ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಕ್ಕೆಜೋಳ ಬೆಳೆಯಲ್ಲಿ ಸೈನಿಕ ಹುಳು ಹತೋಟಿಗೆ ಸಲಹೆಗಳು

|
Google Oneindia Kannada News

ಬೆಂಗಳೂರು, ಜುಲೈ 10 : ಮುಂಗಾರು ಮಳೆ ವಿವಿಧ ಜಿಲ್ಲೆಗಳಲ್ಲಿ ಜೋರಾಗಿದ್ದು ಹಂಗಾಮಿನ ಕೃಷಿ ಚಟುವಟಿಕೆ ಆರಂಭವಾಗಿದೆ. ಮೆಕ್ಕೆಜೋಳ ಬೆಳೆಯಲ್ಲಿ ಹುಸಿ ಸೈನಿಕ ಹುಳುವಿನ ಭಾದೆಯು ಕಂಡು ಬಂದಿದ್ದು ಇದನ್ನು ನಿಯಂತ್ರಿಸಲು ಕೃಷಿ ಇಲಾಖೆ ರೈತರಿಗೆ ಸಲಹೆಗಳನ್ನು ನೀಡಿದೆ.

Recommended Video

Negative ಇದ್ರು Positive ಇದೆ ಬನ್ನಿ ಅಂತಾರೆ ಹುಷಾರ್ | Victoria Hospital | Oneindia Kannada

ರೈತರು ಪ್ರತಿ ಎಕರೆಗೆ 5ರಂತೆ ಮೋಹಕ ಬಲೆಗಳನ್ನು ಇಡುವುದು, ವ್ಯಾಪಕವಾಗಿ ಪೀಡೆ ಸಮೀಕ್ಷೆಯನ್ನು ಕೈಗೊಂಡು ಕೀಟದ ಉಪಸ್ಥಿತಿ ಮತ್ತು ಹರಡುವಿಕೆ ಬಗ್ಗೆ ನಿಗಾ ವಹಿಸಿಸುವ ಮೂಲಕ ಸೈನಿಕ ಹುಳುವಿನ ಕಾಟವನ್ನು ನಿಯಂತ್ರಣಕ್ಕೆ ತರಬಹುದು.

ಚಿತ್ರದುರ್ಗ; ಬೆಲೆ ಕುಸಿತದಿಂದ ಬೇಸತ್ತು ಬದನೆ ಬೆಳೆ ನಾಶಪಡಿಸಿದ ರೈತಚಿತ್ರದುರ್ಗ; ಬೆಲೆ ಕುಸಿತದಿಂದ ಬೇಸತ್ತು ಬದನೆ ಬೆಳೆ ನಾಶಪಡಿಸಿದ ರೈತ

ಮೆಕ್ಕೆಜೋಳದಲ್ಲಿ ದ್ವಿದಳ ಧಾನ್ಯಗಳನ್ನು ಅಂತರ ಬೆಳೆಗಳಾಗಿ ಬೆಳೆಯಬಹುದು. ಬೆಳೆಯ ಆರಂಭಿಕ ಹಂತದಲ್ಲಿ ಪಕ್ಷಿಗಳ ಆಕರ್ಷಣೆಗಾಗಿ ಹೊಲದಲ್ಲಿ ಪಕ್ಷಿ ಆಕರ್ಷಕಗಳನ್ನು ಸ್ಥಾಪಿಸುವುದು. ಹುಸಿ ಸೈನಿಕ ಹುಳವಿನ ಆಕರ್ಷಣೆಗಾಗಿ ಬಲೆ ಬೆಳೆಗಳಾದ ನೇಪಿಯರ್ ಹುಲ್ಲು ಬೆಳೆಯನ್ನು 4 ರಿಂದ 5 ಸಾಲುಗಳಲ್ಲಿ ಮೆಕ್ಕೆಜೋಳ ಬೆಳೆಯ ಸುತ್ತಲು ಬೆಳೆಯುವುದು.

ಬಲೆ ಬೆಳೆಯ ಮೇಲೆ ಕೀಟ ಭಾದೆಯ ಲಕ್ಷಣಗಳು ಗೋಚರಿಸಿದ ತಕ್ಷಣ 5% ಎನ್.ಎಸ್.ಕೆ.ಇ ಅಥವಾ 1500 ಪಿಪಿಎಮ್ ಬೇವಿನ ಎಣ್ಣೆಯನ್ನು 5 ಮಿ.ಲೀ ಪ್ರತಿ ಲೀಟರ್ ನೀರಿನಲ್ಲಿ ಸಿಂಪಡಿಸಬೇಕು.

ಎತ್ತುಗಳನ್ನು ಪೋಷಿಸಲಾಗದೆ ಅಧುನಿಕ ಯಂತ್ರದ ಕಡೆ ವಾಲಿದ ರೈತಎತ್ತುಗಳನ್ನು ಪೋಷಿಸಲಾಗದೆ ಅಧುನಿಕ ಯಂತ್ರದ ಕಡೆ ವಾಲಿದ ರೈತ

Tips To Control Sainika Hulu In Maize Crop

ಕೀಟಗಳು ಗುಂಪಾಗಿ ಇಟ್ಟಿರುವ ಮೊಟ್ಟೆ ಹಾಗೂ ಮರಿ ಹುಳುಗಳನ್ನು ಕೈಯಿಂದ ಆಯ್ದು ನಾಶಪಡಿಸಬಹುದು. ಎಕರೆಗೆ 15ರಂತೆ ಮೋಹಕ ಬಲೆಗಳನ್ನು ಬಳಸಿ ಗಂಡು ಪತಂಗಗಳನ್ನು ಹಿಡಿದು ನಾಶಪಡಿಸಬಹುದಾಗಿದೆ. ಕೀಟಬಾಧೆ ತೀವ್ರತೆ ಕಡಿಮೆ ಇದ್ದರೆ ಅಥವಾ ಮರಿ ಹುಳುಗಳ ನಿರ್ವಹಣೆಗೆ ಜೈವಿಕ ಕೀಟ ನಾಶಕವಾದ ನ್ಯೂಮೋರಿಯಾರಿಲೆ ಶಿಲೀಂದ್ರವನ್ನು 2 ಗ್ರಾಂ, ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸಬೇಕು.

ಕರ್ನಾಟಕ ಸರ್ಕಾರದಿಂದ ದೇಶ ದ್ರೋಹದ ಕೆಲಸ: ರೈತ ಸಂಘಕರ್ನಾಟಕ ಸರ್ಕಾರದಿಂದ ದೇಶ ದ್ರೋಹದ ಕೆಲಸ: ರೈತ ಸಂಘ

ವಿಷ ಪ್ರಾಷಣ ಬಳಕೆ : 10ಕೆಜಿ ಗೋಧಿ ತವಡು ಅಥವಾ ಅಕ್ಕಿ ತವಡು, 1 ಕೆಜಿ ಬೆಲ್ಲಕ್ಕೆ ಬೇಕಾಗುವಷ್ಟು ತಕ್ಕ ಮಟ್ಟಿಗೆ ನೀರನ್ನು ಬೆರೆಸಿಟ್ಟು ರಾತ್ರಿಯಿಡಿ ಕೊಳೆಯಲು ಬಿಟ್ಟು ಮಾರನೆ ದಿನ 100 ಗ್ರಾಂ ಥಯೋಡಿರ್ಕ್ ಕೀಟನಾಶಕ ಮಿಶ್ರಣ ಮಾಡಿ ಸಂಜೆ 5 ಗಂಟೆಯ ನಂತರ ಬೆಳೆಯ ಸುಳಿಯಲ್ಲಿ ಉದಿರಿಸಬೇಕು.

English summary
Farmers facing Sainika Hulu problem for Maize crop in various districts of Karnataka. Here are the tips by the agriculture department to control it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X