ಕನಿಷ್ಠ ಆಮದು ಬೆಲೆ ಷರತ್ತಿಲ್ಲದೇ ಅಡಿಕೆ ಆಮದಿಗೆ ಕೇಂದ್ರ ಅನುಮತಿ
ಬೆಂಗಳೂರು, ಸೆಪ್ಟಂಬರ್ 29: ಕೇಂದ್ರ ಸರ್ಕಾರ ಭೂತಾನ್ನಿಂದ ಪ್ರತಿವರ್ಷ ಕನಿಷ್ಠ ಆಮದು ಬೆಲೆ (ಎಂಐಪಿ)ಯ ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಅನುಮತಿ ನೀಡಿದೆ.
ಕೇಂದ್ರ ಸರ್ಕಾರ 2017 ರಲ್ಲಿ ದೇಶದ ರೈತರ ರಕ್ಷಣೆ, ಹಿತ ದೃಷ್ಟಿಯಿಂದ ಪ್ರತಿ ಕೆಜಿ ಹಸಿರು ಅಡಿಕೆ ಆಮದಿನ ಮೇಲೆ ರೂ. 251 ಕನಿಷ್ಠ ಆಮದು ಬೆಲೆ (ಎಂಐಪಿ) ವಿಧಿಸಿತು. ನಂತರ 2018 ರಲ್ಲಿ ಪ್ರತಿ ಕಿಲೋಗ್ರಾಂಗೆ 251 ರೂ.ಗಿಂತ ಹೆಚ್ಚು ಬೆಲೆ ಇದ್ದರೆ ಯಾವುದೇ ರೂಪದ ಅಡಿಕೆ ಆಮದು ಮಾಡಿಕೊಳ್ಳಬಹುದು ಎಂದು ಸರ್ಕಾರ ಹೇಳಿತ್ತು. ಈ ಮಧ್ಯೆ ಬೆಲೆ ಮಿತಿಗಿಂತ ಕಡಿಮೆ ಇದ್ದಲ್ಲಿ ಆಮದು ಮಾಡಿಕೊಳ್ಳುವಂತಿಲ್ಲ ಎಂದು ನಿಷೇಧ ಹೇರಿತ್ತು.
ವಿದೇಶಿ ವ್ಯಾಪಾರದ ಮಹಾನಿರ್ದೇಶಕ (ಡಿಜಿಎಫ್ಟಿ)ನ ಅಧಿಸೂಚನೆ ಅನ್ವಯ ಭೂತಾನ್ನಿಂದ ಜೈಗಾಂವ್ ಭೂ ಕಸ್ಟಮ್ಸ್ ಸ್ಟೇಷನ್ (ಐಎನ್ಜೆಜಿಬಿ)ಮೂಲಕ ಆಮದು ಮಾಡಿಕೊಳ್ಳಲು ಅನುಮತಿ ಇದೆ. ಏಕೆಂದರೆ ಈ ಆಮದು ಪ್ರಕ್ರಿಯೆಯು ಮಹಾನಿರ್ದೇಶನಾಲಯ (ಡಿಜಿಎಫ್ಟಿ)ದಿಂದ ಮಾನ್ಯ ಮಾಡಿರುವ ನೋಂದಣಿ ಪ್ರಮಾಣಪತ್ರದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಪ್ರತಿ ವರ್ಷ ಕನಿಷ್ಠ ಆಮದು ಬೆಲೆ ಸ್ಥಿತಿಯಿಲ್ಲದೆ 17,000 ಟನ್ ತಾಜಾ (ಹಸಿರು) ಅಡಿಕೆಯನ್ನು ಜೈಗಾಂವ್ ಭೂ ಕಸ್ಟಮ್ಸ್ ಸ್ಟೇಷನ್ ಮೂಲಕ ಆಮದಿಗೆ ಅವಕಾಶ ಇದೆ ಕೊಡಲಾಗಿದೆ.

ಮಹಾನಿರ್ದೇಶನಾಲಯವು 2022-23ನೇ ಪ್ರಸಕ್ತ ಸಾಲಿನ ದ್ವಿತೀಯಾರ್ಧದಲ್ಲಿ ಭೂತಾನ್ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್ನಷ್ಟು ತಾಜಾ (ಹಸಿರು) ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿದೆ. ಮುಂದಿನ ವರ್ಷ ಅಂದರೆ 2023 ಮತ್ತು 24ನೇ ಸಾಲಿನಲ್ಲಿ ಒಟ್ಟು 17,000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ. ಆದರೆ ಆಮದಾರರು ಅಡಿಕೆ ಆಮದಿಗೂ ಮುನ್ನ ತಮ್ಮ ಬಳಿ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದಿಂದ ಪಡೆದ ನೋಂದಣಿ ಪ್ರಮಾಣಪತ್ರ (ಆರ್ಸಿ) ಹೊಂದಿರುವುದು ಕಡ್ಡಾಯವಾಗಿದೆ.
ನೋಂದಣಿ ಪ್ರಮಾಣಪತ್ರ ಅಡಿಯಲ್ಲಿ ಗರಿಷ್ಠ 500 ಮೆಟ್ರಿಕ್ ಟನ್ಗಳಷ್ಟು ತಾಜಾ ಅಡಿಕೆ ಆಮದಿಗೆ ಮಾತ್ರ ಅವಕಾಶ ಇದೆ. ಹೆಚ್ಚುವರಿಗೆ ಆಮದು ಅಗತ್ಯವಿದ್ದಲ್ಲಿ ಅದಕ್ಕಾಗಿ ಹೆಚ್ಚುವರಿ ನೋಂದಣಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಕೆ ಅವಕಾಶ ಇದೆ. ಈ ನೋಂದಣಿ ಪ್ರಮಾಣ ಪತ್ರವು ಗರಿಷ್ಠ 6 ತಿಂಗಳ ಅವಧಿಗೆ ಅಥವಾ ಹಣಕಾಸು ವರ್ಷದ ಅಂತ್ಯದವರೆಗೂ ಮಾನ್ಯವಾಗಿರುತ್ತದೆ.

ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ 2006 ರಲ್ಲಿ ದಕ್ಷಿಣ ಏಷ್ಯಾ ಮುಕ್ತ ವ್ಯಾಪಾರ ಒಪ್ಪಂದವನ್ನು ಜಾರಿಗೆ ತರಲಾಯಿತು. ಈ ಒಪ್ಪಂದದ ಅಡಿಯಲ್ಲಿ ಒದಗಿಸಲಾದ ಕಡಿಮೆ ಆಮದು ಸುಂಕದ ಲಾಭ ಬಳಸಿಕೊಂಡು ವಿದೇಶಗಳಿಂದ ಹೆಚ್ಚೆಚ್ಚು ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಭಾರತದೊಳಗಿನ ದೇಶೀಯ ಉತ್ಪಾದಕರು ಈಗಾಗಲೇ ಆಮದು ಹೆಚ್ಚಾಗಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದರು. ಒಟ್ಟು ಅಡಿಕೆಯ ಉತ್ಪಾದನೆಯಲ್ಲಿ ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ, ಕೇರಳ ಮತ್ತು ಅಸ್ಸಾಂ ರಾಜ್ಯಗಳು ನಂತರದ ಸ್ಥಾನದಲ್ಲಿವೆ ಎಂದು ಅಂಕಿ ಅಂಶಗಳು ತಿಳಿಸಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications