ರೈತರಿಗೆ ಮೊದಲ ಜಯ, ಕೃಷಿ ಕಾಯ್ದೆಗಳಿಗೆ ತಡೆ ನೀಡಲು ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ, ಜನವರಿ 11: ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹಲವು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ರೈತ ಒಕ್ಕೂಟಗಳಿಗೆ ಮೊದಲ ಜಯ ದೊರಕಿದೆ. ಕೃಷಿ ಕಾಯ್ದೆಗಳ ಜಾರಿಗೆ ಸುಪ್ರೀಂಕೋರ್ಟ್ ತಡೆ ನೀಡಲು ಮುಂದಾಗಿದೆ. ಇದರಿಂದ ಕೃಷಿ ಕಾಯ್ದೆಗಳ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ.
ಕೃಷಿ ಕಾಯ್ದೆಗಳ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೃಷಿ ಕಾಯ್ದೆಗಳಿಗೆ ನೀವು ತಡೆ ನೀಡುತ್ತೀರೋ, ಅಥವಾ ನಾವೇ ತಡೆ ನೀಡಬೇಕೋ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತು. ಅಲ್ಲದೆ, ಈ ಕಾಯ್ದೆಗಳ ಒಳಿತು ಕೆಡಕುಗಳ ಬಗ್ಗೆ ಚರ್ಚಿಸಲು ಸಮಿತಿಯೊಂದನ್ನು ರಚಿಸುವಂತೆ ಆದೇಶಿಸಿತು.
ಕೃಷಿ ಕಾಯ್ದೆಗಳು ಒಳ್ಳೆಯವು ಎಂದು ಹೇಳುವ ಒಂದೇ ಒಂದು ಅರ್ಜಿ ಕೂಡ ಇದುವರೆಗೂ ದಾಖಲಾಗಿಲ್ಲ. ಕೆಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃದ್ಧರು, ಮಹಿಳೆಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಏನಾಗುತ್ತಿದೆ ಇಲ್ಲಿ? ಎಂದು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಪ್ರಶ್ನಿಸಿದರು.
ಇಲ್ಲಿ ಯಾವ ಮಾತುಕತೆಗಳು ನಡೆಯುತ್ತಿವೆಯೋ ನಮಗೆ ಗೊತ್ತಿಲ್ಲ. ಕೆಲವು ಸಮಯದವರೆಗೆ ಕೃಷಿ ಕಾಯ್ದೆಗಳನ್ನು ತಡೆಹಿಡಿಯಬಹುದೇ? ಎಂದು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ ರಮಣ ಅವರನ್ನು ಒಳಗೊಂಡ ನ್ಯಾಯಪೀಠ ಪ್ರಶ್ನಿಸಿತು. ಮುಂದೆ ಓದಿ.

ಕೇಂದ್ರದಿಂದ ನಿರಾಶೆಯಾಗಿದೆ
ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿಜೆಐ ಬೊಬ್ಡೆ, 'ನಾವು ಕಠೋರ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ. ಆದರೆ ಕೇಂದ್ರದ ಬಗ್ಗೆ ತೀವ್ರ ನಿರಾಶೆಯಾಗಿದೆ. ಯಾವ ರೀತಿಯ ಸಮಾಲೋಚನೆ ಪ್ರಕ್ರಿಯೆ ನಡೆಸಲಾಗಿದೆಯೋ ಗೊತ್ತಿಲ್ಲ. ಏನಾಗುತ್ತಿದೆ ಎಂದು ನಮಗೆ ದಯವಿಟ್ಟು ಹೇಳಿ' ಎಂದು ತೀಕ್ಷ್ಣವಾಗಿ ಹೇಳಿದರು.

ಏಕೆ ಪ್ರತಿಕ್ರಿಯೆ ಇಲ್ಲ
'ನಮ್ಮ ಉದ್ದೇಶ ಸೌಹಾರ್ದಯುತ ಪರಿಹಾರ ತರುವುದು. ಕಾನೂನುಗಳನ್ನು ಅಮಾನತುಗೊಳಿಸುವ ಸಲಹೆಗೆ ಏಕೆ ಪ್ರತಿಕ್ರಿಯೆ ಇಲ್ಲ? ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳ ಜಾರಿಯನ್ನು ಸ್ಥಗಿತಗೊಳಿಸಿದರೆ, ಚರ್ಚೆಗೆ ಕೂರುವಂತೆ ರೈತರಿಗೆ ನಾವು ಸೂಚಿಸುತ್ತೇವೆ' ಎಂದರು.

ನೀವು ತಡೆ ನೀಡುತ್ತೀರೋ? ನಾವೇ ಮಾಡುವುದೋ?
'ನೀವು ಕೃಷಿ ಕಾಯ್ದೆಗಳನ್ನು ತಡೆಹಿಡಿಯುತ್ತೇವೆ ಎಂದು ಹೇಳಿ. ಇಲ್ಲವೇ ನ್ಯಾಯಾಲಯ ಅದನ್ನು ಮಾಡುತ್ತದೆ' ಎಂದು ಮುಖ್ಯ ನ್ಯಾಯಮೂರ್ತಿ, ಪ್ರತಿಭಟನೆ ಸ್ಥಳದಲ್ಲಿ ಸಾವುಗಳಾಗಿವೆ ಮತ್ತು ಆತ್ಮಹತ್ಯೆಗಳು ಆಗಿವೆ. ,ಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ' ಎಂದು ತಿಳಿಸಿದರು.

ರೈತರಿಗೆ ಪ್ರತಿಭಟನೆ ಹಕ್ಕಿದೆ
ಜನರಿಗೆ ತೀವ್ರ ತೊಂದರೆಗಳಾಗುತ್ತಿರುವುರಿಂದ ಕಾನೂನು ಜಾರಿಯನ್ನು ತಡೆದ ಬಳಿಕ ಪ್ರತಿಭಟನೆ ನಡೆಯುತ್ತಿರುವ ಜಾಗವನ್ನು ಬದಲಿಸಬಹುದೇ ಎಂದು ಸುಪ್ರೀಂಕೋರ್ಟ್ ಕೇಳಿತು. ಸುಪ್ರೀಂಕೋರ್ಟ್ ಪ್ರತಿಭಟನೆಯನ್ನು ತಡೆಯುತ್ತಿಲ್ಲ. ನಾವು ಪ್ರತಿಭಟನಾ ಸ್ಥಳದ ಬದಲಾವಣೆ ಬಗ್ಗೆ ಮಾತ್ರ ಪ್ರಸ್ತಾಪಿಸುತ್ತಿದ್ದೇವೆ ಎಂದು ಹೇಳಿತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications