ಮಾವು ಬೆಳೆಯ ವಿವಿಧ ರೋಗ; ಹತೋಟಿ ಕ್ರಮಗಳು
ಶಿವಮೊಗ್ಗ, ನವೆಂಬರ್ 29 : ಶಿವಮೊಗ್ಗ ಜಿಲ್ಲೆಯ ಮಾವು ಬೆಳೆಗಾರರಿಗೆ ತೋಟಗಾರಿಕೆ ಇಲಾಖೆ ಹಲವು ಸೂಚನೆಗಳನ್ನು ನೀಡಿದೆ. ಜಿಲ್ಲೆಯಲ್ಲಿನ ಮಾವು ಬೆಳೆಗೆ ಬೂದಿ ರೋಗ ಮತ್ತು ಜಿಗಿ ಹುಳುಗಳ ಬಾಧೆ ಕಂಡುಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಹತೋಟಿ ಕ್ರಮಗಳ ವಿವರಣೆಯನ್ನು ನೀಡಿದೆ.
ಬೂದಿ ರೋಗ ಮತ್ತು ಜಿಗಿ ಹುಳುಗಳ ಬಾಧೆ ಕಂಡುಬಂದರೆ ಕಾಯಿ ಕಚ್ಚುವಿಕೆ ಕಡಿಮೆಯಾಗಿ ಮಿಡಿಗಾತ್ರದ ಕಾಯಿಗಳು ಉದುರುವ ಸಾಧ್ಯತೆ ಇದೆ. ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಮಾವು ಬೆಳೆ ಕೃಷಿಕರು ಇಲಾಖೆ ಸೂಚಿಸಿರುವ ಔಷಧಿಗಳನ್ನು ಸಿಂಪಡಣೆ ಮಾಡುವುದರಿಂದ ಹತೋಟಿ ಮಾಡಬಹುದು ಎಂದು ಇಲಾಖೆ ಹೇಳಿದೆ.
ಬೂದಿ ರೋಗಕ್ಕೆ ತುತ್ತಾದ ಗಿಡದ ಎಲೆಗಳು, ಹೂಗೊಂಚಲುಗಳ ಮೇಲೆ ಬೂದಿಯಂತಹ ಬೆಳವಣಿಗೆ ಕಂಡು ಬಂದು ಹೂಗಳು ಉದುರುತ್ತವೆ ಹಾಗೂ ಎಲೆಗಳು ಮುರುಟಿ ನಂತರದ ದಿನಗಳಲ್ಲಿ ಎಳೆಯ ಕಾಯಿಗಳು ಉದುರುತ್ತವೆ.

ಬೂದಿ ರೋಗದ ನಿರ್ವಹಣೆಗೆ ರೈತರು ರೋಗಕ್ಕೆ ತುತ್ತದಾದ ಮರದ ಭಾಗಗಳನ್ನು ತೆಗೆದು ನಾಶಪಡಿಸಬೇಕು. ಮರಗಳ ತಳ ಭಾಗದಲ್ಲಿ ಉದುರಿದ ಒಣಗಿದ ಎಲೆ, ಹೂ ಗೊಂಚಲುಗಳು ಹಾಗೂ ಬಟಾಣಿ ಹೀಚುಗಳನ್ನು ಆರಿಸಿ ಸುಡಬೇಕು.
ಪ್ರತಿ 200 ಲೀಟರ್ ನೀರಿಗೆ 500 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಅಥವಾ 200 ಗ್ರಾಂ ಕಾರ್ಬನ್ಡೈಜಿಂ ಅಥವಾ 400 ಮಿ.ಲೀ. ಹೆಕ್ಸಾಕೋನಜೋಲ್ ಅನ್ನು ಸೂಕ್ತ ಅಂಟಿನೊಂದಿಗೆ ಮಿಶ್ರಮಾಡಿ ಗೊಂಚಲುಗಳಿಗೆ ಸಿಂಪಡಿಸುವುದು. 15 ರಿಂದ 20 ದಿವಸಗಳ ಅಂತರದಲ್ಲಿ 2 ಬಾರಿ ಸಿಂಪಡಿಸುವುದು ಸೂಕ್ತ.

ಜಿಗಿ ಹುಳುಗಳು ಸಹ ಬೆಳೆಗೆ ಹಾನಿ ಮಾಡುತ್ತವೆ. ಜಿಗಿಹುಳು ಅಂಟು ಪದಾರ್ಥವನ್ನು ಸ್ರವಿಸುವುದರಿಂದ ಹೂ ಗೊಂಚಲಿನಲ್ಲಿ ಕಪ್ಪು ಬೂಸ್ಟ್ ಬೆಳವಣಿಗೆ ಕಂಡುಬರುತ್ತದೆ. ಕೀಟದ ನಿರ್ವಹಣೆಗೆ ಅಝಾಡಿರೆಕ್ಟಿನ್ 7 ಮಿ.ಲೀ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.
ಪ್ರತಿ 200 ಲೀಟರ್ ನೀರಿಗೆ 500 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಅಥವಾ 200 ಗ್ರಾಂ ಕಾರ್ಬನ್ಡೈಜಿಂ ಜೊತೆಗೆ ಪ್ರತಿ 200 ಲೀಟರ್ ನೀರಿಗೆ 400 ಮಿ.ಲೀ. ಮೆಲಾಥಿಯಾನ್ 50 ಇ.ಸಿ. ಅಥವಾ 100 ಮಿ.ಲೀ. ಇಮಿಡಾಕ್ಲೋಪಿಡ್ ಅನ್ನು ಸೂಕ್ತ ಅಂಟಿನೊಂದಿಗೆ ಮಿಶ್ರಮಾಡಿ ಗೊಂಚಲುಗಳಿಗೆ ಸಿಂಪಡಿಸುವಂತೆ ರೈತರಿಗೆ ಸೂಚಿಸಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications