ಹೂಡಿಕೆ ಸಮ್ಮೇಳನ ವಿರೋಧಿಸಿ ಕತ್ತೆ ಸವಾರಿ
ಬೆಂಗಳೂರು, ಜೂ.1: ರಾಜ್ಯದಲ್ಲಿ ಜಾಗತಿಕ ಬಂಡವಾಳಹೂಡಿಕೆದಾರರ ಸಮಾವೇಶ ವಿರೋಧಿಸಿ ಜೂ. 2 ರಂದು ಕೆಂಪೇಗೌಡ ನಿಲ್ದಾಣದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷ ಕತ್ತೆಗಳ ಸಮಾವೇಶವನ್ನು ಹಮ್ಮಿಕೊಳ್ಳಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಾಟಾಳ್ ನಾಗರಾಜ್ ತಿಳಿಸಿದರು.
ಈಗಾಗಲೇ ಬಂಡವಾಳ ಹೂಡಿಕೆದಾರರು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ರೈತರ ಜಮೀನನ್ನು ಪಡೆದು ಅವರನ್ನು ಬೀದಿಪಾಲು ಮಾಡಿದ್ದಾರೆ. ಇದೀಗ ಮತ್ತೆ ಬಂಡವಾಳ ಹೂಡಿಕೆ ಹೆಸರಿನಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಎಕರೆ ಪ್ರದೇಶವನ್ನು ಸರ್ಕಾರ ಹೂಡಿಕೆದಾರರಿಗೆ ಹಂಚಲು ಮುಂದಾಗುತ್ತಿರುವುದು ಖಂಡನೀಯ ಎಂದರು.
ನೆರೆ ಸಂತ್ರಸ್ತರಿಗೆ ಇಲ್ಲ ಸೂರು: ಸರ್ಕಾರದ ಈ ನೀತಿಯಿಂದ ಆಹಾರ ಉತ್ಪಾದನೆ ಕಡಿಮೆಯಾಗುತ್ತದೆ. ಬೆಂಗಳೂರಿನ ಜಾಗವನ್ನು ಖಾಸಗಿಯವರು ತಮ್ಮ ಸ್ವಂತ ಆಸ್ತಿ ಮಾಡಿಕೊಂಡಿದ್ದಾರೆ ಎಂದು ದೂರಿದರು. ಉತ್ತರ ಕರ್ನಾಟಕ ನೆರೆಹಾವಳಿಗೆ ತುತ್ತಾಗಿ 7-8 ತಿಂಗಳು ಕಳೆದಿದ್ದರೂ, ಇದುವರೆವಿಗೂ ಸರ್ಕಾರ ಯಾವುದೇ ಮನೆ ನಿರ್ಮಾಣ ಮಾಡಿಕೊಟ್ಟಿಲ್ಲ. ಅಲ್ಲಿನ ಜನರು ತಾತ್ಕಾಲಿಕ ಶೆಡ್ಗಳಲ್ಲಿ ವಾಸವಾಗಿದ್ದಾರೆ.
ಇದರಿಂದ ಹೆಣ್ಣು ಮಕ್ಕಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ದೂರಿದರು. ಯಾವುದೇ ಕಾರಣಕ್ಕೂ ಹೂಡಿಕೆದಾರರಿಗೆ ರೈತರ ಭೂಮಿಯನ್ನು ಬಿಟ್ಟಿಕೊಡುವುದಿಲ್ಲ. ಅದ್ದರಿಂದ ಈ ನೀತಿಯನ್ನು ವಿರೋಧಿಸಿ ಬುಧವಾರ ಬೆಳಗ್ಗೆ 11 ಗಂಟೆಗೆ ಕತ್ತೆಗಳ ಸಮಾವೇಶವನ್ನು ನಡೆಸಲು ತಿರ್ಮಾನಿಸಿದ್ದೇವೆ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications