ಎಲ್ಲಾ ಹೋಟೆಲ್ ಗಳಲ್ಲಿ ಬಾಳೆಲೆ ಬಳಸಲು ಕರೆ

ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದೊಂದಿಗೆ ಗಾರ್ಡನ್ ವಿಲ್ಲಾಸ್ ಬಡಾವಣೆಯಲ್ಲಿ ಆಯೋಜಿಸಿದ್ದ 'ಸಸ್ಯಾಹಾರ: ಉತ್ತಮ ಆರೋಗ್ಯಕ್ಕೆ ಅತ್ಯುತ್ತಮ ಪರಿಹಾರ' ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಒಂದೆಡೆ ಬಾಳೆ ಎಲೆಯ ಮೇಲೆ ಆಹಾರ ಸೇವಿಸಿದವರಿಗೆ ತೃಪ್ತಿ ದೊರೆಯುತ್ತದೆ. ಮತ್ತೊಂದೆಡೆ ತಟ್ಟೆ ತೊಳೆಯುವ ತಾಪತ್ರಯ ತಪ್ಪುವುದರ ಜೊತೆಗೆ ತಿನಿಸು ಧಾಮಗಳಲ್ಲಿ ಶುಚಿತ್ವಕ್ಕೆ ಆದ್ಯತೆ ಲಭಿಸುತ್ತದೆ. ಅಲ್ಲದೆ, ಎಲ್ಲೆಡೆ ಬಾಳೆ ಎಲೆಗೆ ಬೇಡಿಕೆಯೂ ಹೆಚ್ಚುತ್ತದೆ. ಬೇಡಿಕೆ ಹೆಚ್ಚಾದಂತೆ ರೈತರೂ ಬಾಳೆ ಬೆಳೆ ಬೆಳೆಯಲು ಒತ್ತು ನೀಡುತ್ತಾರೆ. ಆರ್ಥಿಕ ಸಧೃಡತೆಯತ್ತ ಮುನ್ನಡೆಯುತ್ತಾರೆ. ಹೂವಿನ ಜೊತೆ ನಾರೂ ಸ್ವರ್ಗಕ್ಕೆ ಹೋದಂತೆ ಎಂಬ ಗಾದೆಯಂತೆ ಬಾಳೆ ಎಲೆಯ ಜೊತೆ ಬಾಳೆ ಹಣ್ಣುಗಳ ಉತ್ಪಾದನೆಯಲ್ಲೂ ಕ್ರಾಂತಿಯಾಗಲಿದೆ. ಒಟ್ಟಾರೆ ಇಡೀ ರಾಜ್ಯವೇ ಪ್ರಗತಿ ಪಥದಲ್ಲಿ ಸಾಗಲಿದೆ ಎಂದು ಅವರು ವಿವರಿಸಿದರು.
ಮಾನವನ ದೇಹ ಸಸ್ಯಾಹಾರ ಸೇವನೆಗೆ ಯೋಗ್ಯವಾಗಿದೆ. ಸಸ್ಯಾಹಾರ ಸೇವನೆಯಿಂದ ಮಾನವ ಅರಳುತ್ತಾನೆ. ಮಾಂಸಾಹಾರ ಸೇವನೆಯಿಂದ ನರಳುತ್ತಾನೆ ಎಂದ ರಘುಚಂದ್ರ ಗುರೂಜಿ ಅವರು ಮಾಂಸಾಹಾರಿಗಳಿಗಿಂತಲೂ ಸಸ್ಯಾಹಾರಿಗಳು ಹೆಚ್ಚು ಆರೋಗ್ಯವಂತರು ಹಾಗೂ ಧೀರ್ಘಾಯುಷಿಗಳಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟರು.
ವಾರ್ತಾ ಇಲಾಖೆಯ ಉಪ ನಿರ್ದೇಶಕ ಡಿ.ಪಿ. ಮುರಳೀಧರ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ದೇಶಗಳಲ್ಲಿ ಸಸ್ಯಾಹಾರಕ್ಕೆ ಆದ್ಯತೆ ದೊರೆಯುತ್ತಿದ್ದರೂ, ಭಾರತದ ಬೃಹನ್ನಗರಿಗಳಲ್ಲಿ ವಾಸಿಸುತ್ತಿರುವ ಸಸ್ಯಾಹಾರಿಗಳು ಮಾಂಸಾಹಾರಿಗಳಾಗಿ ಪರಿವರ್ತಿತರಾಗುತ್ತಿರುವುದು ಅತ್ಯಂತ ಕಳವಳದ ಸಂಗತಿಯಾಗಿದೆ ಎಂದರು.
ವಿಚಾರ ಸಂಕಿಣದಲ್ಲಿ ಪಾಲ್ಗೊಂಡಿದ್ದ ಸಭಿಕರು ಇನ್ನು ಮುಂದೆ ಸಸ್ಯಾಹಾರವನ್ನೇ ಸೇವಿಸುವುದಾಗಿ ಪ್ರಮಾಣ ಮಾಡಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications