ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೂರಿಯಾ ರಸಗೊಬ್ಬರ ಬಳಕೆಗೆ ರೈತರಿಗೆ ಸಲಹೆಗಳು

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ದಾವಣಗೆರೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಯೂರಿಯಾ ಹಾಗೂ ಇನ್ನಿತರ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ.

ಕೃಷಿ ಇಲಾಖೆ ಜಿಲ್ಲೆಯಲ್ಲಿ ಪ್ರಮುಖವಾಗಿ ಖುಷ್ಕಿಯಲ್ಲಿ ಬೆಳೆಯಲಾಗುತ್ತಿರುವ ಮುಸುಕಿನ ಜೋಳದ ಬೆಳೆಗೆ ಪ್ರತಿ ಎಕರೆಗೆ 25 ಕೆಜಿ ಯೂರಿಯಾ ಮಾತ್ರವೇ ಮೇಲುಗೊಬ್ಬರವಾಗಿ ಬಳಕೆ ಮಾಡಬೇಕು. ರೈತರು ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರವನ್ನು ದಯವಿಟ್ಟು ಬಳಕೆ ಮಾಡಬೇಡಿ ಎಂದು ಸಲಹೆ ನೀಡಿದೆ.

ಕೃಷಿಗೆ ಚಟುವಟಿಕೆಗೆ ವಿನಾಯಿತಿ: ಗೊಬ್ಬರ ಮಾರಾಟ ಶೇ.45 ರಷ್ಟು ಹೆಚ್ಚಳ ಕೃಷಿಗೆ ಚಟುವಟಿಕೆಗೆ ವಿನಾಯಿತಿ: ಗೊಬ್ಬರ ಮಾರಾಟ ಶೇ.45 ರಷ್ಟು ಹೆಚ್ಚಳ

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತರು ರಸಗೊಬ್ಬರಗಳನ್ನು ಖರೀದಿ ಮಾಡಬೇಕು. ರಸಗೊಬ್ಬರ ಖರೀದಿ ಮಾಡುವಾಗ ಗರಿಷ್ಠ ಚಿಲ್ಲರೆ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು ಎಂದು ಸೂಚಿಸಲಾಗಿದೆ.

ರಸಗೊಬ್ಬರ ಖರೀದಿಸುವ ರೈತರಿಗೆ ಸಲಹೆಗಳು ರಸಗೊಬ್ಬರ ಖರೀದಿಸುವ ರೈತರಿಗೆ ಸಲಹೆಗಳು

Suggestion To Farmers For Use Of Urea Fertilizer

ಯಾರಾದರೂ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಥವಾ ಬೇಕಾಗಿರುವ ರಸಗೊಬ್ಬರದ ಜೊತೆ ಬೇರೆ ಪರಿಕರಗಳನ್ನು ಕಡ್ಡಾಯವಾಗಿ ಖರೀದಿ ಮಾಡಲೇಬೇಕೆಂದು ರೈತರನ್ನು ಒತ್ತಾಯಿಸಿದರೆ ದೂರು ನೀಡಲು ಮನವಿ ಮಾಡಲಾಗಿದೆ.

ಕೊರೊನಾ: ರೈತರಿಗೆ ಕಳಪೆ ಬೀಜ, ರಾಸಾಯನಿಕ ಗೊಬ್ಬರ ವಿತರಿಸಿದರೆ ಜೈಲುಕೊರೊನಾ: ರೈತರಿಗೆ ಕಳಪೆ ಬೀಜ, ರಾಸಾಯನಿಕ ಗೊಬ್ಬರ ವಿತರಿಸಿದರೆ ಜೈಲು

ಕೃಷಿ ಇಲಾಖೆಯ ವಿಚಕ್ಷಣಾ ದಳದ ಅಧಿಕಾರಿಗಳಿಗೆ ರೈತರು ದೂರು ನೀಡಬಹುದು. ದೂರು ನೀಡಲು ದೂರವಾಣಿ ಸಂಖ್ಯೆ 8277931207.

ರೈತರು ಸಂಬಂಧಿಸಿದ ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

English summary
Agriculture department suggestion for farmers to use urea fertilizer for crops. Don't pay more for fertilizer in the market department requested the farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X