ರೈತರ ಪ್ರತಿಭಟನೆ, ಸುವರ್ಣ ವಿಧಾನಸೌಧಕ್ಕೆ ಲಾರಿ ನುಗ್ಗಿಸಿದ ರೈತರು!
ಬೆಳಗಾವಿ, ನವೆಂಬರ್ 18 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಳಗಾವಿಗೆ ಬರಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರು ಸುವರ್ಣ ವಿಧಾನಸೌಧಕ್ಕೆ ಕಬ್ಬು ತುಂಬಿದ ಲಾರಿಯನ್ನು ನುಗ್ಗಿಸಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದ ರೈತ ಮುಖಂಡರು ಮುಂತ್ರಿಗಳು ಬೆಳಗಾವಿಗೆ ಭೇಟಿ ನೀಡುವ ಭರವಸೆ ಹಿನ್ನಲೆಯಲ್ಲಿ ಧರಣಿ ನಿಲ್ಲಿಸಿದ್ದರು. ನ.19ರಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದರು.
ಆದರೆ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ. ನವೆಂಬರ್ 20ರಂದು ಬೆಂಗಳೂರಿನಲ್ಲಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರ ಜೊತೆ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.

'ಮುಖ್ಯಮಂತ್ರಿಗಳು ಮಾತು ತಪ್ಪಿದ್ದಾರೆ. ಅವರು ಬರುವ ಬದಲು ನಮ್ಮನ್ನು ಬೆಂಗಳೂರಿಗೆ ಬರುವಂತೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರೈತ ವಿರೋಧ ಧೋರಣೆ ಅನುಸರಿಸುತ್ತಿದ್ದಾರೆ. ಹೀಗಾಗಿ ಅವರು ಇಲ್ಲಿಗೆ ಬರುವ ತನಕ ಪ್ರತಿಭಟನೆ ನಡೆಸುತ್ತೇವೆ' ಎಂದು ರೈತರು ಘೋಷಣೆ ಹೇಳಿದ್ದಾರೆ.
ರೈತ ಮುಖಂಡ ಅಶೋಕ ಯಮಕನಮರಡಿ ನೇತೃತ್ವದಲ್ಲಿ ಕೆಲವು ರೈತರು 5 ಕಬ್ಬು ತುಂಬಿದ ಲಾರಿಗಳನ್ನು ಸುವರ್ಣವಿಧಾನಸೌಧಕ್ಕೆ ನುಗ್ಗಿಸಿದರು. ಇದನ್ನು ತಡೆಯಲು ಮುಂದಾದ ಪೊಲೀಸರು ಜೊತೆಯೂ ರೈತರು ಮಾತಿನ ಚಕಮಕಿ ನಡೆಸಿದರು.
ರೈತರ ಬಂಧನ : ಸುವರ್ಣ ವಿಧಾನಸೌಧಕ್ಕೆ ಕಬ್ಬು ತುಂಬಿದ ಲಾರಿಯನ್ನು ನುಗ್ಗಿಸಿದ ರೈತರನ್ನು ಪೊಲೀಸರು ಬಂಧಿಸಿದರು. ರೈತರ ವಿರುದ್ಧ ಪ್ರಕರಣವನ್ನು ದಾಖಲು ಮಾಡಿಕೊಳ್ಳಲು ಪೊಲೀಸರು ಚಿಂತನೆ ನಡೆಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications