ಭಾರತದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಈ ವರ್ಷ ಶೇ.5.1ರಷ್ಟು ಪ್ರಗತಿ
ಬೆಂಗಳೂರು, ಡಿಸೆಂಬರ್ 20: ಭಾರತದಲ್ಲಿ ಈ ವರ್ಷ ಸಕ್ಕರೆ ಉತ್ಪಾದನೆಯೂ ನಿರೀಕ್ಷೆಗೂ ಮೀರಿ ಹೆಚ್ಚಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ. 5.1ರಷ್ಟು ಸಕ್ಕರೆ ಉತ್ಪಾದನೆಯಲ್ಲಿ ಏರಿಕೆ ಆಗಿದೆ.
ಪ್ರಸಕ್ತ 2022-23 ಸಾಲಿನ ಡಿಸೆಂಬರ್ 15 ರವರೆಗೆ ಭಾರತದ ಸಕ್ಕರೆ ಉತ್ಪಾದನೆಯು 82.1 ಲಕ್ಷ ಟನ್ಗಳಷ್ಟು ಆಗಿದೆ. ಇದು ಹಿಂದಿನ ವರ್ಷಕ್ಕಿಂತ (ಶೇ.5.1) ಅಧಿಕವಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ 77.9 ಲಕ್ಷ ಟನ್ಗಳಷ್ಟು ಸಕ್ಕರೆ ಉತ್ಪಾದನೆ ಆಗಿತ್ತು.
ಇದರಿಂದ ಭಾರತ ಒಟ್ಟು ಸುಮಾರು 4 ಲಕ್ಷ ಟನ್ಗಳಷ್ಟು ಉತ್ಪಾದನೆ ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಕ್ಕರೆ ಉತ್ಪಾದನೆಯ ಅಂಕಿಅಂಶಗಳು ಎಥೆನಾಲ್ ಉತ್ಪಾದನೆಗೆ ಪೂರಕವಾಗಿರಲಿದೆ ಎಂದು ಕೈಗಾರಿಕಾ ಸಂಸ್ಥೆ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ (ಐಎಸ್ಎಂಎ) ತಿಳಿಸಿದೆ.

ದೇಶದ ಸಕ್ಕರೆ ಉತ್ಪಾದನೆಯ ರಾಜ್ಯಗಳ ಪೈಕಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ಅಲ್ಲಿ 33 ಲಕ್ಷ ಟನ್ ಸಕ್ಕರೆ ಉತ್ಪಾದಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಮುಂಚೂಣಿ ರಾಜ್ಯವಾಗಿದೆ. ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶವಿದ್ದು, ಆ ರಾಜ್ಯದಲ್ಲಿ 20.3 ಲಕ್ಷ ಟನ್ ಸಕ್ಕರೆ ಉತ್ಪಾದಿಸಲಾಗಿದೆ. ದೇಶದಲ್ಲಿ ಕಬ್ಬಿನಿಂದ ಸಕ್ಕರೆ ತೆಗೆಯುವ ಕಾರ್ಖಾನೆಗಳ ಸಂಖ್ಯೆ ಹೆಚ್ಚಾಗಿದೆ. ಒಟ್ಟು 479 ರಷ್ಟಿದ್ದ ಕಾರ್ಖಾನೆಗಳು 497ಕ್ಕೆ ಹೆಚ್ಚಾಗಿವೆ ಎಂದು ಐಎಸ್ಎಂಎ ಮಾಹಿತಿ ನೀಡಿದೆ.
ಬಂದರು ಮಾಹಿತಿ ಮತ್ತು ಮಾರುಕಟ್ಟೆ ವರದಿಗಳ ಆಧಾರದಲ್ಲಿ ನೋಡುವುದಾದರೆ ಐಎಸ್ಎಂಎ ಭಾರತದ ರಫ್ತು ಒಪ್ಪಂದಗಳನ್ನು 45ರಿಂದ 50 ಲಕ್ಷ ಟನ್ಗಳಿಗೆ ನಿಗದಿಪಡಿಸಿದೆ. 60 ಲಕ್ಷ ಟನ್ಗಳ ಕೋಟಾದ ವಿರುದ್ಧ, ಅದರಲ್ಲಿ 6 ಲಕ್ಷ ಟನ್ ಸಕ್ಕರೆಯನ್ನು ನವೆಂಬರ್ 30 ರವರೆಗೆ ದೇಶದಿಂದ ರವಾನಿಸಲಾಗಿದೆ. ಈ ವರ್ಷ ಕಬ್ಬು ಉತ್ಪಾದನೆಯಲ್ಲಿ ದೇಶದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದರಿಂದ ಸಕ್ಕರೆ ಉತ್ಪಾದನೆ ಏರಿಕೆ ಆಗಿದೆ. ಅಲ್ಲದೇ ಇದು ಎಥೆನಾಲ್ ಉತ್ಪಾದನೆ ಮೇಲೂ ಸಕಾರಾತ್ಮಕ ಪರಿಣಾಮ ಬೀರಲಿದೆ.
ಇನ್ನೂ ಸುಮಾರು 8ರಿಂದ 9 ಲಕ್ಷ ಟನ್ ಸಕ್ಕರೆಯನ್ನು ಡಿಸೆಂಬರ್ನಲ್ಲಿ ರಫ್ತು ಮಾಡಲು ನಿರ್ಧರಿಸಲಾಗಿದೆ. ಆ ಕುರಿತು ಕಾರ್ಯ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ಒಟ್ಟು ರಫ್ತು ಸುಮಾರು 15 ಲಕ್ಷ ಟನ್ಗಳಾಗಬಹುದು ಎಂದು ಕೈಗಾರಿಕಾ ಸಂಸ್ಥೆ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ (ಐಎಸ್ಎಂಎ) ಅಂದಾಜು ಮಾಡಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications