ಅತ್ಯುತ್ತಮ ರೈತ ಮತ್ತು ರೈತ ಮಹಿಳಾ ಪ್ರಶಸ್ತಿಗಳಿಗೆ ಅರ್ಜಿ
ಬೆಂಗಳೂರು, ಜುಲೈ 27 : ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಈ ಕೆಳಕಂಡ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

ರಾಜ್ಯ ಮಟ್ಟದ ಪ್ರಶಸ್ತಿಗಳು
1. ದಿವಂಗತ ಸಿ.ಭೈರೇಗೌಡ ರಾಜ್ಯ ಮಟ್ಟದ ರೈತ ಪ್ರಶಸ್ತಿ
2. ಡಾ|| ಎಂ.ಹೆಚ್.ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ
3. ಡಾ|| ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ
4. ಡಾ|| ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
5. ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿ

ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಶಸ್ತಿಗಳು
1. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿ
2. ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ ಮತ್ತು ಯುವ ರೈತ ಮಹಿಳಾ ಪ್ರಶಸ್ತಿ
ಮೇಲಿನ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವೆಂಬರ್-2017ರಲ್ಲಿ ಆಯೋಜಿಸಲಿರುವ ಕೃಷಿಮೇಳ-2017ರ ಸಂದರ್ಭದಲ್ಲಿ ನೀಡಲಾಗುತ್ತದೆ.
ನಿಗದಿತ ಅರ್ಜಿ ನಮೂನೆ ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಹೆಬ್ಬಾಳ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ), ವಿಸ್ತರಣಾ ಶಿಕ್ಷಣ ಘಟಕ(ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ.

ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲೂ ಲಭ್ಯವಿರುತ್ತದೆ.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 9, 2017.
ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು-560024 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-23418883.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications