17 ಕೆ.ಜಿ ಟೊಮೆಟೊಗೆ 3 ರೂ! ಉಚಿತವಾಗಿ ಹಂಚಿದ ದೊಡ್ಡೇರಿ ರೈತ
ಬೆಂಗಳೂರು, ಮೇ 22: ಮೊನ್ನೆ ಮೊನ್ನೆಯಷ್ಟೇ ಚಿತ್ರದುರ್ಗದಲ್ಲಿ ಇಂಥದ್ದೇ ಸಂಗತಿ ನಡೆದಿತ್ತು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದ ರೈತ ಲಕ್ಷ್ಮಣ್ ಸುಮಾರು ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಟೊಮೆಟೊ ಬೆಳೆದಿದ್ದು, ಕೋಲಾರ ಎಪಿಎಂಸಿಗೆ ಅದನ್ನು ಕೊಂಡೊಯ್ದಾಗ ಬರೀ ಹತ್ತು ರೂ ಲಾಭ ಸಿಕ್ಕಿತ್ತು.
ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಸಾವಿರಾರು ರೈತರ ಪಾಡು ಹೀಗೇ ಆಗಿದೆ. ಕೆಲವು ರೈತರು ತೋಟಗಳಲ್ಲಿ ಬೆಳೆಗಳನ್ನು ಹಾಗೇ ಬಿಡುತ್ತಿದ್ದರೆ, ಬೆಳೆಗಳನ್ನು ಕಟಾವು ಮಾಡಿದ ರೈತರು ಮಾರುಕಟ್ಟೆಗೆ ಸಾಗಿಸಲೂ ಆಗದೇ, ಸಾಗಿಸಿದರೂ ಸೂಕ್ತ ಬೆಲೆ ಸಿಗದೇ ಒದ್ದಾಡುವಂತಾಗಿದೆ. ಬೆಳೆಗಳಿಗೆ ಸಿಗುತ್ತಿರುವ ಪುಡಿಗಾಸು ನೋಡಿ ಮಾರುಕಟ್ಟೆಗೆ ಹೋಗುವುದೇ ಬೇಡ ಎಂದು ಕೆಲವು ರೈತರು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನ ತಾವರೆಕೆರೆ ದೊಡ್ಡೇರಿ ರೈತರ ಕಥೆಯೂ ಹೀಗೇ ಆಗಿದೆ. ಮುಂದೆ ಓದಿ...

ಟೊಮೆಟೊ ಬೆಳೆದ ತಾವರೆಕೆರೆ ರೈತನ ಪಾಡು
ಲಾಕ್ಡೌನ್ನಿಂದಾಗಿ ನಷ್ಟ ಅನುಭವಿಸುತ್ತಿರುವ ರೈತರ ಸ್ಥಿತಿ ಕೇಳುವವರಿಲ್ಲದಾಗಿದೆ. ಬೆಂಗಳೂರಿನ ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿ ದೊಡ್ಡೇರಿ ರೈತ ಗಿಲ್ಕಾನಾಯ್ಕ ಸ್ಥಿತಿ ಕೂಡ ಇದೇ ಆಗಿದೆ. ತಾನು ಬೆಳೆದ ಟೊಮೆಟೊಗೆ ಸಿಕ್ಕ ಬೆಲೆ ನೋಡಿ ನಿರಾಶೆಯಿಂದ ಟೊಮೆಟೊವನ್ನು ಜನರಿಗೆ ಉಚಿತವಾಗಿ ಹಂಚುತ್ತಿದ್ದಾರೆ.

ಶ್ರೀಲಂಕಾ, ಬಾಂಗ್ಲಾದೇಶಕ್ಕೆ ರಫ್ತಾಗುತ್ತಿದ್ದ ಟೊಮೆಟೊ
ರೈತ ಗಿಲ್ಕಾನಾಯ್ಕ ಹತ್ತು ಎಕರೆ ಪ್ರದೇಶದಲ್ಲಿ ಹೈಬ್ರೀಡ್ ಟೊಮೆಟೊ ಬೆಳೆ ಬೆಳೆದಿದ್ದರು. ಆದರೆ ಲಾಕ್ಡೌನ್ನಿಂದಾಗಿ ಟೊಮೆಟೊ ಮಾರಾಟ ಸಾಧ್ಯವಾಗಿಲ್ಲ. ಈ ಹಿಂದೆ ಶ್ರೀಲಂಕಾ, ಬಾಂಗ್ಲಾದೇಶಕ್ಕೆ ಇವರು ಬೆಳೆದ ರಫ್ತು ಮಾಡುತ್ತಿದ್ದರು. ಆದರೆ ಇದೀಗ ಲಾಕ್ ಡೌನ್ ಹಿನ್ನಲೆಯಲ್ಲಿ ಯಾವುದೇ ರಫ್ತು ನಡೆಯುತ್ತಿಲ್ಲ. ಹೀಗಾಗಿ ಉಚಿತವಾಗಿ ಸ್ಥಳೀಯರಿಗೆ ಹಂಚುತ್ತಿದ್ದಾರೆ.

17 ಕೆ.ಜಿ ಟೊಮೆಟೊಗೆ 3 ರೂ!
ಟೊಮೆಟೊ ಬೆಳೆಯನ್ನು ಕೋಲಾರ ಎಪಿಎಂಸಿಗೆ ತೆಗೆದುಕೊಂಡು ಹೋದರೆ 17 ಕೆ.ಜಿ ಬಾಕ್ಸ್ ಅನ್ನು ಕೇವಲ 3 ರೂಪಾಯಿ ಕೇಳ್ತಾರೆ. ಈ ಬೆಲೆ ಕೇಳಿ ಕಂಗಾಲಾಗಿ ಹೋದೆ. ಇಷ್ಟು ನಷ್ಟದಲ್ಲಿ ಮಾರುವುದಕ್ಕಿಂತ ಜನರಿಗೆ ಉಚಿತವಾಗಿ ಹಂಚುವುದೇ ಒಳ್ಳೆಯದು ಎಂದು ಜನರಿಗೆ ಹಂಚುತ್ತಿದ್ದೇನೆ ಎನ್ನುತ್ತಾರೆ ಗಿಲ್ಕಾನಾಯ್ಕ್.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿ ಗಿಲ್ಕಾನಾಯ್ಕ ಹತ್ತು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದಾರೆ. ಇಳುವರಿ ಕೂಡ ಅತ್ಯುತ್ತಮವಾಗಿ ಬಂದಿದೆ. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎನ್ನುವಂತೆ ಲಾಕ್ಡೌನ್ ಬರೆ ಹಾಕಿದೆ. ಇಂಥ ಸಂಕಷ್ಟದ ಸಮಯದಲ್ಲಿ ಸೂಕ್ತ ಬೆಲೆ ನೀಡಿ ಬೆಳೆಯನ್ನು ಕೊಂಡುಕೊಳ್ಳಲು ಸರ್ಕಾರ ಮುಂದೆ ಬರಬೇಕು ಎಂಬುದು ರೈತರ ಆಶಯ.
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications