ಇನ್ಮೇಲೆ ರೈತರಿಗೆ ಮೊಬೈಲಿನಲ್ಲೇ ಸಿಗಲಿದೆ ಹವಾಮಾನ ವರದಿ
ರೈತರಿಗೆ ಹವಾಮಾನದ ಬದಲಾವಣೆಗಳ ಕುರಿತು ಮೊದಲೇ ಮಾಹಿತಿ, ಮುನ್ಸೂಚನೆ ನೀಡಬಲ್ಲ ಸಂದೇಶವೊಂದನ್ನು ಅವರ ಮೊಬೈಲ್ ಗಳಿಗೆ ಮುಂಚಿತವಾಗಿಯೇ ಕಳಿಸುವ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಲಿದೆ.
ಬೆಂಗಳೂರು, ಮೇ 31: ಹವಾಮಾನದ ವೈಪರೀತ್ಯಗಳ ನೇರ ಪರಿಣಾಮವನ್ನು ಮೊಟ್ಟಮೊದಲನೆಯದಾಗಿ ಎದುರಿಸುವವರು ರೈತರೇ. ಆದ್ದರಿಂದ ಅವರಿಗೆ ಹವಾಮಾನದ ಬದಲಾವಣೆಗಳ ಕುರಿತು ಮೊದಲೇ ಮಾಹಿತಿ, ಮುನ್ಸೂಚನೆ ನೀಡಬಲ್ಲ ಸಂದೇಶವೊಂದನ್ನು ಅವರ ಮೊಬೈಲ್ ಗಳಿಗೆ ಮುಂಚಿತವಾಗಿಯೇ ಕಳಿಸುವ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಲಿದೆ.
ಪ್ರತಿದಿನವೂ ಹವಾಮಾನದ ಮುನ್ಸೂಚನೆಯನ್ನು ಪಡೆಯಲಿರುವ ರೈತರು ಅದಕ್ಕೆ ತಕ್ಕಂತಗೆ ತಮ್ಮ ಕೆಲಸ ಕಾರ್ಯಗಳನ್ನು ಪಟ್ಟಿಮಾಡಿಕೊಳ್ಳಬಹುದಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಪರಿಚಯಿಸಿದ ವಿವಿಧ ಕೃಷಿ ಯೋಜನೆಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ರೈತರಷ್ಟೇ ಈ ಹೊಸ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

ಸಂದೇಶಗಳು ಪ್ರಾದೇಶಿಕ ಭಾಷೆಗಳಲ್ಲಿಯೇ ಇರುವುದರಿಂದ ರೈತರಿಗೆ ಮತ್ತಷ್ಟು ಸಹಾಯವಾಗಲಿದೆ.[ಸಿಡಿಲು ಮುನ್ಸೂಚನೆಗೆ ರಾಜ್ಯ ಸರ್ಕಾರದಿಂದ ವಿನೂತನ ಆಪ್]
ಎರಡು ದಿನ ಮೊದಲೇ ಮಳೆಯ ಮುನ್ಸೂಚನೆಯನ್ನೂ ಸಂದೇಶದ ಮೂಲಕ ನೀಡಲಾಗುತ್ತದೆ. ಈ ಯೋಜನೆಯು ಅರ್ಥ್ ಸಿಸ್ಟಮ್ ಸೈನ್ಸ್ ಆರ್ಗನೈಸೇಶನ್ ಮತ್ತು ಭಾರತೀಯ ಹವಾಮಾನ ಇಲಾಖೆಯ ಗ್ರಾಮೀಣ ಕೃಷಿಮಾಸಮ್ ಸೇವಾ ಯೋಜನೆಯ ಭಾಗವಾಗಿದೆ.
ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು, ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ, ಭಾರತೀಯ ತಾಂತ್ರಜ್ಞಾನ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗುತ್ತಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications