Jackfruit: ಮಲೆನಾಡಿನ ವಿಶಿಷ್ಟ ಹಲಸಿನ ತಳಿಗೆ ಸಿಕ್ಕಿತು ಮಾನ್ಯತೆ
ಶಿವಮೊಗ್ಗ, ಜೂನ್ 14: ಅಳಿವಿನಂಚಿನಲ್ಲಿರುವ ಅಪರೂಪದ ಹಲಸಿನ ತಳಿಗಳನ್ನು ಸಂರಕ್ಷಿಸಿ, ಬೆಳೆಸುವ ಹಾಗೂ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಅಗತ್ಯವಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಎಂ.ಬಿ.ದುಶ್ಯಂತ ಕುಮಾರ್ ಹೇಳಿದ್ದಾರೆ.
ಇಂದು ಮಲೆನಾಡಿನ ವಿಶಿಷ್ಟ ಹಲಸಿನ ತಳಿಗಳಾದ ಹಳದಿ ರುದ್ರಾಕ್ಷಿ - ಜೆ.ಎ.ಆರ್., ಆರೆಂಜ್-ಆರ್.ಪಿ.ಎನ್., ಕೆಂಪು ರುದ್ರಾಕ್ಷಿ-ಡಿ.ಎಸ್.ವಿ ಮತ್ತು ರೆಡ್-ಆರ್.ಟಿ.ಬಿ. ತಳಿಗಳಿಗೆ ನವದೆಹಲಿ ಭಾರತ ಸರ್ಕಾರದ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಣಿಗೊಂಡು ಮಾನ್ಯತೆ ಪಡೆದಿವೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ನಾಲ್ಕು ತಳಿಗಳ ಕುರಿತು ಸುಮಾರು 3-4ವರ್ಷಗಳಿಂದ ಸಮಗ್ರ ಅಧ್ಯಯನ ನಡೆಸಿ, ಸಂಪೂರ್ಣ ಮಾಹಿತಿಯನ್ನು ನವದೆಹಲಿಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರಕ್ಕೆ ಸಲ್ಲಿಸಲಾಗಿತ್ತು. ಪ್ರಾಧಿಕಾರದಿಂದ ನೇಮಕಗೊಂಡ ತಜ್ಞ ವಿಜ್ಞಾನಿಗಳು 2 ಬಾರಿ ಸ್ಥಳ ಪರಿಶೀಲನೆ ನಡೆಸಿ, ವಿವರವಾದ ಮಾಹಿತಿಯನ್ನು ಸಂಗ್ರಹಿಸಿ, ಅಂತಿಮವಾಗಿ ನೋಂದಣಿಗೆ ಅರ್ಹವೆಂದು ಶಿಫಾರಸ್ಸು ಮಾಡಿದ್ದ ಹಿನ್ನೆಲೆಯಲ್ಲಿ ನೋಂದಣಿ ಕಾರ್ಯ ಪೂರ್ಣಗೊಂಡು ಪ್ರಮಾಣಪತ್ರ ದೊರಕಿರುವುದು ಹರ್ಷದ ಸಂಗತಿ ಎಂದಿದ್ದಾರೆ.
ಈ ಅಪರೂಪದ ಸಸ್ಯ ತಳಿಗಳನ್ನು ಪ್ರಸಕ್ತ ಸಾಲಿನಿಂದಲೇ ಅಭಿವೃದ್ಧಿಪಡಿಸಿ, ಆಸಕ್ತ ಕೃಷಿಕರಿಗೆ ತಲುಪಿಸಲು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ವಿಶೇಷ ಗಮನಹರಿಸಲಿದೆ. ಅಲ್ಲದೇ ಅಪ್ಪೇ ಮಿಡಿ ತರಹದ ಅತ್ಯಪರೂಪದ ಮಾವಿನ ವಿಶಿಷ್ಟ ತಳಿಗಳನ್ನೂ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಎಲ್ಲಾ ಕಾಲಮಾನಕ್ಕೂ ಹೊಂದಿಕೊಳ್ಳಲಿವೆ ಈ ತಳಿಗಳು
ಈ ತಳಿಗಳು ಮಲೆನಾಡು ಮಾತ್ರವಲ್ಲದೇ ದೇಶದ ಎಲ್ಲೆಡೆ ಬೆಳೆಯಬಹುದಾಗಿದ್ದು, ಎಲ್ಲಾ ಕಾಲಮಾನಕ್ಕೂ ಹೊಂದಿಕೊಳ್ಳಲಿವೆ. ಇದರ ಸವಿ ಎಲ್ಲರೂ ಸವಿಯುವಂತಾಗಬೇಕು. ಅಲ್ಲದೇ ಅಪರೂಪದ ತಳಿ ಇವುಗಳಾಗಿದ್ದು, ಹಲಸು ಬೆಳೆಯುವ ಆಸಕ್ತ ಕೃಷಿಕರಿಂದ ಈ ಹಲಸಿನ ತಳಿ ಉಳಿದಿರುವುದು ಗಮನಾರ್ಹ ಸಂಗತಿಯಾಗಿದೆ.

ಈ ಸಂದರ್ಭದಲ್ಲಿ ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರ, ಪ್ರಾಂತೀಯ ಕಚೇರಿಯ ಮುಖ್ಯಸ್ಥ ಡಾ.ಎಂ.ಕೆ.ಸಿಂಗ್ ಮಾತನಾಡಿ, ಪ್ರತಿ ತಳಿಯ ಹಲಸಿನ ಬಗ್ಗೆ ವೈಜ್ಞಾನಿಕವಾಗಿ ವಿಶೇಷ ಅಧ್ಯಯನ ನಡೆಸಿ, ಅದರ ಸಂಪೂರ್ಣ ಮಾಹಿತಿಯನ್ನು ನೋಂದಣಿಯ ಸಂದರ್ಭದಲ್ಲಿ ಸಲ್ಲಿಸಲಾಗಿದೆ ಎಂದಿದ್ದಾರೆ.
ಈ ಅಪರೂಪದ ತಳಿ ಬೆಳೆಯುವುದರಿಂದ ನಶಿಸುತ್ತಿರುವ ತಳಿ ಸಂರಕ್ಷಿಸುವುದು ಮತ್ತು ಬೆಳೆಗಾರರಿಗೆ ಆರ್ಥಿಕವಾಗಿ ಲಾಭದಾಯಕವಾಗಲಿದೆ. ಈ ಹಣ್ಣುಗಳ ವಿಶೇಷ ಸ್ವಾದ ಹೊಂದಿವೆ. ಮಲೆನಾಡಿನ ಕೆಲ ಭಾಗದಲ್ಲಿ ಮಾತ್ರ ಈ ತಳಿಗಳು ಕಂಡುಬರುತ್ತಿದ್ದು, ದೇಶದಾದ್ಯಂತ ಕಾಣದಾಗಿದೆ. ಈ ಹಣ್ಣಿನ ತಳಿಗಳು ಹೊಂದಿರುವ ವಿಶಿಷ್ಟ ಗುಣ, ಸ್ವಾದ ಹಾಗೂ ಬಣ್ಣಗಳಿಂದಾಗಿ ಆಕರ್ಷಕವಾಗುತ್ತವೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಅನಂತಮೂರ್ತಿ ಜವುಳಿ ಅವರು ಮಾತನಾಡಿ, ಈ ಹಣ್ಣುಗಳು ಇತರೆ ಜಾತಿಯ ಹಣ್ಣುಗಳಿಗಿಂತ ಹೆಚ್ಚಿನ ತಿರುಳನ್ನು ಹೊಂದಿವೆ. ಮಳೆಗಾಲದಲ್ಲಿ ಮಳೆ ನೀರಿನಿಂದ ಅದರ ಸ್ವಾದವನ್ನು ಕಳೆದುಕೊಳ್ಳದ ವಿಶಿಷ್ಟ ಸ್ವಭಾವವುಳ್ಳದ್ದಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಇಳುವರಿಯೊಂದಿಗೆ ಕಟಾವಿಗೆ ಸಿದ್ಧವಾಗಿರಲಿವೆ ಎಂದು ತಿಳಿಸಿದ್ದಾರೆ.
-
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications