ಕೋಲಾರದ ಈ ಸ್ವಾವಲಂಬಿ ಕೃಷಿಕನಿಗೆ ಬಲ ಕೊಟ್ಟ ಜೇನು ಸಾಕಣೆ
ಐಟಿಐ ಎಲೆಕ್ಟ್ರಿಷಿಯನ್ ನಲ್ಲಿ ಓದು ಮುಗಿಯುತ್ತಿದ್ದಂತೆ ಕೆಲಸಕ್ಕಾಗಿ ಅಲೆದಾಟ ಶುರುವಾಗಿತ್ತು. ಕೆಲಸ ಹುಡುಕಿಕೊಂಡು ಅಲೆಯುತ್ತಿದ್ದರೂ ಸ್ವಾವಲಂಬಿಯಾಗಿ ದುಡಿಯಬೇಕು ಎಂಬ ಹಟವೂ ಒಳಗೊಳಗೇ ಇಣುಕುತ್ತಿತ್ತು. ಕೃಷಿ ಕುಟುಂಬದಲ್ಲೇ ಹುಟ್ಟಿ ಬೆಳೆದ ಇವರಲ್ಲಿ ಹೀಗೊಮ್ಮೆ, ಕೃಷಿಯಲ್ಲೇ ಏಕೆ ಸ್ವಂತವಾಗಿ ಏನನ್ನಾದರೂ ಮಾಡಬಾರದು ಎಂಬ ಆಲೋಚನೆಯೂ ಮಿಂಚಿ ಹೋಯಿತು. ಹೀಗೊಂದು ಆಲೋಚನೆ ಹೊಳೆದದ್ದೇ, ಕೃಷಿ ಹಾದಿ ಹಿಡಿಯಲು ದೃಢ ಮನಸ್ಸು ಮಾಡಿದರು.
ಮನಸ್ಸು ಮಾಡಿದ್ದೇನೋ ಆಯಿತು, ಆದರೆ ಕೃಷಿಯಲ್ಲಿ ಮಾಡುವುದಾದರೂ ಏನನ್ನು? ಆಗ ಜೇನು ಕೃಷಿ ಎಂಬುದು ಸಾಕಷ್ಟು ಹೆಸರು ಗಳಿಸಿರಲಿಲ್ಲ. ರೈತರು ಇದನ್ನು ಲಾಭದಾಯಕ ಕೃಷಿ ಎಂದೂ ಪರಿಗಣಿಸಿರಲಿಲ್ಲ. ಆಗ ಕೋಲಾರದ ಈ ಯುವಕ ವಿನಯ್ ಜೇನು ಕೃಷಿ ಮಾಡಿ ಲಾಭ ಮಾಡುತ್ತೇನೆ ಎಂದು ಹೊರಟರು. ಅವರ ಜೇನು ಕೃಷಿ ಹೇಗೆ ಆರಂಭವಾಯಿತು? ಈಗ ಹೇಗೆ ನಡೆಯುತ್ತಿದೆ? ಅವರ "ಹನಿಲೈಫ್' ಕುರಿತ ವರದಿ ಇಲ್ಲಿದೆ...

ಎಂಟು ವರ್ಷಗಳಿಂದ ಜೇನುಕೃಷಿ
ವಿನಯ್ ಅವರ ಜೇನು ಕೃಷಿಗೆ ಈಗ ಎಂಟು ವರ್ಷ. ಜೇನನ್ನು ಆದಾಯದ ಮೂಲವನ್ನಾಗಿ ಮಾಡಬೇಕೆಂಬ ಹಟದೊಂದಿಗೆ ಜೇನು ಕೃಷಿಯಲ್ಲಿ ತೊಡಗಿಕೊಂಡ ವಿನಯ್ ಕೋಲಾರ ಜಿಲ್ಲೆಯ ತೊಂಡಾಲ ಗ್ರಾಮದವರು. ಕೃಷಿಯನ್ನು ಕಡೆಗಣಿಸುತ್ತಿರುವ ಇಂದಿನ ದಿನಗಳಲ್ಲಿ, ವಿನಯ್ ಜೇನು ಕೃಷಿಯಿಂದಲೇ ಜೀವನ ಕಟ್ಟಿಕೊಂಡಿದ್ದಾರೆ. ತಮ್ಮ ಜಮೀನಿನ ಅರ್ಧ ಎಕರೆಯಲ್ಲಿ ಜೇನು ಸಾಕಾಣಿಕೆ ಆರಂಭಿಸಿ ಕೆ.ಜಿಗಟ್ಟಲೆ ನೈಸರ್ಗಿಕ ಜೇನನ್ನು ತೆಗೆದು ಆದಾಯ ಗಳಿಸುತ್ತಿದ್ದಾರೆ.

50ಕ್ಕೂ ಹೆಚ್ಚು ಜೇನು ಕುಟುಂಬ ಸಾಕಣೆ
ಈಗ ನೈಸರ್ಗಿಕ ಜೇನಿಗೆ ಬೆಲೆ ಹಾಗೂ ಬೇಡಿಕೆಯೂ ಹೆಚ್ಚಾಗಿದೆ. ಜೇನು ತುಪ್ಪದಲ್ಲಿ ಔಷಧೀಯ ಗುಣಗಳಿವೆ ಎಂಬ ಅಂಶವೂ ಬೇಡಿಕೆ ಹೆಚ್ಚಲು ಕಾರಣವಾಗಿದೆ. ಈ ಬೇಡಿಕೆಯನ್ನು ಮನಗಂಡ ವಿನಯ್, ಸ್ಥಳೀಯ ರೈತರ ಸಹಾಯದೊಂದಿಗೆ ಕೃಷಿ ವಿಜ್ಞಾನಿಗಳ ಸಲಹೆ ಪಡೆದು 20ಕ್ಕೂ ಹೆಚ್ಚು ಜೇನು ಪಟ್ಟಿಗೆಗೆಳ ಮೂಲಕ, 50ಕ್ಕೂ ಹೆಚ್ಚು ಜೇನಿನ ಕುಟುಂಬಗಳನ್ನು ಪೋಷಣೆ ಮಾಡುತ್ತಿದ್ದಾರೆ. ಮೊದಲಿಗೆ ಕಾಡಿನಿಂದ ಜೇನು ಸಂಗ್ರಹಿಸಿ ನಂತರ ಬಾಕ್ಸ್ ಗಳ ಮೂಲಕ ಸಾಕಾಣಿಕೆ ಮಾಡುತ್ತಿದ್ದಾರೆ. ಕೆಜಿಗಟ್ಟಲೆ ಜೇನು ಉತ್ಪಾದಿಸಿ, ನೂರಾರು ಕೆಜಿ ಜೇನು ತುಪ್ಪವನ್ನು ವಾರ್ಷಿಕ ಮಾರಾಟ ಮಾಡಿ ವಾರ್ಷಿಕ 5 ರಿಂದ 6 ಲಕ್ಷದಷ್ಟು ಆದಾಯ ಗಳಿಸಿ ಯಶಸ್ವಿ ಕೃಷಿಕ ಎನಿಸಿಕೊಂಡಿದ್ದಾರೆ.

ವಾರಕ್ಕೊಮ್ಮೆ ಪರೀಕ್ಷೆ ಕಡ್ಡಾಯ
ಜೇನು ಸಾಕಾಣಿಕೆ ಅಷ್ಟು ಸರಳ ಕೆಲಸವಲ್ಲ. ಇದನ್ನು ಅರಿತಿದ್ದ ವಿನಯ್ ಅವರು, ಸುಲಭವಾಗಿ ಜೇನು ಸಂಗ್ರಹಿಸುವಂತಹ ಹುತ್ತ ಜೇನು, ತುಡುವೆ, ಮಿಸೆರಿ, ಕೊಲ್ಜೇನು ಸಾಕಾಣಿಕೆ ಮಾಡಿ ಅದರಿಂದ ಜೇನು ಉತ್ಪತ್ತಿ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಜೇನು ಸಂಗ್ರಹವಾಗುವುದು ಕಡಿಮೆ. ಅದರಲ್ಲೂ ಜೇನು ಕೃಷಿಗೂ ಮುನ್ನ ಅದಕ್ಕೆ ಬೇಕಾದ ವಾತಾವರಣ ಸೃಷ್ಟಿ ಮಾಡಬೇಕು. ಸುತ್ತಮುತ್ತ ಹೂಗಿಡಗಳು, ಮಕರಂದ ಇರುವಂತಹ ಬೆಳೆಗಳಿದ್ದರೆ ಜೇನು ಸಂಗ್ರಹಿಸುವುದು ಸುಲಭ. ಇನ್ನು ಮಾಲಿನ್ಯ ರಹಿತ ವಾತಾವರಣದ ಜೊತೆಗೆ ಜೇನು ಹೀರುವ ಕೀಟಗಳಿಂದಲೂ ರಕ್ಷಣೆ ಮಾಡಬೇಕು. ಹಾಗಾಗಿ ವಾರಕ್ಕೊಮ್ಮೆ ಪರೀಕ್ಷೆ ಕಡ್ಡಾಯ. ಇವೆಲ್ಲವನ್ನೂ ಚಾಚೂ ತಪ್ಪದೆ ಪಾಲಿಸುತ್ತಾ ಬಂದಿದ್ದಾರೆ ವಿನಯ್.

"ಯೋಜನೆಯಿದ್ದರೆ ಕೈ ಹಿಡಿವ ಕೃಷಿ"
ವಿನಯ್ ಜೇನು ಕೃಷಿಗೆ ಮನಸೋತ ಸಾಕಷ್ಟು ಪ್ರಗತಿಪರ ರೈತರು, ಆಸಕ್ತರು ಜೇನು ಕೃಷಿ ಕೈಗೊಳ್ಳಲು ಮುಂದಾಗಿದ್ದಾರೆ. ಯಾರ ನೆರವೂ ಇಲ್ಲದೆ, ಎಲ್ಲರ ಗಮನ ಸೆಳೆಯುವಂತೆ ಕೃಷಿ ಮಾಡುತ್ತಾ ಇತರರಿಗೂ ಮಾದರಿಯಾಗಿದ್ದಾರೆ ವಿನಯ್. "ಕೃಷಿಯೊಂದಿಗೆ ಜೇನು ಸಾಕಾಣಿಕೆಯನ್ನೂ ಕೈಗೊಂಡರೆ, ಹೆಚ್ಚುವರಿ ಆದಾಯವನ್ನೂ ಪಡೆಯಬಹುದು. ಆದರೆ ವ್ಯವಸ್ಥಿತವಾಗಿ, ಸೂಕ್ತ ಯೋಜನೆಯೊಂದಿಗೆ ಜೇನು ಕೃಷಿ ಕೈಗೊಳ್ಳಬೇಕು" ಎಂದು ಸಲಹೆ ನೀಡಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications