ಕಬ್ಬಿನ ದರ ನಿಗದಿಗಾಗಿ ಸಚಿವರ ಮನೆ ಮುಂದೆ ರೈತರಿಂದ ಪ್ರತಿಭಟನೆ
ಮೈಸೂರು, ಡಿಸೆಂಬರ್ 27 : ಬಣ್ಣಾರಿ ಹಾಗೂ ಮಹದೇಶ್ವರ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿಗೆ ಕಬ್ಬು ದರ ನಿಗದಿ ಹಾಗೂ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ ಕೊಡಿಸಲು ಒತ್ತಾಯಿಸಿ ರೈತರು ಸೋಮವಾರ ಸಚಿವ ಮಹದೇವಪ್ರಸಾದ್ ಅವರ ಮನೆ ಮುಂದೆ ಕಬ್ಬು ಹಿಡಿದು ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಕಬ್ಬು ದರ ನಿಗದಿಗೊಳಿಸುವಂತೆ ಒತ್ತಾಯಿಸಿದರು.[ಕಬ್ಬು ಬೆಳೆ ಇಳಿಕೆ, ಸಕ್ಕರೆ ಬೆಲೆ ಭಾರೀ ಏರಿಕೆ ಸಂಭವ]

ಮೈಸೂರು ಜಿಲ್ಲೆಯ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಕಬ್ಬಿನ ದರವನ್ನು ಕಳೆದ ವರ್ಷಕ್ಕಿಂತ ಕಡಿಮೆ ಪಾವತಿಸುತ್ತಿದ್ದಾರೆ. ಪ್ರಸ್ತುತ ಸಕ್ಕರೆ ಬೆಲೆ ಕ್ವಿಂಟಲ್ ಗೆ ರು 4 ಸಾವಿರ ಏರಿಕೆಯಾಗಿದ್ದರೂ, ಪರಿಗಣಿಸದೆ ರೈತರಿಗೆ ದ್ರೋಹ ಎಸಗಿದ್ದಾರೆ. ಕಬ್ಬು ಕಟಾವು, ಸಾಗಣಿಕೆ ವೆಚ್ಚ ಕಳೆದು ಟನ್ನಿಗೆ ರು 1,700 ರೂ. ಮಾತ್ರ ಲಭಿಸುತ್ತಿದೆ. ಕಬ್ಬಿನ ದರ 2016-17ನೇ ಸಾಲಿಗೆ 9.5 ಇಳುವರಿಗೆ ರು.3,000 ನಿಗದಿಪಡಿಸಬೇಕೆಂದು ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದ್ದರೂ ಸರಕಾರ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.[ಕಬ್ಬು ಬೆಳೆಗಾರರ ಸಮಸ್ಯೆ, ಸಿದ್ದರಾಮಯ್ಯ ಕೊಟ್ಟ ಉತ್ತರ]

ಕಬಿನಿ ಅಚ್ಚುಕಟ್ಟು ಭಾಗದಲ್ಲಿ ಭತ್ತದ ಬೆಳೆ ಒಣಗಿ ಹೋಗಿ ನಷ್ಟ ಸಂಭವಿಸಿದೆ. ಸರಕಾರ ವಿಶೇಷ ಯೋಜನೆ ರೂಪಿಸಿ ಎಕರೆಗೆ ಕನಿಷ್ಠ ರು. 25,000 ಬೆಳೆ ನಷ್ಟ ಕೊಡಿಸಬೇಕು. ಯಳಂದೂರು, ಕೊಳ್ಳೇಗಾಲ, ಚಾಮರಾಜನಗರ ತಾಲೂಕಿನ ರೈತರಿಗೆ ನಾಲೆಗಳಲ್ಲಿ ನೀರು ಹರಿಸದ ಕಾರಣ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಬೇಕು. ನೋಟ್ ನಿಷೇಧದ ನಂತರ ಕೃಷಿ ಉತ್ಪನ್ನಗಳ ಬೆಲೆಗಳು ಕುಸಿದಿದ್ದು, ಸಹಕಾರಿ ಕ್ಷೇತ್ರದ ಎಲ್ಲ ಕೃಷಿ ಸಾಲಗಳನ್ನು ಶೀಘ್ರವೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
-
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications