ಮುಂಗಾರು ಆರಂಭ; ರೈತರ ನೆರವಿಗೆ ಬಂದ ಕೇಂದ್ರ ಸರ್ಕಾರ
ನವದೆಹಲಿ, ಜೂನ್ 07 : ಲಾಕ್ ಡೌನ್ ಸಂಕಷ್ಟದ ನಡುವೆಯೇ ಮುಂಗಾರು ಹಂಗಾಮು ಆರಂಭವಾಗಿದೆ. ಕೃಷಿ ಚಟುವಟಿಕೆಗಳಿಗೆ ರೈತರು ಚಾಲನೆ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ರೈತರ ನೆರವಿಗೆ ನಿಂತಿದೆ.
Recommended Video
ಕೇಂದ್ರ ಸರ್ಕಾರ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಯನ್ನು ಪರಿಷ್ಕರಿಸಿದೆ. ಮುಂಗಾರು ಋತುವಿನಲ್ಲಿ ಬೆಳೆಯುವ ಪ್ರಮುಖ ಬೆಳೆಯಾದ ಭತ್ತದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್ಗೆ 1,815 ರಿಂದ 1,868ಕ್ಕೆ ಏರಿಕೆಯಾಗಿದೆ.
ನೀರಿಲ್ಲದ ನೆಲದಲ್ಲಿ ಸಹಜ ಕೃಷಿಯಿಂದ ಗೆದ್ದ ಕೋಲಾರದ ರೈತ
ಬೆಳೆಗಳನ್ನು ಬೆಳೆಯುವ ಖರ್ಚು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಎಂಎಸ್ಪಿಯನ್ನು ಪರಿಷ್ಕರಣೆ ಮಾಡಿದೆ. ಈ ಬಾರಿ ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ.
MSP ಹೆಸರಿನಲ್ಲಿ ರೈತರಿಗೆ ದ್ರೋಹವೆಸಗಿದ ಬಿಜೆಪಿ: ರೈತ ಸಂಘ
ಸರ್ಕಾರದ ಹೊಸ ಆದೇಶದ ಬಳಿಕ 2019-20ಕ್ಕೆ ಹೋಲಿಕೆ ಮಾಡಿದರೆ ಬೆಂಬಲ ಬೆಲೆಯಲ್ಲಿ ಅತಿ ಹೆಚ್ಚು ಏರಿಕೆ ಮಾಡಲಾಗಿದೆ. ಕರಿ ಎಳ್ಳು ಕ್ವಿಂಟಾಲ್ಗೆ 755 ರೂ., ಬಿಳಿ ಎಳ್ಳು 370 ರೂ., ಉದ್ದು 300 ರೂ., ಹತ್ತಿ 275 ರೂ. ಏರಿಕೆಯಾಗಿದೆ.
ಕಲ್ಲು ಭೂಮಿಯಲ್ಲಿ ಅಂಜದೆ ಅಂಜೂರ ಬೆಳೆದ ಕೊಪ್ಪಳ ರೈತ!
ಕೇಂದ್ರ ಸರ್ಕಾರ ಬೆಳೆ ಬೆಳೆಯುವ ಖರ್ಚಿನ ಆಧಾರದ ಮೇಲೆ ಬೆಂಬಲ ಬೆಲೆಯನ್ನು ಪ್ರತಿ ವರ್ಷ ಪರಿಷ್ಕರಣೆ ಮಾಡಲಾಗುತ್ತದೆ ಎಂದು 2018-19ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿತ್ತು.
ಮಳೆಗಾಲ ಆರಂಭವಾಗುವಾಗ ಬೆಳೆದು ಮಳೆಗಾಲದ ಕೊನೆಯಲ್ಲಿ ಕೊಯ್ಲು ಮಾಡುವ ಬೆಳೆಗಳನ್ನು ಖಾರಿಫ್ ಬೆಳೆಗಳು ಎಂದು ಕರೆಯಲಾಗುತ್ತದೆ. ಜೂನ್ನಿಂದ ಸೆಪ್ಟೆಂಬರ್ ಅವಧಿಯನ್ನು ಮುಂಗಾರು ಹಂಗಾಮು ಎಂದು ಪರಿಗಣಿಸಲಾಗುತ್ತದೆ.