ದೀಪಾವಳಿ ನಂತರ ಕಾವೇರಿ ಹಂಚಿಕೆ ವಿಚಾರಣೆ: ಸುಪ್ರೀಂಕೋರ್ಟ್
ನವದೆಹಲಿ, ನ.02: ಕರ್ನಾಟಕದಲ್ಲಿ ಸರಿಯಾಗಿ ಮಳೆ ಕಾಣದೆ ರೈತರು ಸಾಲ ಮಾಡಿ, ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆಗೀಡಾಗುತ್ತಿರುವ ನೋವಿನ ಸಂದರ್ಭದಲ್ಲೇ ತಮಿಳುನಾಡಿನಿಂದ ಕಹಿ ಸುದ್ದಿ ಬಂದಿದೆ. ಕರ್ನಾಟಕದಿಂದ ನಮ್ಮ ಪಾಲಿನ ನೀರು ಕೊಡಿಸಿ ಎಂದು ಸುಪ್ರೀಂಕೋರ್ಟಿಗೆ ಜಯಲಲಿತಾ ಅವರ ಸರ್ಕಾರ ಮೊರೆ ಹೊಕ್ಕಿದೆ.
ತಮಿಳುನಾಡು ಸರ್ಕಾರ 53 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಬೇಕು ಎಂದು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದೆ. ತಮಿಳುನಾಡಿನ ಸುಮಾರು 15 ಲಕ್ಷ ಎಕರೆ ಜಮೀನು ಹಾಗೂ 40 ಲಕ್ಷಕ್ಕೂ ಅಧಿಕ ಮಂದಿಗೆ ನೀರಿನ ಅಗತ್ಯ ಹೆಚ್ಚಾಗಿದೆ.

ಜನವರಿ 2015ರ ತನಕ ತಮಿಳುನಾಡಿನ ರೈತರು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿರುತ್ತಾರೆ. ವರ್ಷಕ್ಕೆ ಮೂರು ಬಾರಿ ಮುಂಗಾರು-ಹಿಂಗಾರು ಮಳೆ ಆಟದೊಡನೆ ಗುದ್ದಾಡಬೇಕಾಗುತ್ತದೆ. ಸರಿಯಾದ ಪ್ರಮಾಣದಲ್ಲಿ ಮಳೆಯಾಗದ ಕಾರಣ ಮೆಟ್ಟೂರು ಅಣೆಕಟ್ಟಿನಲ್ಲಿರುವ ನೀರಿನ ಸಂಗ್ರಹ ರೈತರಿಗೆ ಒದಗಿಸಲು ಸಾಕಾಗುತ್ತಿಲ್ಲ ಎಂದು ತನ್ನ ಅರ್ಜಿಯಲ್ಲಿ ಹೇಳಿಕೊಂಡಿದೆ.
ತಮಿಳುನಾಡು ಸರ್ಕಾರದ ಅರ್ಜಿಯನ್ನು ಸ್ವೀಕರಿಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರಿರುವ ನ್ಯಾಯಪೀಠ, ದೀಪಾವಳಿ ಹಬ್ಬದ ಬಳಿಕ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ. ದೀಪಾವಳಿ ಹಬ್ಬದ ವೇಳೆ ಸಾಲು ಸಾಲು ರಜೆಗಳಿರುವುದರಿಂದ ಈಗ ವಿಚಾರಣೆ ತ್ವರಿತವಾಗಿ ನಡೆಸಲು ಸಾಧ್ಯವಿಲ್ಲ ಎನ್ನಲಾಗಿದೆ.
ಮಳೆ ಕೊರತೆಯ ನಡುವೆ ಕರ್ನಾಟಕ ಸರ್ಕಾರ ಹೊಸ ಹೊಸ ನೀರಾವರಿ ಯೋಜನೆ ಘೋಷಿಸುತ್ತಿರುವುದಕ್ಕೆ ತಮಿಳುನಾಡು ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ. ಕಾವೇರಿ ನ್ಯಾಯಾಧಿಕರಣ ನೀಡಿರುವ ತೀರ್ಪಿನ ಅನ್ವಯ ಯೋಜನೆಗಳನ್ನು ಜಾರಿಗೊಳಿಸುವುದು ಹಾಗೂ ನೀರು ಹಂಚಿಕೆಯ ಮೇಲೆ ನಿಗಾ ವಹಿಸಲು ಮೇಲುಸ್ತುವಾರಿ ಸಮಿತಿ ನೇಮಿಸುವಂತೆ ತಮಿಳುನಾಡು ಕೋರಿದೆ. (ಒನ್ ಇಂಡಿಯಾ ಸುದ್ದಿ)
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications