Malnad Weather: ಮಲೆನಾಡಿನ ಕಾಫಿ, ಅಡಿಕೆ ಮತ್ತು ಕಾಳುಮೆಣಸು ಇಳುವರಿಗೆ ಭಾರೀ ಹೊಡೆತ ಕೊಟ್ಟ ಬಿಸಿಲು
ಚಿಕ್ಕಮಗಳೂರು, ಮೇ. 07: ಈ ಬಾರಿಯ ಬೇಸಿಗೆಯ ಧಗೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆ ಭಾಗದಲ್ಲಿ ಮಾತ್ರ ತನ್ನ ಝಳ ತೋರಿಸಿಲ್ಲ, ಬದಲಿಗೆ ಮಲೆನಾಡು ಭಾಗದಲ್ಲಿಯೂ ಭಾರಿ ಪ್ರಭಾವ ಬೀರಿದೆ. ಜನರ ಜೊತೆಗೆ ಬೆಳೆಗಳ ಮೇಲೂ ಕೆಟ್ಟ ಪರಿಣಾಮ ಬೀರಿದ್ದು, ಇಳುವರಿ ಕಡಿಮೆಯಾಗುವ ಆತಂಕದಲ್ಲಿದ್ದಾರೆ ಮಲೆನಾಡ ಮಂದಿ.
ಮಲೆನಾಡಿನ ಕಾಫಿ, ಅಡಿಕೆ ಮತ್ತು ಕಾಳು ಮೆಣಸಿನ ಬೆಳೆಗಳ ಮೇಲೆ ಬಿಸಿಗಾಳಿ ಜತೆಗೆ ತೀವ್ರ ತಾಪಮಾನ ಪರಿಣಾಮ ಬೀರಿದೆ. ಉಷ್ಣಾಂಶದ ಮಟ್ಟವು 36 ಡಿಗ್ರಿ ಸೆಲ್ಸಿಯಸ್ಗೆ ಏರುವುದರಿಂದ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ ಮತ್ತು ಕಾಳುಮೆಣಸು ತೀವ್ರವಾಗಿ ಹಾನಿಗೊಳಗಾಗಿವೆ. ಭೂಮಿಯಲ್ಲಿ ತೇವಾಂಶದ ಕೊರತೆಯಿಂದಾಗಿ ಪೀಚು ಅಡಿಕೆಗಳು ಬೀಳಲು ಪ್ರಾರಂಭಿಸಿದವು.

ಅಡಿಕೆ, ಕಾಳು ಮೆಣಸು, ಕಾಫಿ ಮೇಲೆ ಬಿಸಿಲಿನ ಪ್ರಭಾವ
ಯಾವಾಗಲು ಹಸಿರಿನಿಂದ ಕೂಡಿರುವ ಮಲೆನಾಡಿನ ಪ್ರದೇಶದಲ್ಲಿ ಈ ಬಾರಿ ಮಳೆಗಾಗಿ ಜನ ಕಾಯುತ್ತಿದ್ದರು. ಕಳಸ ಮತ್ತು ಮೂಡಿಗೆರೆ ತಾಲೂಕಿನಲ್ಲಿ ಒಂದು ಅಥವಾ ಎರಡು ಬಾರಿ ಸಾಧಾರಣ ಮಳೆಯಾಗಿದ್ದರೂ ಕೂಡ ನಂತರ ಬಂದ ಬಿಸಿಗಾಳಿಯು ತೇವಾಂಶವನ್ನು ಕಡಿಮೆ ಮಾಡಿರುವುದು ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ.
ಈ ಪರಿಣಾಮ ಕೇವಲ ಅಡಿಕೆ ಬೆಳೆಗೆ ಮಾತ್ರ ಸೀಮಿತವಾಗಿಲ್ಲ. ಸುಡುವ ಬಿಸಿಲು ಮತ್ತು ಶಾಖವು ಮೊಳಕೆಯೊಡೆದ ಕಾಫಿ ಬೀಜಗಳ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ. ಬಲಿಯದ ಕಾಳುಗಳು ಕಪ್ಪಾಗಿವೆ ಅಲ್ಲಯೇ ಉದುರಿ ಹೋಗಿವೆ. ಹೀಗಾಗಿ ಇಳುವರಿಯಲ್ಲಿ ಪ್ರಮುಖ ಕುಸಿತಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ, ಕಾಫಿ ಬೆಳೆಯುವವ ರೈತರು ವೆಂಬರ್ ಮತ್ತು ಡಿಸೆಂಬರ್ನಲ್ಲಿ ಕಾಫಿಯನ್ನು ಆರಿಸಿದ ನಂತರ ಜನವರಿ ಮತ್ತು ಫೆಬ್ರವರಿಯಲ್ಲಿ ಎಸ್ಟೇಟ್ನಲ್ಲಿರುವ ಮರಗಳನ್ನು ಕತ್ತರಿಸುತ್ತಾರೆ. ಆದ್ದರಿಂದ, ಕಾಫಿ ಗಿಡಗಳು ಬಿಸಿಲಿಗೆ ಬಲಿಯಾಗುತ್ತವೆ. ಈ ಬಾರಿಯ ಬಿಸಿಲು ಹಿಂದೆಂದೂ ಕಂಡಿರದ ಬಿಸಿಲಾದ ಕಾರಣ ಹೆಚ್ಚಾಗಿಯೇ ಹಾನಿಯಾಗಿದೆ.
ಕಾಫಿ ಇಳುವರಿಯಲ್ಲಿ ತೀವ್ರ ಕುಸಿತ
ಕರ್ನಾಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಮ್ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಜೊತೆಗೆ ಮಾತನಾಡಿ, ಕಾಫಿ ಬೆಳೆಗಳ ಇಳುವರಿಯಲ್ಲಿ ತೀವ್ರ ಕುಸಿತ ಉಂಟಾಗಲಿದೆ. ಇದೇ ರೀತಿಯ ಹವಾಮಾನ ಮುಂದುವರಿದರೆ, ಮುಂದಿನ ವರ್ಷವೂ ಉತ್ತಮ ಬೆಲೆಯನ್ನು ನಾವು ನಿರೀಕ್ಷಿಸಲಾಗುವುದಿಲ್ಲ ಎಂದಿದ್ದಾರೆ.
ಇನ್ನು, " ಅರೇಬಿಕಾ ಕಾಫಿಗೆ ಹೋಲಿಸಿದರೆ ರೊಬಸ್ಟಾ ಕಾಫಿಯ ಬೆಲೆ ತುಸು ಏರಿಕೆಯಾಗಿದೆ. ಆದರೆ ಅರೇಬಿಕಾ ಕಾಫಿಗೆ ಹೋಲಿಸಿದರೆ ರೊಬಸ್ಟಾ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದು, ಅರೇಬಿಕಾ ಬೆಲೆ ಸ್ಥಿರವಾಗಿಲ್ಲ" ಎನ್ನುತ್ತಾರೆ ಕಾಫಿ ಬೆಳೆಗಾರ ಬೆರನಗೋಡು ಮಹೇಶ್. ಮತ್ತೊಬ್ಬರು ಕಾಫಿ ತೋಟಗಳಲ್ಲಿ ಸೂರ್ಯನ ಕಿರಣಗಳು ಬಿದ್ದು ಹಾನಿಯಾಗುವುದರಿಂದ ಮರ ಕಡಿಯುವುದನ್ನು ಮುಂದೆ ಹಾಕುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಸದ್ಯ ಎಲ್ಲಾ ಸಮಸ್ಯೆಗಳಿಗೆ ಉತ್ತಮ ಮಳೆಯೊಂದೆ ಪರಿಹಾರ ಎಂದು ಕಾದು ಕುಳಿತಿದ್ದಾರೆ ಮಲೆನಾಡಿನ ರೈತರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications