ರಾಯಚೂರು: ಕೊನೇ ಭಾಗದ ರೈತರಿಗೆ ತಲುಪದ ತುಂಗಭದ್ರಾ ಕಾಲುವೆ ನೀರು, ಭುಗಿಲೆದ್ದ ಆಕ್ರೋಶ
ರಾಯಚೂರು, ಅಕ್ಟೋಬರ್, 16: ತುಂಗಭದ್ರಾ ಜಲಾಶಯದ ಎಡದಂಡೆ ಮುಖ್ಯಕಾಲುವೆಗೆ ಕಳೆದ ಮೂರು ತಿಂಗಳಿಂದ 4,100 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟರೂ ಕೆಳಭಾಗದ ವಿತರಣಾ ಕಾಲುವೆ 104ಕ್ಕೆ ಬರದೆ ಇರುವುದರಿಂದ ರೈತರಿಗೆ ತೀವ್ರ ಸಮಸ್ಯೆಯಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆ (ಟಿಎಲ್ಬಿಸಿ) ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ರೈತರ ಜೀವನಾಡಿಯಾಗಿದ್ದು, ಮುನಿರಾಬಾದ್ನಿಂದ ಆರಂಭಗೊಂಡ ಕಾಲುವೆ ರಾಯಚೂರು ತಾಲೂಕಿನ ಕೊನೆ ಭಾಗದವರಿಗೆ ವ್ಯಾಪ್ತಿ ಹೊಂದಿದೆ. ನೀರಾವರಿ ಇಲಾಖೆ ಮಾಹಿತಿಯಂತೆ 6 ಲಕ್ಷ ಎಕರೆ ನೀರಾವರಿ ಜಮೀನಿದ್ದು, ಇದರಲ್ಲಿ 2 ಲಕ್ಷಕ್ಕೂ ಹೆಚ್ಚು ಎಕರೆ ಅಕ್ರಮವಾಗಿ ನೀರಾವರಿ ಇದೆ. ಆದರೆ, ಜಿಲ್ಲೆಯ ಜನಪ್ರತಿನಿಧಿಗಳು ನೀರು ತರಲು ಮುಂದಾಗದೆ ನಿರಾಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಬರಗಾಲ ಅವರಿಸಿದೆ. ಇತ್ತ ಮಳೆ ಅಭಾವ ಕಾಡಿದೆ. ಮುಖ್ಯಕಾಲುವೆ 47ನೇ ಮೈಲ್ನಲ್ಲಿ 11ಅಡಿ 61ರಲ್ಲಿ 9,625, 69ರಲ್ಲಿ 7.8, 90ನೇ ಮೈಲ್ನಲ್ಲಿ 3.1 ಗೇಜ್ ಇದೆ. 104ನೇ ಮೈಲ್ ಬಳಿಯ ಮುಖ್ಯ ಕಾಲುವೆಗೆ ನೀರು ತಲುಪದ ಕಾರಣ ರೈತರು ಭತ್ತ ಬೆಳೆಯುವ ಆಸೆ ಬಿಟ್ಟಿದ್ದಾರೆ. ಎಡದಂಡೆ ಕಾಲುವೆ ಮುಖ್ಯ ಮೈಲ್ಗಳ ಬಳಿ ನಿಗದಿತ ಗೇಜ್ ಕಾಯ್ದುಕೊಳ್ಳಲು ನೀರಾವರಿ ನಿಗಮದ ಎಂಜಿನಿಯರ್ಗಳು ವಿಫಲರಾಗಿದ್ದಾರೆ.
ಸಮೀಪದ 69ನೇ ಮೈಲ್ ಬಳಿಯ ಮುಖ್ಯ ಕಾಲುವೆಯಲ್ಲಿ 9.1 ಅಡಿ ನೀರು ಹರಿಯಬೇಕು. ಅದರೆ, ಕಳೆದ ಮೂರು ತಿಂಗಳಿಂದ ನೀರು ಹರಿಯುತ್ತಿರುವ ಕಾರಣ ಕೊನೆ ಭಾಗದ ರೈತರ ಗದ್ದೆಗಳಿಗೆ ನೀರು ತಲುಪಿಲ್ಲ. ಎಡದಂಡೆ ಮುಖ್ಯ ಕಾಲುವೆಯಲ್ಲಿ ಹಗಲು ಹೊತ್ತಿನಲ್ಲಿ ಗೇಜ್ ಸ್ವಲ್ಪ ಹೆಚ್ಚು ಕಮ್ಮಿ ಇರಲಿದೆ. ರಾತ್ರಿ ಹೊತ್ತು ಕಾಲುವೆಯಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತಿರುವ ಒಳ ಮರ್ಮ ಗೊತ್ತಾಗುತ್ತಿಲ್ಲ ಎನ್ನಲಾಗಿದೆ.
ತುಂಗಭದ್ರಾ ಜಲಾಶಯದಲ್ಲಿ 89 ಟಿಎಂಸಿ ನೀರು ಸಂಗ್ರಹಗೊಂಡಿದ್ದರೂ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಿಗದಿತ ಗೇಜ್ ಕಾಯ್ದುಕೊಳ್ಳಲು ನೀರಾವರಿ ನಿಗಮದ ಎಂಜಿನಿಯರ್ಗಳು ವಿಫಲರಾಗಿದ್ದು, ಮೇಲಧಿಕಾರಿಗಳು ಕ್ರಮ ಕೈಗೊಳ್ಳಲು ಚಿಂತನೆ ನಡೆಸಬೇಕಿದೆ. ಜಿಲ್ಲೆಯ 7 ತಾಲೂಕುಗಳ ಪೈಕಿ ಸರಕಾರ 6 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಿದೆ. ಮಳೆ ಅಭಾವದಿಂದ ಸಂಕಷ್ಟಕ್ಕೆ ಸಿಲುಕಿದ ರೈತರು ಉಳಿದ ಅಲ್ಪ ಸ್ವಲ್ಪ ಬೆಳೆ ರಕ್ಷಣೆಗೆ ರೈತರು ಕೊಳವೆ ಬಾವಿ ಮೊರೆ ಹೋಗಿದ್ದಾರೆ.
ನಿರಂತರ ಲೋಡ್ ಶೆಡ್ಡಿಂಗ್ನಿಂದ ರೈತರು ಇತ್ತೀಚೆಗೆ ಜೆಸ್ಕಾಂ ಇಲಾಖೆಗೆ ಮುತ್ತಿಗೆ ಹಾಕಿ 24 ಗಂಟೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿದರೂ ಕ್ರಮವಾಗಿಲ್ಲ. ರೈತರ ಬೆನ್ನಿಗೆ ನಿಲ್ಲಬೇಕಿದ್ದ ಜಿಲ್ಲಾಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಮಾತ್ರ ಯಾವುದೇ ಸಭೆ ನಡೆಸದೇ ಮೌನವಹಿಸಿದ್ದಾರೆ ಎಂಬುದು ರೈತರ ಆರೋಪವಾಗಿದೆ. ಎಡದಂಡೆ ನಾಲೆಯಿಂದ ಕೆಳಭಾಗದ ರೈತರಿಗೆ ನೀರು ಹರಿಸಲು ಒತ್ತಾಯಿಸಿ ನಿರಂತರ ಪಕ್ಷಾತೀತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿವೆ.
ಕೆಲ ರಾಜಕೀಯ ಪಕ್ಷಗಳ ನಾಯಕರು ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಅಸ್ತ್ರವನ್ನಾಗಿ ಮಾಡಿಕೊಂಡಿದ್ದು ತಿಕ್ಕಾಟ ಹೆಚ್ಚಾಗಿದೆ. ಬಿಜೆಪಿ ನಾಯಕರು ಒಂದು ದಿನ ಹೋರಾಟ ಮಾಡಿದರೆ, ಕಾಂಗ್ರೆಸ್ ನಾಯಕರು ಮತ್ತೊಂದು ದಿನ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟ ತೀವ್ರಗೊಳಿಸಲು ಶೀಘ್ರವೇ ವಿವಿಧ ಪಕ್ಷಗಳ ಮುಖಂಡರು ರಾಯಚೂರು ಹೊರ ವಲಯದ ಸಾತ್ ಮೈಲ್ ಹತ್ತಿರ ರಾಜ್ಯ ಹೆದ್ದಾರಿ ತಡೆದು ಹೋರಾಟ ನಡೆಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಮಳೆ ಇಲ್ಲದೆ ರೈತರಿಗೆ ಸಮಸ್ಯೆಯಾಗಿದೆ. ಉಳಿದ ಅಲ್ಪ ಸ್ವಲ್ಪ ಬೆಳೆ ಉಳಿಸಿಕೊಳ್ಳಲು ಕೊಳವೆ ಬಾವಿಯಿಂದ ನೀರು ಹರಿಸಬೇಕೆಂದರೆ ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್ ಎದುರಾಗಿದೆ. ಸರಕಾರ ತುಂಗಭದ್ರಾ ಎಡದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ಹರಿಸಲು ಕ್ರಮಕೈಗೊಳ್ಳದಿದ್ದರೆ ಅಕ್ಟೋಬರ್ 16ರಂದು ನಗರದ ಸಾತ್ ಮೇಲ್ನಲ್ಲಿ ನಿರಂತರ ರಸ್ತೆ ತಡೆ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications