ಪೋಸ್ಕೋ ವಿರುದ್ಧ ಚಳವಳಿ: ರೈತರ ಜೊತೆ ಟೆಕ್ಕಿಗಳು

ಐಟಿ ಬಿಟಿ ಉದ್ಯೋಗಿಗಳು, ವೈದ್ಯರು ಹೆಚ್ಚಾಗಿರುವ ಬೆಂಗಳೂರು ಮೂಲದ ಅವಿರತ ಟ್ರಸ್ಟ್, ಇತ್ತೀಚೆಗೆ ಗದಗ ರೈತರನ್ನು ಕೂಡಿಸಿಕೊಂಡು ಮಾಡಿದ ಪಾಠ ಪ್ರವಚನ ಈಗ ಫಲ ಕೊಟ್ಟಿದೆ. ಬೃಹತ್ ಕೈಗಾರಿಕೆಯಿಂದ ಅಭಿವೃದ್ಧಿ ಎನ್ನುವ ಸರ್ಕಾರದ ಯೋಜನೆಯ ಹಿಂದಿರುವ ಸತ್ಯಾಸತ್ಯತೆ ಬಗ್ಗೆ ರೈತರಿಗೆ ಅವಿರತದ ಟೆಕ್ಕಿಗಳು ತಿಳಿಹೇಳಿದ್ದರು.
ಗದಗ ಜಿಲ್ಲೆಯಾದ್ಯಂತ ತಂಡ ತಂಡವಾಗಿ ಭೇಟಿ ಕೊಟ್ಟು, ರೈತರಲ್ಲಿ ಜಾಗೃತಿ ಮೂಡಿಸಲು ಅವಿರತ ಟ್ರಸ್ಟ್ ಯೋಜನೆ ಹಾಕಿಕೊಂಡಿದೆ. ವಾರಾಂತ್ಯದಲ್ಲಿ 30 ಜನರ ತಂಡ ಹಳ್ಳಿಗಳಿಗೆ ಭೇಟಿ ಕೊಟ್ಟು, ಶಾಲಾ ಮಕ್ಕಳಿಂದ ಹಿಡಿದು ಗ್ರಾಮದ ಸಮಸ್ತರಿಗೆ ಶಿಕ್ಷಣ ನೀಡುತ್ತಿದೆ. ಇದರ ಜೊತೆಗೆ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಬೇರೆ ಸಾಗಿದೆ.
ಸುಮಾರು 12 ಲಕ್ಷ ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಕೈಗಾರಿಕಾ ಸಂಸ್ಥೆಗಳ ಕೈ ಸೇರಿದೆ. ಉಕ್ಕು ಕಾರ್ಖಾನೆ ಸ್ಥಾಪನೆಗೆ ಬೇಕಿರುವುದು 3,300 ಎಕರೆ ಭೂಮಿ ಮಾತ್ರ. ಸರ್ಕಾರ ಹೊಸದಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ಕೈ ಬಿಟ್ಟು, ಈಗಾಗಲೇ ಕಾರ್ಖಾನೆಗಳ ವಶದಲ್ಲಿರುವ ಅಕ್ರಮ ಭೂಮಿಯನ್ನು ಪೋಸ್ಕೋಗೆ ನೀಡಲಿ ಎಂದು ಅವಿರತ ಟ್ರಸ್ಟ್ ನ ಅಧ್ಯಕ್ಷ ಕೆಟಿ ಸತೀಶ್ ಗೌಡ ಹೇಳುತ್ತಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications