ಭಾರತದಲ್ಲಿ ಸಕ್ಕರೆ ಉತ್ಪಾದನೆ ಅಧಿಕ, ಕರ್ನಾಟಕದಲ್ಲಿ ತುಸು ಕಡಿಮೆ
ಬೆಂಗಳೂರು, ಡಿಸೆಂಬರ್ 02: ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಭಾರತದ ಸಕ್ಕರೆ ಉತ್ಪಾದನೆಯು 47.9 ಲಕ್ಷ ಟನ್ಗಳಿಗೆ ಸ್ವಲ್ಪ ಹೆಚ್ಚಾಗಿದೆ ಎಂದು ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ (ಐಎಸ್ಎಂಎ)ಮಾಹಿತಿ ನೀಡಿದೆ.
ಪ್ರಸಕ್ತ 2022 ಮತ್ತು 2023 ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ ಕಳೆದ ನವೆಂಬರ್ 30 ರವರೆಗೆ ಸಕ್ಕರೆ ಉತ್ಪಾದನೆಯು 47.9 ಲಕ್ಷ ಟನ್ಗಳಾಗಿದೆ. ಕಳೆದ ವರ್ಷದಲ್ಲಿ ಇದೇ ಅವಧಿಗೆ ಹೋಲಿಕೆ ಮಾಡಿದರೆ ಅಂದು 47.2 ಲಕ್ಷ ಟನ್ಗಳಷ್ಟಿತ್ತು. ಸಕ್ಕರೆ ಉತ್ಪಾದನೆಯಲ್ಲಿ ಈ ವರ್ಷ ತುಸು ಏರಿಕೆ ಆಗಿದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘ (ಐಎಸ್ಎಂಎ)ದ ವರದಿ ತಿಳಿಸಿದೆ.
ಈ ವರ್ಷ ಕಾರ್ಯರ್ನಿಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಸಂಖ್ಯೆ 434 ರಷ್ಟಿವೆ. ಕಳೆದ ವರ್ಷ ಕೇವಲ 416ರಷ್ಟು ಕಾರ್ಖಾಣೆಗಳು ಕಬ್ಬನ್ನು ಸಕ್ಕರೆಯನ್ನಾಗಿ ಮಾಡುವ ಕೆಲಸದಲ್ಲಿ ತೊಡಗಿದ್ದವು. ವರದಿಯನ್ನು ಸಮಗ್ರವಾಗಿ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಸಕ್ಕರೆ ಉತ್ಪಾದನೆಯು 2022-23ರ ಮೊದಲ ಎರಡು ತಿಂಗಳಲ್ಲಿ 20 ಲಕ್ಷ ಟನ್ಗಳಷ್ಟಿತ್ತು. ಈ ಹಿಂದಿನ ವರ್ಷದ ಅವಧಿಯಲ್ಲಿ 20.3 ಲಕ್ಷ ಟನ್ಗಳಷ್ಟಿತ್ತು. ಇನ್ನು ಉತ್ತರ ಪ್ರದೇಶದಲ್ಲಿ ಸಕ್ಕರೆ ಉತ್ಪಾದನೆಯು 10.4 ಲಕ್ಷ ಟನ್ಗಳಿಂದ ಈ ವರ್ಷ 11.2 ಲಕ್ಷ ಟನ್ಗಳಿಗೆ ಹೆಚ್ಚಾಗಿದೆ.

ಆದರೆ ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆಯು 12.8 ಲಕ್ಷ ಟನ್ಗಳಿಂದ 12.1 ಲಕ್ಷ ಟನ್ಗಳಿಗೆ ಇಳಿಕೆ ಕಂಡಿದೆ. ಎಲ್ಲ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕೊಂಚ ಕಡಿಮೆಯಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಇದುವರೆಗೆ ಎಥೆನಾಲ್ ಪೂರೈಕೆ ವರ್ಷ 2022-23 ರಲ್ಲಿ ಸುಮಾರು 460 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಕೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಎಥೆನಾಲ್ ಉತ್ಪಾದನೆ, ಪೂರೈಕೆ ವರ್ಷವು ಡಿಸೆಂಬವರೆಗೆ ಕಂಡು ಬರಲಿದೆ.

ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚುವರಿ 139 ಕೋಟಿ ಲೀಟರ್ಗಳ ಅವಶ್ಯಕತೆ ಇದೆ ಎಂದು ಕೇಳಿಕೊಂಡಿವೆ. ಈ ಕುರಿತು ಅಸೋಸಿಯೇನ್ ಮುಂದೆ ಬೇಡಿ ಇಟ್ಟಿತ್ತು. ಆದರೆ ಎಥೆನಾಲ್ ಹಂಚಿಕೆ ಕುರಿತು ಹಾಗೂ ಪ್ರಸ್ತು ಬಿಡ್ಗಳನ್ನು ಪರಿಶೀಲಿಸುವುದಾಗಿ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ (ಐಎಸ್ಎಂಎ) ತಿಳಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications