ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರು ಆರಂಭ; ರೈತರ ನೆರವಿಗೆ ಬಂದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಜೂನ್ 07 : ಲಾಕ್ ಡೌನ್ ಸಂಕಷ್ಟದ ನಡುವೆಯೇ ಮುಂಗಾರು ಹಂಗಾಮು ಆರಂಭವಾಗಿದೆ. ಕೃಷಿ ಚಟುವಟಿಕೆಗಳಿಗೆ ರೈತರು ಚಾಲನೆ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ರೈತರ ನೆರವಿಗೆ ನಿಂತಿದೆ.

Recommended Video

Chiranjeevi Sarja | ಸ್ಯಾಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ | Oneindia Kannada

ಕೇಂದ್ರ ಸರ್ಕಾರ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಪರಿಷ್ಕರಿಸಿದೆ. ಮುಂಗಾರು ಋತುವಿನಲ್ಲಿ ಬೆಳೆಯುವ ಪ್ರಮುಖ ಬೆಳೆಯಾದ ಭತ್ತದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್‌ಗೆ 1,815 ರಿಂದ 1,868ಕ್ಕೆ ಏರಿಕೆಯಾಗಿದೆ.

ನೀರಿಲ್ಲದ ನೆಲದಲ್ಲಿ ಸಹಜ ಕೃಷಿಯಿಂದ ಗೆದ್ದ ಕೋಲಾರದ ರೈತನೀರಿಲ್ಲದ ನೆಲದಲ್ಲಿ ಸಹಜ ಕೃಷಿಯಿಂದ ಗೆದ್ದ ಕೋಲಾರದ ರೈತ

ಬೆಳೆಗಳನ್ನು ಬೆಳೆಯುವ ಖರ್ಚು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಎಂಎಸ್‌ಪಿಯನ್ನು ಪರಿಷ್ಕರಣೆ ಮಾಡಿದೆ. ಈ ಬಾರಿ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ.

MSP ಹೆಸರಿನಲ್ಲಿ ರೈತರಿಗೆ ದ್ರೋಹವೆಸಗಿದ ಬಿಜೆಪಿ: ರೈತ ಸಂಘMSP ಹೆಸರಿನಲ್ಲಿ ರೈತರಿಗೆ ದ್ರೋಹವೆಸಗಿದ ಬಿಜೆಪಿ: ರೈತ ಸಂಘ

Union Govt Hikes MSP For 14 Kharif Crops

ಸರ್ಕಾರದ ಹೊಸ ಆದೇಶದ ಬಳಿಕ 2019-20ಕ್ಕೆ ಹೋಲಿಕೆ ಮಾಡಿದರೆ ಬೆಂಬಲ ಬೆಲೆಯಲ್ಲಿ ಅತಿ ಹೆಚ್ಚು ಏರಿಕೆ ಮಾಡಲಾಗಿದೆ. ಕರಿ ಎಳ್ಳು ಕ್ವಿಂಟಾಲ್‌ಗೆ 755 ರೂ., ಬಿಳಿ ಎಳ್ಳು 370 ರೂ., ಉದ್ದು 300 ರೂ., ಹತ್ತಿ 275 ರೂ. ಏರಿಕೆಯಾಗಿದೆ.

ಕಲ್ಲು ಭೂಮಿಯಲ್ಲಿ ಅಂಜದೆ ಅಂಜೂರ ಬೆಳೆದ ಕೊಪ್ಪಳ ರೈತ! ಕಲ್ಲು ಭೂಮಿಯಲ್ಲಿ ಅಂಜದೆ ಅಂಜೂರ ಬೆಳೆದ ಕೊಪ್ಪಳ ರೈತ!

ಕೇಂದ್ರ ಸರ್ಕಾರ ಬೆಳೆ ಬೆಳೆಯುವ ಖರ್ಚಿನ ಆಧಾರದ ಮೇಲೆ ಬೆಂಬಲ ಬೆಲೆಯನ್ನು ಪ್ರತಿ ವರ್ಷ ಪರಿಷ್ಕರಣೆ ಮಾಡಲಾಗುತ್ತದೆ ಎಂದು 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು.

ಮಳೆಗಾಲ ಆರಂಭವಾಗುವಾಗ ಬೆಳೆದು ಮಳೆಗಾಲದ ಕೊನೆಯಲ್ಲಿ ಕೊಯ್ಲು ಮಾಡುವ ಬೆಳೆಗಳನ್ನು ಖಾರಿಫ್ ಬೆಳೆಗಳು ಎಂದು ಕರೆಯಲಾಗುತ್ತದೆ. ಜೂನ್‌ನಿಂದ ಸೆಪ್ಟೆಂಬರ್ ಅವಧಿಯನ್ನು ಮುಂಗಾರು ಹಂಗಾಮು ಎಂದು ಪರಿಗಣಿಸಲಾಗುತ್ತದೆ.

English summary
Union government hiked the minimum support price (MSP) for the 14 kharif crops for 2020-21. Paddy MSP hiked from 1815 to 1868 per quintal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X