ರಾಯಚೂರು: ಕಟಾವಿಗೂ ಮುನ್ನವೇ ಭತ್ತಕ್ಕೆ ಬಂಗಾರದ ಬೆಲೆ, ರೈತರು ಫುಲ್ ಖುಷ್
ರಾಯಚೂರು ನವೆಂಬರ್ 18 : ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ 75 ಕೆ.ಜಿ. ಭತ್ತದ ದರ ₹1,900ರಿಂದ ₹ 2,100ರವರೆಗೂ ತಲುಪಿದೆ. ಕಳೆದ ವರ್ಷ ₹1,750 ಇತ್ತು.
ಮುಂಗಾರು ಹಂಗಾಮಿನಲ್ಲಿ ಸಿಂಧನೂರು ತಾಲೂಕಿನಲ್ಲಿ 56,413 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ತುಂಗಭದ್ರಾ ಕಾಲುವೆಯ ಮೇಲ್ಭಾಗದಲ್ಲಿ ಈಗಾಗಲೇ ಭತ್ತದ ಕಟಾವು ಪ್ರಾರಂಭವಾಗಿದೆ. ಆದರೆ, ಮಧ್ಯ ಹಾಗೂ ಕೆಳ ಭಾಗದಲ್ಲಿ ತೆನೆ ಕೆಂಪಗಾಗಿದ್ದು, ತಿಂಗಳಲ್ಲಿ ಕಟಾವು ಶುರುವಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

'ಕಳೆದ ವರ್ಷ ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ಭತ್ತ ಬೆಳೆಯ ಇಳುವರಿ ಚೆನ್ನಾಗಿತ್ತು. ಭತ್ತ ಅಧಿಕ ಪ್ರಮಾಣದಲ್ಲಿ ಮಾರುಕಟ್ಟೆಗೆ ಬಂದ ಕಾರಣ ಬೇಡಿಕೆ ಕಡಿಮೆ ಇತ್ತು. ಈ ಬಾರಿ ಬರ ಇರುವ ಕಾರಣ ಭತ್ತದ ಇಳುವರಿಯೂ ಕಡಿಮೆಯಾಗಿದೆ. ಕಳೆದ ವರ್ಷ 75 ಕೆಜಿ ಭತ್ತ ₹1750ರವರೆಗೆ ಮಾರಾಟವಾಗಿದೆ. ಈ ಬಾರಿ ಸೋನಾಮಸೂರಿ ₹1,900, ಆರ್ಎನ್ಆರ್ ₹2,100 ದರ ಇದೆ' ಎಂದು ಸಿಂಧನೂರಿನ ವರ್ತಕರ ಸಂಘದ ಅಧ್ಯಕ್ಷ ಮಲ್ಲನಗೌಡ ಕಾನಿಹಾಳ ವಿವರಿಸುತ್ತಾರೆ.
ಬೆಲೆ ಇನ್ನಷ್ಟು ಏರುವ ಸಂಭವ..!
ನೀರಿನ ಅಭಾವದಿಂದ ಹಿಂಗಾರಿನಲ್ಲಿ ಭತ್ತ ಬಿತ್ತನೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ಡಿಸೆಂಬರ್ ವೇಳೆಗೆ ಭತ್ತದ ಬೆಲೆ ಗಗನಕ್ಕೆ ಏರಿದರೂ ಅಚ್ಚರಿ ಇಲ್ಲ ಎಂದು ವರ್ತಕರು ಹೇಳುತ್ತಿದ್ದಾರೆ.

ಈ ಬಾರಿ ಹಿಂಗಾರು ಭತ್ತ ಬಿತ್ತನೆ ಮಾಡುತ್ತಿಲ್ಲ. ರೈತರು ಬೆಳೆದ ಭತ್ತಕ್ಕೆ ಒಳ್ಳೆಯ ಬೆಲೆ ಇದೆ. ಈಗಲೇ ಮಾರಾಟ ಮಾಡಿದರೆ ಹೆಚ್ಚು ಲಾಭ ಸಿಗದು. ವರ್ತಕರು ಭತ್ತ ಸಂಗ್ರಹ ಮಾಡಿಕೊಂಡು ಹೆಚ್ಚಿನ ಲಾಭ ಪಡೆಯಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮರಳಿ ಹೇಳಿದ್ದಾರೆ.
'ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟಿದೆ. ಜಲಾಶಯದಲ್ಲಿ ನೀರಿಲ್ಲದೆ ಎರಡನೇ ಬೆಳೆ ಬೆಳೆಸಲು ಸಾಧ್ಯವಾಗುತ್ತಿಲ್ಲ. ಅಕಾಲಿಕ ಮಳೆಯಿಂದ ಕೈಗೆ ಬಂದ ಭತ್ತವೂ ಕೆಲವೆಡೆ ನೆಲಕ್ಕುರುಳಿದೆ. ಇದರಿಂದ ರೈತರು ಸಾಲದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ಭತ್ತಕ್ಕೆ ಅಧಿಕ ಬೆಲೆ ಸಿಕ್ಕರೆ ಅನುಕೂಲವಾಗಲಿದೆ' ಎಂದು ರೈತ ಮಹಿಳೆ ಮಲ್ಲಮ್ಮ ಚಿರತ್ನಾಳ ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications