ಸೂರ್ಯಕಾಂತಿಗೆ ಬೆಂಬಲ ಬೆಲೆ: ಗುಂಡ್ಲೆಪೇಟೆಯಲ್ಲಿ ಮೊದಲ ದಿನವೇ ನೋಂದಣಿಗೆ ಮುಗಿಬಿದ್ದ ರೈತರು
ಚಾಮರಾಜನಗರ, ಸೆಪ್ಟೆಂಬರ್, 02: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಎಪಿಎಂಸಿ ಕಚೇರಿ ಹಾಗೂ ತೆರಕಣಾಂಬಿ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಗೆ ಹೆಸರು ನೋಂದಣಿ ಕಾರ್ಯ ಇಂದಿನಿಂದ (ಸೆಪ್ಟೆಂಬರ್ 2) ಆರಂಭ ಆಗಿದ್ದು, ರೈತರು ಮುಗಿಬಿದ್ದು ತಮ್ಮ ತಮ್ಮ ಹೆಸರುಗಳನ್ನು ನೋಂದಾಯಿಸಿದರು.
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಈಗಾಗಲೇ ಸೂರ್ಯಕಾಂತಿ ಒಕ್ಕಣೆ ಮಾಡಿ ಶೇಖರಿಸಿಟ್ಟಿರುವ ಸೂರ್ಯಕಾಂತಿ ಬೆಳೆಗಾರರು ಕೃಷಿ ಮಾರಾಟ ಇಲಾಖೆ ಹಾಗೂ ಕೃಷಿ ಮಾರಾಟ ಮಂಡಳಿ ವತಿಯಿಂದ ಸೂರ್ಯಕಾಂತಿ ಖರೀದಿಗೆ ಹೆಸರು ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಅರಿತು ಎಪಿಎಂಸಿ ಕಚೇರಿ ಹಾಗೂ ತೆರಕಣಾಂಬಿ ಮಾರುಕಟ್ಟೆ ಮುಂದೆ ಜಮಾಯಿಸಿದ್ದರು.

ನಂತರ ಸರತಿ ಸಾಲಿನಲ್ಲಿ ನಿಂತು ಆರ್ಟಿಸಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಇತರೆ ದಾಖಲೆಗಳನ್ನು ನೀಡಿ ಹೆಸರು ನೋಂದಾಯಿಸಿಕೊಂಡರು. ಸೋಮವಾರ ನೋಂದಣಿಯ ಮೊದಲ ದಿನವಾದ ಹಿನ್ನೆಲೆ ರೈತರು ಮುಗಿಬಿದ್ದರು. ಮಹಿಳಾ ರೈತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಲ್ಲದ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ಈ ಸಂಬಂಧ ಎಪಿಎಂಸಿ ಕಾರ್ಯದರ್ಶಿ ಶ್ರೀಧರ್ ಪ್ರತಿಕ್ರಿಯೆ ನೀಡಿ, ಸೂರ್ಯಕಾಂತಿ ಮಾರುಕಟ್ಟೆ ಬೆಲೆ ಕುಸಿದಿರುವ ಹಿನ್ನೆಲೆ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ ಕ್ವಿಂಟಾಲ್ ಸೂರ್ಯಕಾಂತಿಯನ್ನು 7,280 ರೂಪಾಯಿ ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಪ್ರತಿ ಹೆಕ್ಟೇರ್ಗೆ 3 ಕ್ವಿಂಟಾಲ್ ಮತ್ತು ಗರಿಷ್ಟ 15 ಕ್ವಿಂಟಾಲ್ವರೆಗೆ ಖರೀದಿ ಮಾಡಲಾಗುತ್ತಿದೆ.
ಮೊದಲ ದಿನವಾದ ಸೋಮವಾರ ಸುಮಾರು 200ಕ್ಕೂ ಅಧಿಕ ಮಂದಿ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಉಳಿದ ರೈತರು ಕಚೇರಿಗೆ ಆಗಮಿಸಿ ನೋಂದಣಿಯಾಗುವ ಮೂಲಕ ಎಂಎಸ್ಪಿ ಅಡಿಯಲ್ಲಿ ಸೂರ್ಯಕಾಂತಿ ಮಾರಾಟ ಮಾಡಬೇಕೆಂದು ತಿಳಿಸಿದರು.
ಕಾಡಾನೆ ದಾಳಿಗೆ ಫಸಲು, ಕೃಷಿ ಉಪಕರಣ ಧ್ವಂಸ: ಕಾಡಾನೆಗಳ ಹಿಂಡು ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಫಸಲು ಮತ್ತು ಕೃಷಿ ಉಪಕರಣಗಳನ್ನು ತುಳಿದು ನಾಶ ಪಡಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ವಲಯ ವ್ಯಾಪ್ತಿಯ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಕೋಟೆಕೆರೆ ಗ್ರಾಮದ ಮಹಾದೇವಸ್ವಾಮಿ ಎಂಬುವವರ 3 ಹೆಕ್ಟೇರ್ ಜಮೀನಿನಲ್ಲಿ ಬೆಳೆದಿದ್ದ ಜೋಳ, 5 ತೆಂಗಿನ ಸಸಿಗಳು ಮತ್ತು ಪೈಪ್ ಲೈನ್ ತುಳಿದು ಹಾಕಿವೆ. ವೆಂಕಟರಾಮಯ್ಯ ಎಂಬ ರೈತನ ಜಮೀನಿನಲ್ಲಿ ಟೊಮೆಟೊ ಹಾಗೂ ಚೆನ್ನನಾಯಕ ಎಂಬುವವರ ಜಮೀನಿನಲ್ಲಿದ್ದ ಬೋರ್ ವೆಲ್ ಮತ್ತು ಇತರೆ ಕೃಷಿ ಉಪಕರಣಗಳನ್ನು ತುಳಿದು ನಾಶಪಡಿಸಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಸೂಕ್ತ ಪರಿಹಾರಕ್ಕೆ ಒತ್ತಾಯ: ಕೋಟೆಕೆರೆ ಗ್ರಾಮದ ಮೂವರು ರೈತರ ಜಮೀನುಗಳ ಮೇಲೆ ಕಾಡಾನೆಗಳು ಲಗ್ಗೆಯಿಟ್ಟು ಫಸಲು ಮತ್ತು ಕೃಷಿ ಉಪಕರಣಗಳನ್ನು ನಾಶ ಪಡಿಸಿರುವ ಹಿನ್ನೆಲೆ ರೈತರಿಗೆ ಅಪಾರ ನಷ್ಟ ಸಂಭವಿಸಿದೆ. ಆದ್ದರಿಂದ ಸಂಬಂಧಪಟ್ಟ ಓಂಕಾರ್ ವಲಯದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಶೀಘ್ರವಾಗಿ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಮಾಲೀಕರು ಒತ್ತಾಯಿಸಿದ್ದಾರೆ.
ಆನೆಗಳ ಹಾವಳಿಗೆ ಕಡಿವಾಣ ಹಾಕಿ: ಓಂಕಾರ್ ವಲಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ರೈತರು ಬೆಳೆದ ಫಸಲುಗಳ ಮೇಲೆ ಕಾಡಾನೆಗಳ ಹಿಂಡು ನಿರಂತರವಾಗಿ ದಾಳಿ ನಡೆಸಿ ತುಳಿದು ತಿಂದು ನಾಶ ಪಡಿಸುತ್ತಿದೆ. ಇದರ ಮಾಹಿತಿ ಇದ್ದರೂ ಕೂಡ ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಕೂಡಲೇ ಎಚ್ಛೆತ್ತುಕೊಂಡು ಆನೆಗಳ ಹಾವಳಿಗೆ ಕಡಿವಾಣ ಹಾಕದಿದ್ದರೆ, ಅರಣ್ಯ ಕಚೇರಿಗೆ ಮುತ್ತಿಗೆ ಹಾಕುವುದಾಗಿ ರೈತ ಸಂಘಟನೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications