ಬಿಟಿ ಬದನೆ ಭವಿಷ್ಯ ಫೆ.10ಕ್ಕೆ: ಜೈರಾಮ್ ರಮೇಶ್

ಉತ್ಪಾದಕರು ಹಾಗೂ ಗ್ರಾಹಕರ ದೃಷ್ಟಿಯಿಂದ ನೋಡಿ ನಾನು ನಿರ್ಣಯ ಕೈಗೊಳ್ಳುತ್ತೇನೆ. ಯಾವುದೆ ವಿಜ್ಞಾನಿಗಳ ಗುಂಪು, ಸರ್ಕಾರೇತರ ಸಂಸ್ಥೆ ಅಥವಾ ರಾಜಕೀಯ ಪ್ರೇರಿತವಾಗಿ ನಿರ್ಧಾರ ಕೈಗೊಳುವುದಿಲ್ಲ ಎಂದರು. ಜೈರಾಮ್ ಅವರನ್ನುಕುಲಾಂತರಿ ಬದನೆ ಹೊರತಂದಿರುವ ಅಮೆರಿಕ ಮೂಲದ ಮೊನ್ಸಾಂಟೋ ಕಂಪೆನಿಯ ಎಜೆಂಟ್ ಎಂದು ಕೆಲ ರೈತ ಮುಖಂಡರು ಆರೋಪಿಸಿದಾಗ, ಕೋಪಗೊಂಡ ಸಚಿವರು, ನಾನು ಎಜೆಂಟ್ ಆಗಿದ್ದರೆ ಇಂದು ನಿಮ್ಮ ಮುಂದೆ ಕುಳಿತು ನಿಮ್ಮ ಸಲಹೆ ಸೂಚನೆ ಕೇಳುವ ಅಗತ್ಯ ಇರಲಿಲ್ಲ. ಅಸಂಬದ್ಧವಾಗಿ ಮಾತನಾಡುವುದನ್ನು ಬಿಡಿ. ಇಲ್ಲವೇ ವೈದ್ಯರಿಂದ ಮಾನಸಿಕ ಚಿಕಿತ್ಸೆ ಪಡೆಯಿರಿ ಎಂದರು.
ಕಳೆದ ಅಕ್ಟೋಬರ್ ನಲ್ಲಿ ಕುಲಾಂತರಿ ಬದನೆಯನ್ನು ವಾಣಿಜ್ಯ ಬೆಳೆಯಾಗಿ ಬೆಳಸಲು ಯಾವುದೇ ಅಡ್ಡಿಯಿಲ್ಲ ಎಂದು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿತ್ತು. genetically modified (GM) ಬದನೆಗೆ Genetic Engineering Approval Committee ಕೂಡ ಒಪ್ಪಿಗೆ ನೀಡಿತ್ತು.ಆದರೆ, ಸಣ್ಣ್ಣ ಇಳುವರಿ ರೈತರಿಗೆ ಮಾರಕ, ಅಲ್ಲದೆ ಬಿಟಿ ಬದನೆ ಸೇವನೆ ಇಂದ ಆರೋಗ್ಯಕ್ಕೆ ಹಾನಿಕರ ಎಂದು ರೈತ ಸಂಘಟನೆಗಳು ವಾದಿಸುತ್ತಾ ಬಂದಿವೆ. ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜೈರಾಮ್ ರಮೇಶ್ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಮಾಹಿತಿ, ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದ್ದರು.
ಇಂದು ನಡೆದ ಸಂವಾದ ಕಾರ್ಯಕ್ರಮಕ್ಕೂ ಮುನ್ನ ಮಾನ್ಸಾಂಟೋ ಕಂಪೆನಿ ವಿರುದ್ಧ ಘೋಷಣೆ ಕೂಗುತ್ತಾ, ಸಚಿವರ ವಿರುದ್ಧ ಕೆಲ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹೈದರಾಬಾದ್, ಕೋಲ್ಕತ್ತಾ ದಲ್ಲೂ ಕೂಡ ಜೈರಾಮ್ ರಮೇಶ್ ವಿರುದ್ಧ ರೈತರು ಪ್ರತಿಭಟನೆ ಮಾಡಿದ್ದರು. ಸಂವಾದ ಕಾರ್ಯಕ್ರಮದಲ್ಲೂ ಪ್ರತಿಭಟನೆಗೆ ರೈತರು ಮುಂದಾದಾಗ ಪೊಲೀಸರು ಎಚ್ಚರಿಕೆ ವಹಿಸಿ ಅವರನ್ನು ಹೊರ ಕಳಿಸಿದರು. ಕೆಲ ರೈತರು ಅಧಿಕ ಇಳುವರಿ ಹಾಗೂ ಆರ್ಥಿಕ ಭದ್ರತೆಯ ಕಾರಣ ಕೊಟ್ಟು ಬಿಟಿ ಬದನೆಗೆ ಓಕೆ ಅಂದರು.ಆದರೆ, ಭಾಗವಹಿಸಿದ್ದವರಲ್ಲಿ ಶೇ. 90 ರಷ್ಟು ಜನರ ಅಭಿಪ್ರಾಯ ಬಿಟಿ ಬದನೆ ವಿರುದ್ಧವಾಗಿತ್ತು. ಹಿರಿಯ ಸಾಹಿತಿ ಯುಆರ್ ಅನಂತಮೂರ್ತಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು ಸಮಾರಂಭ ಮುಕ್ತಾಯಕ್ಕೂ ಮುನ್ನ ಆಗಮಿಸಿ, ರೈತರಿಗೆ ಬೆಂಬಲ ಸೂಚಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications