ಎರಡಾಳೆತ್ತೆರ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ, ಮುಗಿಲು ಮುಟ್ಟಿದ ರೈತನ ಗೋಳು
ಬೆಳಗಾವಿ, ಡಿಸೆಂಬರ್ 01 : ಗೋಕಾಕ ತಾಲೂಕು ಹೂಲಿಕಟ್ಟಿ ಗ್ರಾಮದ ಕಬ್ಬುಬೆಳೆಗಾರ ರತ್ನಪ್ಪ ಕಲ್ಲಪ್ಪ ಗೋಣಿ ಎಂಬುವರು ಹುಲುಸಾಗಿ ಕಬ್ಬು ಬೆಳೆದಿದ್ದರು. ಕಟಾವಿಗೆ ಹತ್ತಿರ ಬಂದಿದ್ದ ಫಸಲು ನೋಡಿ, ಬೆಳೆಗೆಂದು ಮಾಡಿದ್ದ ಸಾಲ ತೀರಿಸಿ ಲಾಭವನ್ನೂ ಗಳಿಸುವ ಉಮೇದಿನಲ್ಲಿದ್ದರು ಆದರೆ ವಿಧಿಯಾಟ ಬೇರೆಯೇ ಇತ್ತು.
ಕಳೆದ ಮಂಗಳವಾರ (ನವೆಂಬರ್ 28) ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದ್ದರಿಂದ ರತ್ನಪ್ಪ ಕಲ್ಲಪ್ಪ ಗೋಣಿ ಎಂಬ ರೈತರ ಸುಮಾರು 13 ಎಕರೆಯಲ್ಲಿ ಜತನದಿಂದ ಬೆಳಿಸಿದ್ದ ಕಟಾವಿಗೆ ಬಂದಿದ್ದ ಕಬ್ಬು ಸಂಪೂರ್ಣ ಸುಟ್ಟುಹೋಗಿದೆ. ತಿಂಗಳಾನುಗಟ್ಟಲೆ ಜತನದಿಂದ ಕಾಪಾಡಿಕೊಂಡು ಬಂದಿದ್ದ ಫಸಲು ರೈತನ ಕಣ್ಣ ಮುಂದೆಯೇ ಕ್ಷಣದಲ್ಲಿ ಉರಿದು ಬೂದಿಯಾಗಿಬಿಟ್ಟಿದೆ.

ಬದುಕಿಗೆಂದು ಬೆಳೆದಿದ್ದ ಕಬ್ಬು ಕಣ್ಣ ಮುಂದೆಯೇ ಬೂದಿಯಾಗಿದ್ದನ್ನು ಕಂಡು ಕುಮುಲಿ ಹೋದ ರೈತ ರತ್ನಪ್ಪ ಕಲ್ಲಪ್ಪ ಗೋಣಿ ಅವರನ್ನು ಗ್ರಾಮಸ್ಥರು ಸಮಾಧಾನ ಪಡಿಸಿ ನ್ಯಾಯ ಕೇಳಲೆಂದು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದಾರೆ. ಆದರೆ ಡಿ.ಸಿ ಸಿಗದ ಕಾರಣ, ಸುಟ್ಟ ಕಬ್ಬನ್ನು ಹಿಡಿದು ಅಲ್ಲೆ ಪ್ರತಿಭಟನೆ ಮಾಡಿ, ಬಲವಂತವಾಗಿ ನೂರಾರು ರೈತರು ಡಿ.ಸಿ ಕಚೇರಿ ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ.
ಕೊನೆಗೆ ಹೊರಬಂದ ಜಿಲ್ಲಾಧಿಕಾರಿಗೆ ದೂರುಗಳ ಸುರಿಮಳೆ ಸುರಿಸಿದ ರೈತರು, ಅನಾಹುತ ಸಂಭವಿಸಿ ಮೂರು ದಿನವಾದರೂ ಸ್ಥಳೀಯ ಗೋಕಾಕ ತಹಶೀಲ್ದಾರ, ಹೆಸ್ಕಾಂ ಅಧಿಕಾರಿಗಳು ಕೊನೆಪಕ್ಷ ಸಕ್ಕರೆ ಕಾರ್ಖಾನೆಗಳು ಸ್ಪಂದಿಸದ ಬಗ್ಗೆ ಅಸಹನೆ ವ್ಯಕ್ತಪಡಿಸಿದ್ದಾರೆ. ಪರಿಹಾರ ನೀಡದಿದ್ದಲ್ಲಿ ಹೆಂಡತಿ ಮಕ್ಕಳೊಂದಿಗೆ ಇಲ್ಲಿಯೇ ವಿಷ ಸೇವಿಸುವುದಾಗಿ ರೈತ ರತ್ನಪ್ಪ ಎಚ್ಚರಿಸಿದ್ದಾರೆ.
ರೈತನನ್ನು ಸಮಾಧಾನಪಡಿಸಿದ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಆತ್ಮಹತ್ಯೆಯ ಎಚ್ಚರಿಕೆ ನೀಡುವುದು ಸೂಕ್ತವಲ್ಲ, ಈ ಹಂತದಲ್ಲಿ ಭಾವೋದ್ವೇಗಕ್ಕೆ ಒಳಗಾಗಬಾರದೆಂದು ತಿಳಿ ಹೇಳಿ ತ್ವರಿತವಾಗಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications