ಕುಸಿದ ಟೊಮ್ಯಾಟೊ ಬೆಲೆ: ಮೈಸೂರಿನಲ್ಲಿ ರೈತರು ಮಾಡಿದ್ದು ಹೀಗೆ
ಮೈಸೂರು, ಮಾರ್ಚ್ 30: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ದೇಶದಲ್ಲಿ ಲಾಕ್ ಡೌನ್ ಗೆ ಆದೇಶಿಸಲಾಗಿದ್ದು, ಮೈಸೂರಿನಲ್ಲಿಯೂ ಅದು ಮುಂದುವರೆದಿದೆ. ಆದರೂ ರೈತರಿಗೆ ತರಕಾರಿಯನ್ನು ಎಪಿಎಂಸಿ ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಅನುಮತಿ ನೀಡಲಾಗಿತ್ತು.
Recommended Video
ಎಪಿಎಂಸಿ ಮಾರುಕಟ್ಟೆಗೆ ತರಕಾರಿಗಳನ್ನು ಹಾಕಲು ರೈತರಿಗೆ ಭಾನುವಾರ ಅವಕಾಶ ಕಲ್ಪಿಸಲಾಗಿದ್ದು, ಕೆಲವರು ಅಲ್ಲಿಯೇ ತರಕಾರಿ ಖರೀದಿಸಲು ಮುಗಿಬಿದ್ದದ್ದು ಕಂಡು ಬಂದಿದೆ. ಇಲ್ಲಿ ಹೋಲ್ ಸೇಲ್ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಚಿಲ್ಲರೆ ಮಾರಾಟಗಾರರು ನಿಮ್ಮ ಮನೆಯ ಬಾಗಿಲಿಗೇ ತರಕಾರಿಗಳನ್ನು ಕೊಂಡು ತರುತ್ತಾರೆ. ನೀವು ಅಲ್ಲಿಯೇ ಖರೀದಿಸಿ, ಇಲ್ಲಿಗೆ ಬರಬೇಡಿ ಎಂದು ಎಪಿಎಂಸಿ ಅಧಿಕಾರಿಗಳು ಗ್ರಾಹಕರನ್ನು ವಾಪಾಸ್ ಕಳಿಸಿದ್ದಾರೆ.
ಆದರೆ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮ್ಯಾಟೊಗೆ ಉತ್ತಮ ಬೆಲೆ ಸಿಗದೆ, ಕೆ.ಜಿ ಗೆ ಕೇವಲ ಒಂದು ರುಪಾಯಿಗೆ ಸಗಟು ವ್ಯಾಪಾರಸ್ಥರು ಕೇಳಿದ ಕಾರಣ, ರೈತರು ತಾವು ಬೆಳೆದ ಟೊಮ್ಯಾಟೊವನ್ನು ಎಪಿಎಂಸಿ ಆವರಣದಲ್ಲಿಯೇ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರೈತರಿಗೆ ತರಕಾರಿ ಬೆಳೆದ ಶ್ರಮಕ್ಕೆ ತಕ್ಕ ಬೆಲೆ ಸಿಗುತ್ತಿಲ್ಲ, ಮತ್ತೊಂದೆಡೆ ಮಧ್ಯವರ್ತಿಗಳು ತಮ್ಮ ಜೇಬನ್ನು ತುಂಬಿಸಿಕೊಳ್ಳುತ್ತಿರುವುದು ರೈತರಲ್ಲಿ ಬೇಸರ ಮೂಡಿಸಿದೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications