ಪ್ರತಿ ಕ್ವಿಂಟಾಲ್ ಭತ್ತದ ಕನಿಷ್ಠ ಬೆಂಬಲ ಬೆಲೆ 72 ರೂ. ಏರಿಕೆ
ನವದೆಹಲಿ, ಜೂನ್ 09: ಭತ್ತದ ಪ್ರತಿ ಕ್ವಿಂಟಾಲ್ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು 1940ರೂ.ಗೆ ಏರಿಕೆ ಮಾಡಿದೆ. 2021-22ರ ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್ಗೆ 72ರೂ. ಹೆಚ್ಚಳ ಮಾಡಲಾಗಿದೆ.
ಜೋಳದ ಕನಿಷ್ಠ ಬೆಂಬಲ ಬೆಲೆ ಕಳೆದ ವರ್ಷ ಕ್ವಿಂಟಾಲ್ಗೆ 2,150 ರೂ.ಗಳಿಂದ ಪ್ರಸಕ್ತ ವರ್ಷದಲ್ಲಿ ಕ್ವಿಂಟಾಲ್ಗೆ 2,250 ರೂ.ಗೆ ಹೆಚ್ಚಿಸಲಾಗಿದೆ ಎಂದು ತೋಮರ್ ಹೇಳಿದ್ದಾರೆ.
ರೈತರಿಗೆ ಸಹಾಯವಾಗಲೆಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಈ ನಿರ್ಧಾರಕೈಗೊಂಡಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದ್ದು ಭವಿಷ್ಯದಲ್ಲಿಯೂ ಇದು ಮುಂದುವರಿಯುತ್ತದೆ ಎಂದು ತಿಳಿಸಿದರು.

2021-22 ಬೆಳೆ ವರ್ಷಕ್ಕೆ(ಜುಲೈ-ಜೂನ್) ಭತ್ತದ ಎಂಎಸ್ಪಿಯನ್ನು ಕ್ವಿಂಟಲ್ಗೆ 1,940 ರೂ.ಗೆ ಹೆಚ್ಚಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಹಿಂದಿನ ವರ್ಷದ ಅವಧಿಯಲ್ಲಿ ಪ್ರತಿ ಕ್ವಿಂಟಲ್ಗೆ 1,868 ರೂ. ಇತ್ತು.
ಭತ್ತವು ಬೇಸಿಗೆಯ ಪ್ರಮುಖ ಬೆಳೆಯಾಗಿದೆ, ಹಾಗೆಯೇ ಇದರ ಬಿತ್ತನೆ ನೈರುತ್ಯ ಮುಂಗಾರು ಆರಂಭದಿಂದ ಪ್ರಾರಂಭವಾಗುತ್ತದೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್ ನಡುವೆ ಸಾಮಾನ್ಯ ಮುಂಗಾರನ್ನು ಹವಾಮಾನ ಇಲಾಖೆ ನಿರೀಕ್ಷಿಸಿದೆ.
2021-22ರ ಮಾರುಕಟ್ಟೆ ಋತುವಿನಲ್ಲಿ ಮುಂಗಾರು ಬೆಳೆಗಳ ಎಂ.ಎಸ್.ಪಿ. ಹೆಚ್ಚಳವು, 2018-19ರ ಕೇಂದ್ರ ಬಜೆಟ್ ಪ್ರಕಟಣೆಗೆ ಅನುಗುಣವಾಗಿ ಅಖಿಲ ಭಾರತ ಮಟ್ಟದ ಸರಾಸರಿ ಉತ್ಪಾದನಾ ವೆಚ್ಚದ (ಸಿಓಪಿ) ಕನಿಷ್ಠ 1.5 ಪಟ್ಟು ಹೆಚ್ಚಾಗಿದ್ದು, ರೈತರಿಗೆ ಸಮಂಜಸವಾದ ನ್ಯಾಯಯುತ ಸಂಭಾವನೆ ನೀಡುವ ಗುರಿ ಹೊಂದಿದೆ.
ರೈತರಿಗೆ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚಿನ ಆದಾಯವು ಬಜ್ರಾ (ಶೇ.85) ಮತ್ತು ನಂತರ ಉದ್ದು (ಶೇ.65) ಮತ್ತು ತೊಗರಿ (ಶೇ.62)ಗೆ ಸಂಬಂಧಿಸಿದಂತೆ ಹೆಚ್ಚು ಎಂದು ಅಂದಾಜಿಸಲಾಗಿದೆ. ಉಳಿದ ಬೆಳೆಗಳಿಗೆ, ರೈತರು ಮಾಡುವ ಉತ್ಪಾದನಾ ವೆಚ್ಚದ ಮೇಲೆ ಕನಿಷ್ಠ ಶೇ. 50ರಷ್ಟು ಆದಾಯ ಬರುತ್ತದೆ ಎಂದು ಅಂದಾಜಿಸಲಾಗಿದೆ.
ಸೂಕ್ತವಾದ ಬೇಡಿಕೆ - ಪೂರೈಕೆಯನ್ನು ಸಮತೋಲಿತವಾಗಿಡಲು ಈ ಕೆಳಕಂಡ ಬೆಳೆಗಳಿಗೆ ಸಂಬಂಧಿಸಿದಂತೆ ರೈತರು ದೊಡ್ಡ ಪ್ರದೇಶಕ್ಕೆ ಬದಲಾಗುವಂತೆ ಉತ್ತೇಜಿಸಲು ಎಣ್ಣೆ ಕಾಳುಗಳು, ಬೇಳೆಧಾನ್ಯಗಳು ಮತ್ತು ಒರಟು ಸಿರಿ ಧಾನ್ಯಗಳ ವಿಚಾರದಲ್ಲಿ ಎಂ.ಎಸ್.ಪಿಯನ್ನು ಮರು ಹೊಂದಿಕೆ ಮಾಡಲು ಕಳೆದ ಕೆಲವು ವರ್ಷಗಳಿಂದ ಸಂಘಟಿತ ಪ್ರಯತ್ನ ಮಾಡಲಾಗುತ್ತಿದೆ.
ಅಂತರ್ಜಲ ಮಟ್ಟಕ್ಕೆ ದೀರ್ಘಾವಧಿಯ ಪ್ರತಿಕೂಲ ಪರಿಣಾಮವಾಗದಂತೆ ಭತ್ತ-ಗೋಧಿಯನ್ನು ಬೆಳೆಯಲು ಸಾಧ್ಯವಾಗದ ಪ್ರದೇಶಗಳಲ್ಲಿ ಪೌಷ್ಟಿಕವಾಗಿ ಶ್ರೀಮಂತವಾದ ಪೌಷ್ಟಿಕಯುಕ್ತ ಸಿರಿಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಹೆಚ್ಚಿನ ಗಮನವನ್ನು ನೀಡಲಾಗುತ್ತಿದೆ.
ಜೊತೆಗೆ, ಸರ್ಕಾರವು 2018ರಲ್ಲಿ ಘೋಷಿಸಿದ ಅಂಬ್ರೆಲಾ ಯೋಜನೆಯಾದ "ಪ್ರಧಾನಮಂತ್ರಿ ಅನ್ನದಾತಾ ಆಯ್ ಸಂರಕ್ಷಣ್ ಅಭಿಯಾನ" (ಪಿಎಂ-ಎ.ಎ.ಎಸ್.ಎಚ್.ಎ) ರೈತರು ತಮ್ಮ ಉತ್ಪನ್ನಗಳಿಗೆ ಸೂಕ್ತ ಪ್ರತಿಫಲ ಪಡೆಯುವಲ್ಲಿ ಸಹಾಯ ಮಾಡುತ್ತದೆ.
ಈ ಅಂಬ್ರೆಲಾ ಯೋಜನೆ ಮೂರು ಉಪ-ಯೋಜನೆಗಳನ್ನು ಒಳಗೊಂಡಿದೆ, ಅಂದರೆ ಬೆಲೆ ಬೆಂಬಲ ಯೋಜನೆ (ಪಿ.ಎಸ್.ಎಸ್.) , ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮತ್ತು ಖಾಸಗಿ ಖರೀದಿ ಮತ್ತು ದಾಸ್ತಾನು ಯೋಜನೆ (ಪಿಪಿಎಸ್.ಎಸ್) ಪ್ರಾಯೋಗಿಕ ಆಧಾರದ ಮೇಲೆ ರೂಪಿಸಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications