Union Budget 2023: ಪಿಎಂ ಕಿಸಾನ್ ಯೋಜನೆಯಡಿ ₹2.2 ಲಕ್ಷ ಕೋಟಿ ವರ್ಗಾವಣೆ ಮಾಡಿದ ಕೇಂದ್ರ: ವಿತ್ತ ಸಚಿವೆ
ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ವ್ಯವಸ್ಥೆಯು ಮಹತ್ವದ ಪಾತ್ರ ವಹಿಸಿದೆ. ಈ ವ್ಯವಸ್ಥೆಯಡಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan)ಯ ಫಲಾನುಭವಿಗಳ ಖಾತೆಗೆ 2.2 ಲಕ್ಷ ಕೋಟಿ ಹಣ ವರ್ಗಾವಣೆ ಮಾಡಿದೆ.
ನವದೆಹಲಿ, ಫೆಬ್ರುವರಿ 01: ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ವ್ಯವಸ್ಥೆಯು ಮಹತ್ವದ ಪಾತ್ರ ವಹಿಸಿದೆ. ಈ ವ್ಯವಸ್ಥೆಯಡಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan)ಯ ಫಲಾನುಭವಿಗಳ ಖಾತೆಗೆ 2.2 ಲಕ್ಷ ಕೋಟಿ ಹಣ ವರ್ಗಾವಣೆ ಮಾಡಿದೆ.
ಕೇಂದ್ರ ಆಯವ್ಯಯ 2023 (Union Budget 2023-24) ಮಂಡನೆ ವೇಳೆ ಬುಧವಾರ ಈ ಕುರಿತು ಮಾಹಿತಿ ತಿಳಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಇನ್ನಿತರ ಎಲ್ಲ ವಲಯಗಳಂತೆ ಕೃಷಿ ಕ್ಷೇತ್ರದಲ್ಲೂ ಡಿಜಿಟಲ್ ಬೆಳೆವಣಿಗೆ ಆಗುತ್ತಿದೆ. ಡಿಜಿಟಲ್ ಪಾವತಿ ಹೆಚ್ಚಾಗುತ್ತಿದೆ. ಕೃಷಿ ವಲಯದಲ್ಲಿನ ಸಾಂಸ್ಥಿಕ ಸಾಲವು 2021ರಲ್ಲಿ ರೂ. 15.8 ಲಕ್ಷ ಕೋಟಿ ಇದ್ದದ್ದು, 2022 ನೇ ವರ್ಷದ ಹಣಕಾಸು ಸಾಲಿನಲ್ಲಿ ರೂ.18.6 ಲಕ್ಷ ಕೋಟಿಗೆ ಏರಿಕೆ ಆಗಿದೆ. ಈ ಮೂಲಕ ಸರ್ಕಾರ ವರ್ಷದಿಂದ ವರ್ಷಕ್ಕೆ ಕೃಷಿಗೆ ಆದ್ಯತೆ ನೀಡುತ್ತಿರುವುದು ಹೆಚ್ಚಾಗಿರುವುದು ಇದರಿಂದ ತಿಳಿಯುತ್ತದೆ ಎಂದು ಹೇಳಿದರು.

ಕೃಷಿ ವಲಯ-ರೈತರ ಅಭಿವೃದ್ಧಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗಳಂತಹ ಯೋಜನೆಗಳು ಸಹಕಾರಿಯಾಗಿವೆ. ಇಂತಹ ಯೋಜನೆಗಳನ್ನು ಹೆಚ್ಚು ಬೆಂಬಲಿಸುವ ಸರ್ಕಾರ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡುತ್ತದೆ. ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಡಿಜಿಟಲ್ ಮೂಲಸೌಕರ್ಯದ ಪಾತ್ರವು ಹೆಚ್ಚಾಗಿದೆ ಎಂದರು.
ದೇಶದ ನಾಗರಿಕರಿಗೆ ಡಿಜಿಟಲ್ ಸೇವೆ, ಎಲ್ಲ ರಂಗದಲ್ಲಿ ಪರಿಣಾಮಕಾರಿಯಾಗಿ ಡಿಜಿಟಲ್ ವ್ಯವಸ್ಥೆ ಅಳವಡಿಕೆ, ಡಿಜಿಟಲ್ನಲ್ಲಿ ಪ್ರಮಾಣಪತ್ರ ಮತ್ತು ದಾಖಲೆ ಸಂಗ್ರಹ ಅವಕಾಶ ನೀಡಿದಾಗ ಮಾತ್ರವೇ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮಕ್ಕೆ ಅರ್ಥ ಬರುತ್ತಿದೆ ಎಂದು ಅಭಿಪ್ರಾಯಪಟ್ಟರು.

2024 ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪೂರ್ಣವಧಿಗೆ ಅಧಿಕಾರದಲ್ಲಿರವ ಬಿಜೆಪಿಯು ಎರಡನೇ ಅವಧಿಯಲ್ಲಿ ಸಹ ಕೇಂದ್ರ ಬಜೆಟ್ ಪ್ರಸ್ತುತಪಡಿಸುತ್ತಿದೆ. ದೇಶದಲ್ಲಿ ಜ್ಞಾನ ಸಹಿತ ಆರ್ಥಿಕತೆಯಲ್ಲಿ ಪ್ರಗತಿ ಸಾಧಿಸುವುದು ಬಿಜೆಪಿಯ ಮೂಲಮಂತ್ರವಾಗಿದೆ ಎಂದು ವಿತ್ತ ಸಚಿವರು ತಿಳಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications