ಭಾರತದಲ್ಲಿ ತೀವ್ರ ಉಷ್ಣಾಂಶವಿಲ್ಲ: ಅಧಿಕ ಗೋಧಿ ಇಳುವರಿ ನಿರೀಕ್ಷೆ
ಬೆಂಗಳೂರು, ಡಿಸೆಂಬರ್ 23: ಭಾರತದಲ್ಲಿ ಪ್ರಸ್ತುತದಲ್ಲಿರುವ ತಾಪಮಾನವು ಬೆಳೆಗಳಿಗೆ ಪೂರಕವಾಗಿದೆ. ಇದರಿಂದ ಹೆಚ್ಚಿನ ಇಳುವರಿಗೆ ಅನುಕೂಲಕರವಾಗಿದ್ದು, ಬೆಳೆಗಳ ಬೆಳವಣಿಗೆ ಉತ್ತಮವಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ರಾಬಿ ಋತುವಿನ ಪ್ರಮುಖ ಬೆಳೆಯಾದ ಗೋಧಿ ಈ ವರ್ಷ ನಿರೀಕ್ಷೆಗಿಂತ ಹೆಚ್ಚು ಫಸಲು ಬರಲಿದೆ ಎಂದು ಕೇಂದ್ರ ಕೃ ಸಷಿ ಸಚಿವಾಲಯ ಕಾರ್ಯದರ್ಶಿ ಮನೋಜ್ ಅಹುಜಾ ತಿಳಿಸಿದರು.
ಕೃಷಿ ಸಚಿವಾಲಯದ ನೀಡಿರುವ ಅಂಕಿಅಂಶಗಳ ಪ್ರಕಾರ, ರಾಬಿ ಋತು ಪ್ರಾರಂಭವಾದ ನಂತರ ಅಕ್ಟೋಬರ್ನಿಂದ ಕಳೆದ ವಾರದವರೆಗೆ ಒಟ್ಟು 286.5ಲಕ್ಷ ಹೆಕ್ಟೇರ್ಗಳಲ್ಲಿ ಗೋಧಿ ಬೆಳೆಯಲಾಗಿದೆ. ಈ ಮೂಲಕ ಪ್ರಸಕ್ತ ಸಾಲಿನಲ್ಲಿ ಶೇಕಡಾ 3 ರಷ್ಟು ಹೆಚ್ಚು ಗೋಧಿ ಬೆಳೆಯಲಾಗಿದೆ.
ಗೋಧಿ ಬೆಳೆ ನಿರೀಕ್ಷೆಯು ಉಜ್ವಲವಾಗಿದೆ. ಪ್ರಸ್ತುತ ಹವಾಮಾನವು ಸಸ್ಯಗಳ ಬೆಳವಣಿಗೆ ಮತ್ತು ಉತ್ತಮ ಇಳುವರಿಗೆ ಸಹಕಾರಿಯಾಗಲಿದೆ. '2023ರ ಅಂತಾರಾಷ್ಟ್ರೀಯ ರಾಗಿ ವರ್ಷ' ಪ್ರಯುಕ್ತ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ರಾಗಿ ಉಪಾಹಾರ ಕೂಟದಲ್ಲಿ ಅಹುಜಾ ಅವರು ಪಿಟಿಐಗೆ ಮಾಹಿತಿ ನೀಡಿದರು.

ಹೆಚ್ಚು ಬೆಲೆ ನಿರೀಕ್ಷೆಯಿಂದ ಅಧಿಕ ಬಿತ್ತನೆ
ದೇಶದಲ್ಲಿ ಕಳೆದ ವರ್ಷದಂತೆ ಈ ವರ್ಷವು ಗೋಧಿ ಬೆಳೆಯುವ ರಾಜ್ಯಗಳಲ್ಲಿ ಇದುವರೆಗೆ ಯಾವುದೇ ತೀವ್ರ ತಾಪಮಾನದ ವರದಿಗಳಿಲ್ಲ. ಹೀಗಾಗಿಯೇ ಅತ್ಯಧಿಕ ಬೆಳೆ ನಿರೀಕ್ಷೆ ಮಾಡಲಾಗುತ್ತಿದೆ. ರಫ್ತು ಬೇಡಿಕೆಯ ನಡುವೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗಿಂತ ಹೆಚ್ಚಿನದರ ಪಡೆಯುವ ನಿರೀಕ್ಷೆಯಲ್ಲಿ ರೈತರು ಈ ವರ್ಷ ಗೋಧಿ ಬೆಳೆ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದಾರೆ ಕೇಂದ್ರ ಕೃಷಿ ಸಚಿವಾಲಯದ ಇನ್ನೊಬ್ಬ ಅಧಿಕಾರಿ ಹೇಳಿದರು.
ಕಳೆದ 2021-22ರ ಸಾಲಿನ ಬೆಳೆ ವರ್ಷದಲ್ಲಿ, ಗೋಧಿ ಬೆಳೆಯುವ ರಾಜ್ಯಗಳಲ್ಲಿನ ಶಾಖದ ಅಲೆಗಳಿಂದಾಗಿ ದೇಶೀಯ ಉತ್ಪಾದನೆಯು ಅದರ ಹಿಂದಿನ ವರ್ಷಕ್ಕಿಂತ (109.59 ಮಿಲಿಯನ್ ಟನ್) 106.84 ಮಿಲಿಯನ್ ಟನ್ಗಳಿಗೆ ಇಳಿಕೆ ಕಂಡಿತ್ತು. ಪರಿಣಾಮವಾಗಿ ದೇಶೀಯ ಉತ್ಪಾದನೆಯಲ್ಲಿನ ಕುಸಿತ ಮತ್ತು ಖಾಸಗಿ ಪಕ್ಷಗಳ ಆಕ್ರಮಣಕಾರಿ ಖರೀದಿಗಳಿಂದಾಗಿ ಸರ್ಕಾರಿ ಸ್ವಾಮ್ಯದ ಎಫ್ಸಿಐನಿಂದ ಗೋಧಿ ಸಂಗ್ರಹಣೆ ಕುಸಿಯಿತು. 2022-23 ಮಾರುಕಟ್ಟೆ ವರ್ಷದಲ್ಲಿ 434.44 ಲಕ್ಷ ಟನ್ಗಳಿಂದ 187.92 ಲಕ್ಷ ಟನ್ನಷ್ಟು ಕಡಿಮೆ ಪ್ರಮಾಣದಲ್ಲಿ ಗೋಧಿ ಸಂಗ್ರಹ ಸಾಧ್ಯವಾಯಿತು ಎಂದರು.

ಈ ವರ್ಷದ ಮೇ ತಿಂಗಳಲ್ಲಿ ದೇಶೀಯ ಸರಬರಾಜುಗಳನ್ನು ಹೆಚ್ಚಿಸಲು ಮತ್ತು ಬೆಲೆಗಳನ್ನು ನಿಯಂತ್ರಿಸಲು ಸರ್ಕಾರವು ಗೋಧಿಯ ರಫ್ತುಗಳನ್ನು ನಿಷೇಧಿಸಿತು. ನಿಷೇಧವಾದ ಬಳಿಕ ಸಗಟು ಪ್ರತಿ ಕೇಜಿಗೆ ಗೋಧಿಯ ಬೆಲೆ 30ರೂ.ಗೆ ಹೆಚ್ಚಾಯಿತು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications