ದಕ್ಷಿಣ ಭಾರತದಲ್ಲಿಯೇ ಬೆಂಗಳೂರು ಕೃಷಿ ವಿವಿ ಅತ್ಯುತ್ತಮ
ಬೆಂಗಳೂರು, ಜುಲೈ 20 : ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ದಕ್ಷಿಣ ಭಾರತ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರಥಮ ಸ್ಥಾನ ಮತ್ತು ರಾಷ್ಟ್ರಮಟ್ಟದ ಕೃಷಿ ವಿಶ್ವವಿದ್ಯಾಲಯಗಳಲ್ಲಿ 3ನೇ ಸ್ಥಾನ ಪಡೆದು ಬೆಂಗಳೂರಿಗೆ ಹೆಮ್ಮೆ ತಂದಿದೆ.
ಕೃಷಿ ಮತ್ತು ಅದಕ್ಕೆ ಸಂಬಂಧಪಟ್ಟಂತಹ 57 ಕೃಷಿ ವಿಶ್ವವಿದ್ಯಾಲಯಗಳು ಕಳೆದ 5 ವರ್ಷಗಳಲ್ಲಿ ಶಿಕ್ಷಣ, ಸಂಶೋಧನೆ, ವಿಸ್ತರಣೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಾಡಿದ ಸಾಧನೆ ಮತ್ತು ಸಲ್ಲಿಸಿದ ಸೇವೆಯನ್ನು ಮೌಲ್ಯಮಾಪನ ಮಾಡಿ ಕೃಷಿ ವಿಶ್ವವಿದ್ಯಾಲಯಗಳನ್ನು ನವದೆಹಲಿಯ ಕೃಷಿ ಅನುಸಂಧಾನ ಪರಿಷತ್ತು ಶ್ರೇಣೀಕರಿಸಿದೆ.

ಇದರ ಪ್ರಕಾರ ಬೆಂಗಳೂರಿನಲ್ಲಿರುವ ಕೃಷಿ ವಿಶ್ವವಿದ್ಯಾಲಯ, ಕರ್ನಾಟಕದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳು ಮಾತ್ರವಲ್ಲ, ದಕ್ಷಿಣ ಭಾರತದ ಕೃಷಿ ವಿಶ್ವವಿದ್ಯಾಲಯಗಳಲ್ಲಿಯೇ ಅತ್ಯುತ್ತಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕಳೆದ 5 ವರ್ಷಗಳಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ 16 ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. 177 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕಿರಿಯ ಸಂಶೋಧಕರ ಫೆಲೋಶಿಪ್, 62 ಶಿಕ್ಷಕರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಕೃಷಿಗೆ ಸಂಬಂಧಿಸಿದ 2 ತಂತ್ರಜ್ಞಾನಗಳನ್ನು ಪೇಟೆಂಟ್ ಮಾಡಲಾಗಿದೆ ಮತ್ತು 14 ತಂತ್ರಜ್ಞಾನಗಳನ್ನು ಪೇಟೆಂಟ್ ಗಾಗಿ ನೋಂದಾಯಿಸಲಾಗಿದೆ. ಕೃಷಿಯಲ್ಲಿ 5 ತಳಿಗಳು ಮತ್ತು 98 ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ, ಅವುಗಳನ್ನು ರೈತರ ಜಮೀನಿಗೆ ವರ್ಗಾಯಿಸಲಾಗಿದೆ.

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ 13ನೇ ಸ್ಥಾನದಲ್ಲಿದೆ. ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯ 25ನೇ ಸ್ಥಾನದಲ್ಲಿದೆ.
ದೇಶದ ಮೊದಲ 10 ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯಗಳು ಕೆಳಗಿನಂತಿವೆ
1) ಐಸಿಎಆರ್ - ನ್ಯಾಷನಲ್ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್, ಕರ್ನಲ್.
2) ಐಸಿಎಆರ್ - ಇಂಡಿಯನ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್, ನವದೆಹಲಿ.
3) ಪಂಜಾಬ್ ಅಗ್ರಿಕಲ್ಚರಲ್ ಯುನಿವರ್ಸಿಟಿ, ಲುಧಿಯಾನಾ.
4) ಚೌಧರಿ ಚರಣ್ ಸಿಂಗ್ ಹರ್ಯಾಣ ಅಗ್ರಿಕಲ್ಚರಲ್ ಯುನಿವರ್ಸಿಟಿ, ಹಿಸಾರ್.
5) ಐಸಿಎಆರ್ - ಇಂಡಿಯನ್ ವೆಟರ್ನರಿ ರಿಸರ್ಚ್ ಇನ್ಸ್ಟಿಟ್ಯೂಟ್, ಬರೇಲಿ.
6) ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್, ಬೆಂಗಳೂರು.
7) ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿ, ಕೊಯಮತ್ತೂರು.
8) ಜಿಬಿ ಪಂತ್ ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಅಂಡ್ ಟೆಕ್ನಾಲಜಿ, ಪಂತನಗರ.
9) ಗುರು ಆನಂದ್ ದೇವ್ ವೆಟರ್ನರಿ ಅಂಡ್ ಅನಿಮಲ್ ಸೈನ್ಸಸ್ ಯುನಿವರ್ಸಿಟಿ, ಲುಧಿಯಾನಾ.
10) ತಮಿಳುನಾಡು ವೆಟರ್ನರಿ ಅಂಡ್ ಅನಿಮಲ್ ಸೈನ್ಸಸ್ ಯುನಿವರ್ಸಿಟಿ, ಚೆನ್ನೈ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications