ಭಾರತದಲ್ಲಿ ಸಕ್ಕರೆ ಉತ್ಪಾದನೆ ಅಧಿಕ, ಕರ್ನಾಟಕದಲ್ಲಿ ತುಸು ಕಡಿಮೆ
ಬೆಂಗಳೂರು, ಡಿಸೆಂಬರ್ 02: ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಭಾರತದ ಸಕ್ಕರೆ ಉತ್ಪಾದನೆಯು 47.9 ಲಕ್ಷ ಟನ್ಗಳಿಗೆ ಸ್ವಲ್ಪ ಹೆಚ್ಚಾಗಿದೆ ಎಂದು ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ (ಐಎಸ್ಎಂಎ)ಮಾಹಿತಿ ನೀಡಿದೆ.
ಪ್ರಸಕ್ತ 2022 ಮತ್ತು 2023 ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ ಕಳೆದ ನವೆಂಬರ್ 30 ರವರೆಗೆ ಸಕ್ಕರೆ ಉತ್ಪಾದನೆಯು 47.9 ಲಕ್ಷ ಟನ್ಗಳಾಗಿದೆ. ಕಳೆದ ವರ್ಷದಲ್ಲಿ ಇದೇ ಅವಧಿಗೆ ಹೋಲಿಕೆ ಮಾಡಿದರೆ ಅಂದು 47.2 ಲಕ್ಷ ಟನ್ಗಳಷ್ಟಿತ್ತು. ಸಕ್ಕರೆ ಉತ್ಪಾದನೆಯಲ್ಲಿ ಈ ವರ್ಷ ತುಸು ಏರಿಕೆ ಆಗಿದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘ (ಐಎಸ್ಎಂಎ)ದ ವರದಿ ತಿಳಿಸಿದೆ.
ಈ ವರ್ಷ ಕಾರ್ಯರ್ನಿಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಸಂಖ್ಯೆ 434 ರಷ್ಟಿವೆ. ಕಳೆದ ವರ್ಷ ಕೇವಲ 416ರಷ್ಟು ಕಾರ್ಖಾಣೆಗಳು ಕಬ್ಬನ್ನು ಸಕ್ಕರೆಯನ್ನಾಗಿ ಮಾಡುವ ಕೆಲಸದಲ್ಲಿ ತೊಡಗಿದ್ದವು. ವರದಿಯನ್ನು ಸಮಗ್ರವಾಗಿ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಸಕ್ಕರೆ ಉತ್ಪಾದನೆಯು 2022-23ರ ಮೊದಲ ಎರಡು ತಿಂಗಳಲ್ಲಿ 20 ಲಕ್ಷ ಟನ್ಗಳಷ್ಟಿತ್ತು. ಈ ಹಿಂದಿನ ವರ್ಷದ ಅವಧಿಯಲ್ಲಿ 20.3 ಲಕ್ಷ ಟನ್ಗಳಷ್ಟಿತ್ತು. ಇನ್ನು ಉತ್ತರ ಪ್ರದೇಶದಲ್ಲಿ ಸಕ್ಕರೆ ಉತ್ಪಾದನೆಯು 10.4 ಲಕ್ಷ ಟನ್ಗಳಿಂದ ಈ ವರ್ಷ 11.2 ಲಕ್ಷ ಟನ್ಗಳಿಗೆ ಹೆಚ್ಚಾಗಿದೆ.

ಆದರೆ ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆಯು 12.8 ಲಕ್ಷ ಟನ್ಗಳಿಂದ 12.1 ಲಕ್ಷ ಟನ್ಗಳಿಗೆ ಇಳಿಕೆ ಕಂಡಿದೆ. ಎಲ್ಲ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕೊಂಚ ಕಡಿಮೆಯಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಇದುವರೆಗೆ ಎಥೆನಾಲ್ ಪೂರೈಕೆ ವರ್ಷ 2022-23 ರಲ್ಲಿ ಸುಮಾರು 460 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಕೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಎಥೆನಾಲ್ ಉತ್ಪಾದನೆ, ಪೂರೈಕೆ ವರ್ಷವು ಡಿಸೆಂಬವರೆಗೆ ಕಂಡು ಬರಲಿದೆ.

ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚುವರಿ 139 ಕೋಟಿ ಲೀಟರ್ಗಳ ಅವಶ್ಯಕತೆ ಇದೆ ಎಂದು ಕೇಳಿಕೊಂಡಿವೆ. ಈ ಕುರಿತು ಅಸೋಸಿಯೇನ್ ಮುಂದೆ ಬೇಡಿ ಇಟ್ಟಿತ್ತು. ಆದರೆ ಎಥೆನಾಲ್ ಹಂಚಿಕೆ ಕುರಿತು ಹಾಗೂ ಪ್ರಸ್ತು ಬಿಡ್ಗಳನ್ನು ಪರಿಶೀಲಿಸುವುದಾಗಿ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ (ಐಎಸ್ಎಂಎ) ತಿಳಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications