಮಾರ್.
ಸದ್ಯಕ್ಕೆ ಎರಡು ಬಾರಿ ಮೆಣಸಿನಕಾಯಿ ಕಟಾವು ಆಗಿದ್ದು, ಒಂದೂವರೆ ಲಕ್ಷ ಲಾಭಾಂಶ ಪಡೆದುಕೊಂಡು, ಇನ್ನೂ ಹತ್ತು ಕಟಾವುಗಳ ನಿರೀಕ್ಷೆಯಲ್ಲಿದ್ದಾರೆ. ಕಡಿಮೆ ಖರ್ಚು, ಕಡಿಮೆ ನೀರಿನಲ್ಲಿ ಹೆಚ್ಚು ಆದಾಯ ಗಳಿಸಿರುವ ಉದಯ್ ಅವರು ಗೆಲುವಿನ ನಗೆ ಬೀರಿದ್ದಾನೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications