ಯೂರಿಯ ರಸಗೊಬ್ಬರದ ಅತಿ ಬಳಕೆ: ರೈತರಿಗೆ ಮಾಹಿತಿ
ಬೆಂಗಳೂರು, ಜೂನ್ 28: ಮುಂಗಾರು ಮಳೆ ಆರಂಭವಾಗಿ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ರೈತರು ರಸಗೊಬ್ಬರ ಖರೀದಿ ಮಾಡುತ್ತಿದ್ದಾರೆ. ಯೂರಿಯ ರಸಗೊಬ್ಬರ ಅತಿ ಬಳಕೆಯ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗಿದೆ.
ಚಾಮರಾಜನಗರದ ಕೃಷಿ ಇಲಾಖೆ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಆಧುನಿಕ ಕೃಷಿಯಲ್ಲಿ ನಮ್ಮ ರೈತರು ಮೂಲ ಕೃಷಿಗೆ ಬೇಕಾದ ಕೊಟ್ಟಿಗೆ ಗೊಬ್ಬರ, ಕಾಂಪೋಸ್ಟ್ ಗೊಬ್ಬರ, ಹಸಿರೆಲೆ ಗೊಬ್ಬರಗಳನ್ನು ತ್ಯಜಿಸಿ ಕೃತಕ ರಸಗೊಬ್ಬರಗಳನ್ನು ನಿಗದಿತ ಪ್ರಮಾಣಕ್ಕಿಂತ ಯಥೇಚ್ಛವಾಗಿ ವಿವೇಚನೆ ಇಲ್ಲದೇ ಅಸಮಪರ್ಕವಾಗಿ ಬಳಸುತ್ತಿರುವುದರಿಂದ ಕೃಷಿ ಉತ್ಪಾದನೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿರುವುದು ಕಂಡು ಬಂದಿರುತ್ತದೆ ಎಂದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ರಸಗೊಬ್ಬರಗಳ ಬೆಲೆಗಳು ಹೆಚ್ಚಳವಾಗುತ್ತಿರುವುದರಿಂದ ಕಡಿಮೆ ದರದಲ್ಲಿ ಲಭ್ಯವಾಗುತ್ತಿರುವ ಯೂರಿಯ ರಸಗೊಬ್ಬರವನ್ನು ಅಧಿಕವಾಗಿ ಬಳಸುತ್ತಿರುವುದು ಕಂಡು ಬಂದಿರುತ್ತದೆ. ಆದರೆ ಅಧಿಕ ಯೂರಿಯ ಬಳಕೆಯಿಂದಾಗುವ ದುಷ್ಪರಿಣಾಮಗಳು, ಯೂರಿಯ ಬಳಕೆಯಿಂದ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳು ನಾಶವಾಗುತ್ತವೆ ಎಂದು ಮಾಹಿತಿ ನೀಡಲಾಗಿದೆ.
ರೈತರಿಗೆ ಸಲಹೆಗಳು: ಸಸ್ಯಗಳ ಬೆಳವಣಿಗೆ ಮಾತ್ರ ಹೆಚ್ಚಾಗಿ ಹೂವು, ಕಾಯಿ ಕಟ್ಟುವ ಪ್ರಮಾಣ ಕಡಿಮೆಯಾಗಿ ಇಳುವರಿಯಲ್ಲಿ ನಷ್ಟವಾಗುತ್ತದೆ. ಸಸ್ಯಗಳು ಹುಲುಸಾಗಿ ಬೆಳೆದು ಮೃದುತ್ವ ಹೆಚ್ಚಾಗಿ ಕೀಟ ಮತ್ತು ರೋಗಗಳ ಭಾದೆ ಹೆಚ್ಚಾಗಿ ಇಳುವರಿ ಪ್ರಮಾಣ ಕಡಿಮೆಯಾಗುತ್ತದೆ.
ಅಧಿಕ ಯೂರಿಯ ಬಳಕೆಯಿಂದ ಸಸಿಗಳು ಗಟ್ಟಿಯಾಗಿ ನಿಲ್ಲುವ ಸಾಮರ್ಥ್ಯ ಕಳೆದುಕೊಂಡು ನೆಲಕ್ಕೆ ಬಾಗಿ ಕಾಳು ಕಟ್ಟುವ ಪ್ರಕ್ರಿಯೆಯಲ್ಲಿ ಅಡಚಣೆ ಉಂಟಾಗಿ ಇಳುವರಿ ಕಡಿಮೆಯಾಗುತ್ತದೆ. ಅಧಿಕ ಪ್ರಮಾಣದಲ್ಲಿ ಯೂರಿಯ ಬಳಕೆಯಿಂದ ಮಣ್ಣಿನಲ್ಲಿ ರಾಸಾಯನಿಕ ಗುಣಧರ್ಮಗಳು ವ್ಯತ್ಯಾಸವಾಗಿ ಮಣ್ಣು ಹುಳಿಯಾಗಿ ಪರಿವರ್ತನೆಯಾಗುತ್ತದೆ.
ಅಧಿಕ ಪ್ರಮಾಣದ ಯೂರಿಯ ಬಳಕೆಯಿಂದ ಯೂರಿಯವು ಅಮೋನಿಯವಾಗಿ ನಂತರ ನೈಟ್ರೇಟ್ ಆಗಿ ಪರಿವರ್ತನೆಗೊಂಡು ಅಂತರ್ಜಲ ಸೇರಿ ಕುಡಿಯುವ ನೀರು ಸಹ ಕಲುಷಿತವಾಗುತ್ತದೆ ಮತ್ತು ನೀರಿನಲ್ಲಿ ನೈಟ್ರೇಟ್ ಅಂಶ ಹೆಚ್ಚಾದಲ್ಲಿ ಅಂತಹ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ ಹಾಗೂ ಅಂತಹ ನೀರನ್ನು ಕುಡಿದ ಕುಟುಂಬಗಳಲ್ಲಿ ಹುಟ್ಟುವ ಶಿಶುಗಳು ನೀಲಿಶಿಶು ಎಂಬ ರೋಗಕ್ಕೆ ತುತ್ತಾಗಿ ಸಾಯುತ್ತವೆ.
ಸಮರ್ಪಕ ಮತ್ತು ಲಾಭದಾಯಕ ರೀತಿಯಲ್ಲಿ ಯೂರಿಯ ಬಳಕೆ ಮಾಡಬೇಕಿದೆ. ಯೂರಿಯ ಗೊಬ್ಬರವು ಇತರೆ ರಾಸಾಯನಿಕ ಗೊಬ್ಬರಗಳಿಗಿಂತ ವೇಗವಾಗಿ ಕರಗುವುದರಿಂದ ಕೇವಲ 35 ರಿಂದ 40 ಭಾಗ ಮಾತ್ರ ಬೆಳೆಗಳಿಗೆ ಉಪಯೋಗವಾಗಿ ಉಳಿದ ಭಾಗ ಆವಿಯಾಗುವುದು ಹಾಗೂ ನೀರಿನಲ್ಲಿ ಹರಿದು ಪೋಲಾಗುವುದು ಕಂಡುಬಂದಿರುತ್ತದೆ.
ಯೂರಿಯ ಉಪಯೋಗದ ಸಾಮರ್ಥ್ಯ ಹೆಚ್ಚಿಸಲು ಬೆಳೆಗಳಿಗೆ ಶಿಫಾರಸ್ಸಿನ ಪ್ರಮಾಣವನ್ನು ಕನಿಷ್ಟ 2 ಬಾರಿ ಹಂತಹಂತವಾಗಿ ಒದಗಿಸುವುದು. ಬೇವು ಲೇಪಿತ ಯೂರಿಯ ಬಳಕೆ ಮಾಡುವುದರಿಂದ ಕೊಚ್ಚಿ ಹೋಗುವ ನಷ್ಟವನ್ನು ತಡೆಯುವುದರ ಜೊತೆಗೆ ಬೆಳೆಯು ನಿಧಾನವಾಗಿ ಹೀರಿಕೊಳ್ಳಲು ಸಹಾಯವಾಗಿರುತ್ತದೆ.
ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರು ಇವರನ್ನು ಭೇಟಿ ಮಾಡುವುದು.
ರೈತರು ಯೂರಿಯಾ ಗೊಬ್ಬರಕ್ಕಾಗಿ ಹೆಚ್ಚು ಅಲೆದಾಟ ನಡೆಸುವುದು ಬೇಡ. ನ್ಯಾನೋ ಯೂರಿಯಾ ದ್ರಾವಣವು ಪ್ರತಿಶತ 4 ರಷ್ಟು ನ್ಯಾನೋ ಸಾರಜನಕ ಕಣಗಳನ್ನು ಹೊಂದಿರುತ್ತದೆ. ಒಂದು ಬಾಟಲ್ (500 ಮಿ. ಲೀ.) ನ್ಯಾನೊ ಯೂರಿಯಾ ಒಂದು ಚೀಲ ಯೂರಿಯಾ ರಸಗೊಬ್ಬರಕ್ಕೆ ಸಮಾನಾಗಿದೆ. ರೈತರು ತಮ್ಮ ಬೆಳೆಗಳಿಗೆ ನ್ಯಾನೊ ಯೂರಿಯಾ ದ್ರಾವಣವನ್ನು ಬಳಸಬಹುದು ಎಂದು ಕೃಷಿ ಇಲಾಖೆ ಹೇಳಿದೆ.
ಬೆಳೆಯ ಬೆಳವಣಿಗೆಯಲ್ಲಿ ಸಾರಜನಕವು ಪ್ರಮುಖ ಪಾತ್ರ ವಹಿಸುತ್ತದೆ. ಸಾರಜನಕ ಬೇಡಿಕೆಯನ್ನು ಪೂರೈಸಲು ರೈತರು 2 ರಿಂದ 3 ಹಂತದಲ್ಲಿ ಯೂರಿಯಾ ಗೊಬ್ಬರವನ್ನು ತಳ ಗೊಬ್ಬರ ಹಾಗೂ ಮೇಲೂ ಗೊಬ್ಬರವಾಗಿ ನೀಡುತ್ತಾರೆ. ಇದರಲ್ಲಿ ಶೇ.30-50 ರಷ್ಟು ಯೂರಿಯಾ ಮಾತ್ರ ಬೆಳೆಗಳಿಗೆ ದೊರೆಯುತ್ತದೆ. ಸಾರಜನಕವು ಅಮೋನಿಯಾ ಹಾಗೂ ನೈಟ್ರಸ್ಆಕ್ಸೈಡ್ ರೂಪದಲ್ಲಿ ಮಣ್ಣು, ಗಾಳಿ ಮತ್ತು ನೀರನ್ನು ಮಲೀನಗೊಳಿಸುತ್ತದೆ. ಆದರೆ ನ್ಯಾನೊ ಯೂರಿಯಾದಿಂದ ಪರಿಸರ ಮಾಲಿನ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ












Click it and Unblock the Notifications