11ನೇ ಕೃಷಿ ಗಣತಿ ಪ್ರಾರಂಭ: ಸ್ಮಾರ್ಟ್ಫೋನ್, ಟ್ಯಾಬ್ಲೆಟ್ಗಳ ಮೂಲಕ ದತ್ತಾಂಶ ಸಂಗ್ರಹ
ನವದೆಹಲಿ,ಜುಲೈ. 29: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಗುರುವಾರ ಹನ್ನೊಂದನೇ ಕೃಷಿ ಗಣತಿಗೆ ಚಾಲನೆ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳ ಮೂಲಕ ಹಿಡುವಳಿ ಸೇರಿದಂತೆ ವಿವಿಧ ಮಾನದಂಡಗಳ ಮೇಲೆ ದತ್ತಾಂಶ ಸಂಗ್ರಹಿಸಲಾಗುತ್ತದೆ. ಹನ್ನೊಂದನೇ ಕೃಷಿ ಜನಗಣತಿಯ (2021-22) ಕ್ಷೇತ್ರ ಕಾರ್ಯವು ಆಗಸ್ಟ್ 2022 ರಲ್ಲಿ ಪ್ರಾರಂಭವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೃಷಿ ಗಣತಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಇದನ್ನು ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬಗೊಂಡಿತ್ತು. ಬಳಿಕ ಈಗ ಕೈಗೊಳ್ಳಲಾಗುತ್ತಿದೆ ಕೃಷಿ ಸಚಿವಾಲಯ ತಿಳಿಸಿದೆ. ಸಚಿವಾಲಯವು 1970- 71ರಿಂದ ಕೃಷಿ ಗಣತಿ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಜನಗಣತಿಯ ಹತ್ತನೇ ಆವೃತ್ತಿಯನ್ನು 2015-16ರರಲ್ಲಿ ನಡೆಸಲಾಗಿತ್ತು.

ಕೃಷಿ ಗಣತಿಯು ಜಮೀನುಗಳ ಸಂಖ್ಯೆ ಮತ್ತು ಪ್ರದೇಶ, ಅವುಗಳ ಗಾತ್ರ, ವರ್ಗವಾರು ಹಂಚಿಕೆ, ಭೂ ಬಳಕೆ, ಹಿಡುವಳಿ ಮತ್ತು ಬೆಳೆ ಮಾದರಿ ಇತ್ಯಾದಿಗಳಂತಹ ವಿವಿಧ ಮಾನದಂಡಗಳ ಮಾಹಿತಿಯ ಮುಖ್ಯ ಮೂಲವಾಗಿದೆ. ಕೃಷಿ ಗಣತಿಗಾಗಿ ದತ್ತಾಂಶ ಸಂಗ್ರಹಣೆಯನ್ನು ಸ್ಮಾರ್ಟ್ಫೋನ್ಗಳು ಮತ್ತು ಟ್ಯಾಬ್ಲೆಟ್ಗಳಲ್ಲಿ ನಡೆಸುವುದು ಇದೇ ಮೊದಲು. ಇದರಿಂದಾಗಿ ಸಮಯಕ್ಕೆ ಸರಿಯಾಗಿ ದತ್ತಾಂಶ ಲಭ್ಯವಿರುತ್ತದೆ ಎಂದು ಸಚಿವಾಲಯ ಹೇಳಿದೆ.
ಈಗಾಗಲೇ ಹೆಚ್ಚಿನ ರಾಜ್ಯಗಳು ತಮ್ಮ ಭೂ ದಾಖಲೆಗಳು ಮತ್ತು ಸಮೀಕ್ಷೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಇದು ಕೃಷಿ ಗಣತಿಯ ದತ್ತಾಂಶ ಸಂಗ್ರಹಣೆಯನ್ನು ಮತ್ತಷ್ಟು ವೇಗಗೊಳಿಸುತ್ತದೆ. ಡಿಜಿಟಲಿಕರಣ ಮಾಡಿದ ಭೂ ದಾಖಲೆಗಳ ಬಳಕೆ ಮತ್ತು ದತ್ತಾಂಶ( ಅಂಕಿಅಂಶ) ಸಂಗ್ರಹಣೆಗಾಗಿ ಮೊಬೈಲ್ ಅಪ್ಲಿಕೇಶನ್ಗಳ ಬಳಕೆಯು ದೇಶದಲ್ಲಿ ಜಮೀನುಗಳ ಡೇಟಾಬೇಸ್ ಅನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಭಾರತದಂತಹ ವಿಶಾಲವಾದ ಮತ್ತು ಕೃಷಿ ಪ್ರಧಾನ ರಾಷ್ಟ್ರದಲ್ಲಿ ಈ ಲೆಕ್ಕಾಚಾರವು ಭಾರಿ ಪ್ರಯೋಜನಗಳನ್ನು ತರುತ್ತದೆ. ಇಲ್ಲಿ ರೈತರ ಆದಾಯ ಹೆಚ್ಚಿಸುವತ್ತ ಸರ್ಕಾರ ಗಮನ ಹರಿಸುತ್ತಿದೆ. ಇದಲ್ಲದೆ, ಅವರ ಜೀವನಮಟ್ಟವನ್ನು ಬದಲಾಯಿಸುವ ಅವಶ್ಯಕತೆಯಿದೆ. ಹೀಗಾಗಿ ಸಬಲೀಕರಣಕ್ಕಾಗಿ ಸಣ್ಣ ರೈತರನ್ನು ಸಂಘಟಿಸಬೇಕಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು.
ದೇಶವು ಡಿಜಿಟಲ್ ಕೃಷಿಯತ್ತ ವೇಗವಾಗಿ ಸಾಗುತ್ತಿದೆ. ಈ ಗಣನೆಯಲ್ಲಿ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ. ಕೃಷಿ ಗಣತಿಯನ್ನು ವಿಶಾಲ ದೃಷ್ಟಿಕೋನದಲ್ಲಿ ಯೋಚಿಸಬೇಕು. ಇದು ಕೃಷಿ ಲೆಕ್ಕಾಚಾರಗಳು ಬೆಳೆಗಳ ಮ್ಯಾಪಿಂಗ್ಗೆ ಕೊಡುಗೆ ನೀಡಬಹುದು. ಇದರಿಂದ ದೇಶವು ಗಣತಿಯ ಪ್ರಯೋಜನಗಳನ್ನು ಪಡೆಯುತ್ತದೆ ಎಂದು ಅವರು ಹೇಳಿದರು.
ಕೇಂದ್ರ ಇಲಾಖೆಗಳು, ರಾಜ್ಯ ಸರ್ಕಾರಗಳು ಮತ್ತು ಸಂಬಂಧಿತ ಸಂಸ್ಥೆಗಳು ಕೃಷಿ ಗಣತಿಯನ್ನು ಸಂಪೂರ್ಣ ಸಮರ್ಪಿತವಾಗಿ ನಡೆಸುವಂತೆ ತೋಮರ್ ಕೇಳಿಕೊಂಡರು. ಈ ಸಂದರ್ಭದಲ್ಲಿ ಸಚಿವರು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಬಳಕೆಗಾಗಿ ಕೃಷಿ ಗಣತಿಗಾಗಿ ಕಾರ್ಯಾಚರಣಾ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು. ಅಲ್ಲದೆ ಡೇಟಾ ಕಲೆಕ್ಷನ್ ಪೋರ್ಟಲ್/ಆ್ಯಪ್ ಅನ್ನು ಬಿಡುಗಡೆ ಮಾಡಿದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications