ಎಲ್ಲಾ ಹೋಟೆಲ್ ಗಳಲ್ಲಿ ಬಾಳೆಲೆ ಬಳಸಲು ಕರೆ

ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದೊಂದಿಗೆ ಗಾರ್ಡನ್ ವಿಲ್ಲಾಸ್ ಬಡಾವಣೆಯಲ್ಲಿ ಆಯೋಜಿಸಿದ್ದ 'ಸಸ್ಯಾಹಾರ: ಉತ್ತಮ ಆರೋಗ್ಯಕ್ಕೆ ಅತ್ಯುತ್ತಮ ಪರಿಹಾರ' ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಒಂದೆಡೆ ಬಾಳೆ ಎಲೆಯ ಮೇಲೆ ಆಹಾರ ಸೇವಿಸಿದವರಿಗೆ ತೃಪ್ತಿ ದೊರೆಯುತ್ತದೆ. ಮತ್ತೊಂದೆಡೆ ತಟ್ಟೆ ತೊಳೆಯುವ ತಾಪತ್ರಯ ತಪ್ಪುವುದರ ಜೊತೆಗೆ ತಿನಿಸು ಧಾಮಗಳಲ್ಲಿ ಶುಚಿತ್ವಕ್ಕೆ ಆದ್ಯತೆ ಲಭಿಸುತ್ತದೆ. ಅಲ್ಲದೆ, ಎಲ್ಲೆಡೆ ಬಾಳೆ ಎಲೆಗೆ ಬೇಡಿಕೆಯೂ ಹೆಚ್ಚುತ್ತದೆ. ಬೇಡಿಕೆ ಹೆಚ್ಚಾದಂತೆ ರೈತರೂ ಬಾಳೆ ಬೆಳೆ ಬೆಳೆಯಲು ಒತ್ತು ನೀಡುತ್ತಾರೆ. ಆರ್ಥಿಕ ಸಧೃಡತೆಯತ್ತ ಮುನ್ನಡೆಯುತ್ತಾರೆ. ಹೂವಿನ ಜೊತೆ ನಾರೂ ಸ್ವರ್ಗಕ್ಕೆ ಹೋದಂತೆ ಎಂಬ ಗಾದೆಯಂತೆ ಬಾಳೆ ಎಲೆಯ ಜೊತೆ ಬಾಳೆ ಹಣ್ಣುಗಳ ಉತ್ಪಾದನೆಯಲ್ಲೂ ಕ್ರಾಂತಿಯಾಗಲಿದೆ. ಒಟ್ಟಾರೆ ಇಡೀ ರಾಜ್ಯವೇ ಪ್ರಗತಿ ಪಥದಲ್ಲಿ ಸಾಗಲಿದೆ ಎಂದು ಅವರು ವಿವರಿಸಿದರು.
ಮಾನವನ ದೇಹ ಸಸ್ಯಾಹಾರ ಸೇವನೆಗೆ ಯೋಗ್ಯವಾಗಿದೆ. ಸಸ್ಯಾಹಾರ ಸೇವನೆಯಿಂದ ಮಾನವ ಅರಳುತ್ತಾನೆ. ಮಾಂಸಾಹಾರ ಸೇವನೆಯಿಂದ ನರಳುತ್ತಾನೆ ಎಂದ ರಘುಚಂದ್ರ ಗುರೂಜಿ ಅವರು ಮಾಂಸಾಹಾರಿಗಳಿಗಿಂತಲೂ ಸಸ್ಯಾಹಾರಿಗಳು ಹೆಚ್ಚು ಆರೋಗ್ಯವಂತರು ಹಾಗೂ ಧೀರ್ಘಾಯುಷಿಗಳಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟರು.
ವಾರ್ತಾ ಇಲಾಖೆಯ ಉಪ ನಿರ್ದೇಶಕ ಡಿ.ಪಿ. ಮುರಳೀಧರ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ದೇಶಗಳಲ್ಲಿ ಸಸ್ಯಾಹಾರಕ್ಕೆ ಆದ್ಯತೆ ದೊರೆಯುತ್ತಿದ್ದರೂ, ಭಾರತದ ಬೃಹನ್ನಗರಿಗಳಲ್ಲಿ ವಾಸಿಸುತ್ತಿರುವ ಸಸ್ಯಾಹಾರಿಗಳು ಮಾಂಸಾಹಾರಿಗಳಾಗಿ ಪರಿವರ್ತಿತರಾಗುತ್ತಿರುವುದು ಅತ್ಯಂತ ಕಳವಳದ ಸಂಗತಿಯಾಗಿದೆ ಎಂದರು.
ವಿಚಾರ ಸಂಕಿಣದಲ್ಲಿ ಪಾಲ್ಗೊಂಡಿದ್ದ ಸಭಿಕರು ಇನ್ನು ಮುಂದೆ ಸಸ್ಯಾಹಾರವನ್ನೇ ಸೇವಿಸುವುದಾಗಿ ಪ್ರಮಾಣ ಮಾಡಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಸೆಲ್ ಫೋನಿನಲ್ಲಿ ದಟ್ಸ್ ಕನ್ನಡ ಓದುವ ಸಂಭ್ರಮ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications