ಒಂದು ವಾರದಲ್ಲಿ ಕಬ್ಬಿಗೆ ದರ ನಿಗದಿ, ಸಚಿವ ಮುನೇನಕೊಪ್ಪ ಭರವಸೆ
ಬೆಂಗಳೂರು, ಅಕ್ಟೋಬರ್, 21: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಿಕ್ಕಟ್ಟು ಮತ್ತಷ್ಟು ಮುಂದುವರೆದಿದೆ. ರೈತ ಸಂಘಟನೆಗಳ ಗಡುವು ಮುಗಿದಿದೆ. ಸರ್ಕಾರ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ರಾಜ್ಯದ ಇತರೆ ರೈತ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ ಚರ್ಚಿಸುವ ಮೂಲಕ ಪ್ರಬಲ ಹೋರಾಟ ರೂಪಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ. ಸಭೆ ನಡೆಸಿ ಒಂದು ವಾರದಲ್ಲಿಯೇ ಕಬ್ಬಿಗೆ ದರವನ್ನು ನಿಗದಿ ಮಾಡಲಾಗುವುದು ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿದರು.
ಒಂದು ವಾರದ ಒಳಗಾಗಿ ಬೆಲೆ ನಿಗದಿ
ವಿಕಾಸಸೌಧ ನಾಲ್ಕನೇ ಮಹಡಿಯಲ್ಲಿ ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿಯಿಂದ ಸಭೆಯನ್ನು ನಡೆಸಲಾಗಿದೆ. ದರ ನಿಗದಿ ಸಮಸ್ಯೆಗಳ ಬಗ್ಗೆ ಚಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ಎಫ್ಆರ್ಪಿ ದರ ನಿಗದಿ ಆದೇಶಕ್ಕೆ ಅನುಮೋದನೆ ನೀಡುವಂತೆ ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸಭೆಯಲ್ಲಿ ಮಂಡಿಸಿದರು. ಆಗ ರೈತ ಪ್ರತಿನಿಧಿಗಳು ಒಕ್ಕೂರಲಿನಿಂದ ಅನುಮೋದನೆಗೆ ವಿರೋಧ ವ್ಯಕ್ತಪಡಿಸಿದರು. ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆ ಆಗಿರುವ ಕಾರಣ ಬೆಲೆ ಹೆಚ್ಚುವರಿಯಾಗಿ ನಿಗದಿ ಮಾಡಬೇಕು ಎಂದರು. ಆಗ ಸಕ್ಕರೆ ಸಚಿವರು ಮಾತನಾಡಿ, ಒಂದು ವಾರದ ಒಳಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಂಡಳಿ ಸಭೆ ನಡೆಸಿ ರೈತರಿಗೆ ಉತ್ತಮವಾದ ದರವನ್ನು ನೀಡೋಣ ಎಂದರು.

ರೈತರಿಗೆ ಆಗುತ್ತಿರುವ ಮೋಸದ ಬಗ್ಗೆ ಕ್ರಮ
ನಂತರ ಪ್ರತಿಕ್ರಿಯಿಸಿದ ಕುರುಬೂರು ಶಾಂತಕುಮಾರ್, ತಾವು ಪದೇ ಪದೇ ಸಭೆ ನಡೆಸಿ ದರ ನಿಗದಿ ಮುಂದೂಡುವುದು ಸರಿಯಲ್ಲ. ನಾಳೆ ರಾಜ್ಯದ ಇತರೆ ರೈತ ಸಂಘಟನೆಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ. ಸಂಘಟಿತ ಪ್ರಬಲ ಹೋರಾಟ ನಡೆಸುವ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಆಗ ಸಚಿವರು ಮತ್ತೆ ಮಾತನಾಡಿ, ಮುಖ್ಯಮಂತ್ರಿಯವರು ಉತ್ತಮ ದರ ನಿಗದಿಗೆ ಒಪ್ಪಿದ್ದಾರೆ. ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳಲು ಅವಕಾಶ ಕೊಡಿ. ಕಟಾವು ಸಾಗಾಣಿಕೆ ವೆಚ್ಚ, ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ, ಸಕ್ಕರೆ ಇಳುವರಿ, ತೊಕದಲ್ಲಿ ಮೋಸವನ್ನು ತಪ್ಪಿಸುವ ಬಗ್ಗೆ ಅಯಾ ಜಿಲ್ಲಾಧಿಕಾರಿಗಳ ಸಹಯೋಗದೊಂದಿಗೆ ಕಬ್ಬು ಅಭಿವೃದ್ಧಿ ಆಯುಕ್ತರು ಸಭೆ ನಡೆಸುತ್ತಾರೆ. ಈ ಮೂಲಕ ಸಮಸ್ಯೆ ಬಗೆಹರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಕೇರಿ ಹಾಗೂ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್










Click it and Unblock the Notifications