ಬಿ. ಟಿ. ಹತ್ತಿಯ ಬೇಸಾಯ; ರೈತರಿಗೆ ಸಲಹೆಗಳು
ಬೆಂಗಳೂರು, ಜನವರಿ 24: ಬಿ. ಟಿ. ಹತ್ತಿ ಬೆಳೆಯುವ ರೈತರಿಗೆ ರಾಯಚೂರು ವಿಶ್ವ ವಿದ್ಯಾನಿಲಯದ ಕೃಷಿ ವಿಜ್ಞಾನಿಗಳು ಸಲಹೆಗಳನ್ನು ನೀಡಿದ್ದಾರೆ. ಕಳಪೆ ಬೀಜವನ್ನು ಸರಬರಾಜು, ಮಾರಾಟದ ಬಗ್ಗೆಯೂ ಎಚ್ಚರಿಂದ ಇರಬೇಕು ಎಂದು ರೈತರಿಂದ ಸಲಹೆ ನೀಡಲಾಗಿದೆ.
ಬಿ.ಟಿ. ಹತ್ತಿಯ ಬಿತ್ತನೆ ಕಾಲಾವಧಿಯು ಜೂನ್ ಮೊದಲ ವಾರದಿಂದ ಜುಲೈ ಮೂರನೇ ವಾರದವರೆಗೆ ಇದ್ದು, ಈ ಕಾಲಾವಧಿಯ ಶಿಫಾರಸ್ಸನ್ನು ಅನುಸರಿಸುವಂತೆ ಕೃಷಿ ವಿಜ್ಞಾನಿಗಳು ಸೂಚಿಸಿದ್ದಾರೆ.

ಹತ್ತಿ ಬೆಳೆಯುವ ರೈತರಿಗಾಗಿ ವಿವಿಧ ಬೀಜದ ಕಂಪನಿಗಳು ಅನೇಕ ಬಿ.ಟಿ. ಹತ್ತಿ ತಳಿಗಳನ್ನು ಮಾರಾಟಕ್ಕೆ ದಾಸ್ತಾನು ಇಟ್ಟಿರುತ್ತಾರೆ. ಈ ಎಲ್ಲಾ ತಳಿಗಳು ಬಿ.ಟಿ. ತಳಿಗಳಾಗಿದ್ದು, ಅವುಗಳಲ್ಲಿ ಹೆಚ್ಚಿನ ವ್ಯತ್ಯಾಸವಿರುವುದಿಲ್ಲ ಎಂದು ಹೇಳಿದ್ದಾರೆ.
ರೈತರು ಯಾವುದೇ ಒಂದು ಕಂಪನಿಯ ಯಾವುದಾದರೊಂದು ತಳಿಯು ಬೇಕೆಂದಲ್ಲಿ ಮಾರುಕಟ್ಟೆಯಲ್ಲಿ ಅಂತಹ ತಳಿಯ ಕೊರತೆಯುಂಟಾಗಿ, ಅಧಿಕ ಬೆಲೆಗೆ ಮಾರಾಟವಾಗುವುದು ಹಾಗೂ ಕಳಪೆ ಬೀಜವನ್ನು ಸರಬರಾಜು ಮಾಡುವುದು ಇತ್ಯಾದಿ ಅವ್ಯವಹಾರ ಪ್ರಾರಂಭವಾಗಿ, ರೈತರಿಗೆ ಅನ್ಯಾಯ ವಾಗುವುದೆಂಬುದನ್ನು ತಿಳಿಯಬೇಕು.
ಪ್ಯಾಕೆಟ್ ಪರಿಶೀಲನೆ ನಡೆಸಿ; ಹತ್ತಿ ಬೆಳೆಗಾರರು ಮಾರುಕಟ್ಟೆಯಲ್ಲಿರುವ ವಿವಿಧ ತಳಿಗಳಲ್ಲಿ ಲಭ್ಯತೆಯ ಮೇಲೆ ಆಯ್ಕೆ ಮಾಡಿಕೊಳ್ಳಬೇಕು. ಆದರೆ ಕೊಳ್ಳುವ ಮುನ್ನ ಪ್ಯಾಕೇಟ್ನ್ನು ಪರಿಶೀಲಿಸಿ, ತಯಾರಕರ ಕಂಪನಿಯ ಪೂರ್ಣ ಹೆಸರು ಹಾಗೂ ವಿಳಾಸ ಸರಿಯಿರುವುದನ್ನು ಹಾಗೂ ಅದರೊಂದಿಗೆ ನಿಜ ಚೀಟಿ ಪತ್ರ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.
ಬಿತ್ತನೆ ಬೀಜವನ್ನು ಅಧಿಕೃತ ಪರವಾನಿಗೆ ಹೊಂದಿರುವವರಿಂದ ಕೊಂಡುಕೊಳ್ಳಬೇಕು ಹಾಗೂ ಮಾರಾಟಗಾರರಿಂದ ಕಡ್ಡಾಯವಾಗಿ ತಪ್ಪದೇ ರಸೀದಿಯನ್ನು ಕೇಳಿ ಪಡೆಯಬೇಕು. ಆ ತಳಿಯ ಬೇಸಾಯ ಪದ್ಧತಿಯ ಬಗ್ಗೆ ಕರಪತ್ರವನ್ನು ಪಡೆಯಬೇಕು.
ಬಿತ್ತನೆ ಮಾಡಿದ ನಂತರ ಬೆಳೆ ಕಟಾವು ಆಗುವವರೆಗೆ ಬೀಜದ ಚೀಲ, ಅಲ್ಪ ಪ್ರಮಾಣದ ಬೀಜ, ರಸೀದಿ ಹಾಗೂ ಕರಪತ್ರವನ್ನು ಕಾಯ್ದಿರಿಸಿಕೊಳ್ಳಬೇಕು. ಬೆಳೆಯಲ್ಲಿ ಸಮಸ್ಯೆಯುಂಟಾದಾಗ ಇವುಗಳು ಪ್ರಯೋಜನಕ್ಕೆ ಬರುತ್ತವೆ ಎಂದು ತಿಳಿಸಲಾಗಿದೆ.
ಪ್ರತಿ ಬಿ.ಟಿ. ಹತ್ತಿಯ ಪ್ಯಾಕೇಟ್ ಜೊತೆ 125 ಗ್ರಾಂ. ಬಿ.ಟಿ. ಯೇತರ (ರೆಪ್ಯೂಜಿ) ಬೀಜಗಳನ್ನು ನೀಡುತ್ತಿದ್ದು, ರೈತರು ತಮ್ಮ ಹೊಲದ ಸುತ್ತಲೂ 4 ಸಾಲಿನಲ್ಲಿ ಈ ಬೀಜಗಳನ್ನು ಕಡ್ಡಾಯವಾಗಿ ಬಿತ್ತನೆ ಮಾಡಬೇಕು. ಇದರಿಂದ ಕಾಯಿಕೊರಕ ಹುಳುವಿನಲ್ಲಿ ಬಿ.ಟಿ. ನಿರೋಧಕ ಶಕ್ತಿಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಹಾಗೂ ಕಾಯಿಕೊರಕದ ಬಾಧೆಯನ್ನು ಗುರುತಿಸಲು ಅನುಕೂಲವಾಗುತ್ತದೆ.
ಕೆಲವೊಂದು ರೈತರು ಬಿ.ಟಿ. ಯೇತರ ಬೀಜವನ್ನು ಹುಸಿ ಗುಣಿಗಳಲ್ಲಿ ಬಳಸುತ್ತಿರುವುದು ಕಂಡು ಬರುತ್ತದೆ. ಆದರೆ ಹುಸಿಗುಣಿಗಳಿಗಾಗಿ ಬಳಸದೇ ಮೇಲೆ ತಿಳಿಸಿದಂತೆ ಅನುಸರಿಸಲು ರೈತರಿಗೆ ಕೋರಿದೆ.
ಬಿತ್ತನೆ ಬೀಜಕ್ಕಾಗಿ ಹತ್ತಿ ಬೆಳೆಯುವ ರೈತರು ಕಡ್ಡಾಯವಾಗಿ ಕಂಪನಿಯೊಂದಿಗೆ ಅಥವಾ ಸೀಡ್ ಆರ್ಗನೈಸರ್ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡಿರಬೇಕು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಹಾಗೂ ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications