ವೈರಲ್ ವಿಡಿಯೋ:ರೈತರೂ ಕೋಟ್ಯಧಿಪತಿಗಳಾಗಬಹುದು ಅಂತಾರೆ ರಾಯಚೂರಿನ ಕವಿತಾ
ರಾಯಚೂರು, ಜುಲೈ 10: ರೈತ ಮನಸ್ಸು ಮಾಡಿದರೆ ಒಂದೇ ಎಕರೆ ಭೂಮಿಯಲ್ಲಿ ಐದಾರು ಕೋಟಿ ಸಂಪಾದನೆ ಮಾಡಬಹುದು! ರಾಯಚೂರಿನ ಮಾನ್ವಿ ತಾಲೂಕಿನ ಕವಿತಾಳ ಎಂಬ ಗ್ರಾಮದ ನಿವಾಸಿ ಕವಿತಾ ಮಿಶ್ರಾ ಓದಿದ್ದು ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ, ಜೊತೆಗೆ ಸೈಕಾಲಜಿಯಲ್ಲಿ ಸ್ನಾತಕ ಪದವಿ. ಕೈತುಂಬ ಸಂಪಾದನೆ ಮಾಡುವ ಕೆಲಸ ಸಿಕ್ಕರೂ ಅದನ್ನು ತೊರೆದು ಭೂತಾಯಿಯನ್ನೇ ನಂಬಿ ಬಂದವರು ಕವಿತಾ.
ಏಕಬೆಳೆ ಪದ್ಧತಿಯನ್ನು ನಂಬಿಕೊಂಡಿರುವುದರಿಂದ ಪ್ರಯೋಜನವಿಲ್ಲ ಎಂಬುದನ್ನು ಅರಿತ ಇರವರು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರು. ಬಿರುಬೇಸಿಗೆಯಲ್ಲಿ 50 ಡಿಗ್ರಿ ಸೆಲ್ಷಿಯಸ್ ಗಿಂತಲೂ ಹೆಚ್ಚುವ ತಾಪಮಾನದಲ್ಲೂ ತಮ್ಮ ಹತ್ತು ಎಕರೆ ಭೂಮಿಯನ್ನು ಹಸಿರಾಗಿಸಿದವರು ಕವಿತಾ.
ಸಾವಯವ ಕೃಷಿ, ಹನಿ ನೀರಾವರಿಯ ಮೂಲಕ ಹಠ ಹಿಡಿದು ಹತ್ತಾರು ಬೆಳೆಗಳನ್ನು ಬೆಳೆದು ಯಶಸ್ವಿಯಾಗಿದ್ದಾರೆ. ಕೃಷಿ ಮತ್ತು ರೈತ ವೃತ್ತಿಯ ಬಗ್ಗೆ ಅವರಿಗಿರುವ ಕಾಳಜಿ ಮತ್ತು ಪ್ರೀತಿ ಅಪಾರ. ಈ ಕುರಿತು ಅವರು ರೈತರಿಗೆ ನೀಡಿದ ಉಪಯುಕ್ತ ಸಲಹೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಏನೆಲ್ಲ ಮಾತನಾಡಿದ್ದಾರೆ, ಕೇಳಿ.
— Trupti Hegde (@truptiabhijith) July 10, 2018 |
ಸಮಗ್ರ ಬೇಸಾಯ ಪದ್ಧತಿಗೆ ಒತ್ತು ನೀಡಿ
"ಏಕ ಬೆಳೆಯನ್ನು ನಂಬಿಕೊಂಡಿರುವುದು ಎಂದಿಗೂ ಅಪಾಯ. ಒಂದೇ ಬೆಳೆಯನ್ನು ನಂಬಿಕೊಂಡಿದ್ದರೆ ಅದು ಕೈಕೊಟ್ಟರೆ ರೈತನ ಕತೆ ಏನು? ಆದ್ದರಿಂದಲೇ ನಾನು ಮಿಶ್ರ ಬೆಳೆ ಪದ್ಧತಿಗೆ ಒತ್ತು ನೀಡುವುದಕ್ಕೆ ಯೋಚಿಸಿದೆ. ನಮ್ಮ 10 ಎಕರೆ ಜಮೀನಿನಲ್ಲಿ, 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನೆಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲದ ಮರಗಳಿವೆ. ಶ್ರೀಗಂಧ ಮುಖ್ಯ ಬೆಳೆಯಾಗಿದ್ದರೂ ಇದು ಪರಾವಲಂಬಿಯಾದ್ದರಿಂದ ಬೇರೆ ಮರಗಳ ಆಧಾರದ ಮೇಲೆ ಅದು ಬೆಳೆಯುತ್ತದೆ. ಆದ್ದರಿಂದಲೇ ಬೇರೆ ಮರಗಳನ್ನೂ ಬೆಳೆಸಿದ್ದೇನೆ. ಇದರೊಟ್ಟಿಗೆ ಕುರಿಸಾಕಾಣಿಕೆ, ಜೇನು ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆಯನ್ನೂ ಮಾಡುತ್ತೇನೆ"

ರೈತನಿಗೆ ಪ್ರತಿ ತಿಂಗಳು ಸಂಬಳ!
"ಈ ಎಲ್ಲವೂ ಬೇರೆ ಬೇರೆ ಕಾಲದಲ್ಲಿ ಬೆಳೆ ನೀಡುವುದರಿಂದ ರೈತನಿಗೆ ಪ್ರತಿ ತಿಂಗಳೂ ಸಂಬಳದಂತೆ ಒಂದಲ್ಲ ಒಂದು ಬೆಳೆಯ ಆದಾಯ ಕೈಗೆ ಬರುತ್ತದೆ! ಇದರಿಂದ ರೈತನಿಗೆ ಆರ್ಥಿಕ ಹೊರೆ ಬರುವುದಿಲ್ಲ. ಸರ್ಕಾರಿ ನೌಕರರಿಗೆ ನಿವೃತ್ತಿಯಾಗುತ್ತಿದ್ದಂತೆಯೇ ಪೆನ್ಷನ್ ಬರುತ್ತೆ, ಖಾಸಗಿ ಕಂಪನಿಗಳಲ್ಲಿರುವವರಿಗೆ ಪಿಎಫ್, ಗ್ರಾಚ್ಯುಟಿ.... ಅದರೊಂದಿಗೆ ಉಳಿತಾಯಕ್ಕೂ ನೂರಾರು ದಾರಿಗಳು. ಆದರೆ ರೈತರಿಗೆ? ಪ್ರತಿಯೊಬ್ಬರ ಹೊಟ್ಟೆಗೂ ಅನ್ನ ನೀಡುವ ರೈತ ನಿತ್ರಾಣನಾಗುತ್ತಿದ್ದಂತೆಯೇ ಮಕ್ಕಳ ಮೇಲೋ, ಇನ್ಯಾರದೋ ಮೇಲೋ ಅವಲಂಬಿತನಾಗಬೇಕಾದ ಸ್ಥಿತಿ! ಹಾಗಾಗಬಾರದು ಎಂಬ ಕಾರಣಕ್ಕೇ ಈ ಶ್ರೀಗಂಧವನ್ನು ಬೆಳೆಸಲಾಗಿದೆ. ಇದು ರೈತನನ್ನು ಕೋಟ್ಯಧಿಪತಿಯನ್ನಾಗಿ ಮಾಡಬಲ್ಲದು!"

ಒಂದು ಎಕರೆ ಶ್ರೀಗಂಧದಿಂದ ಐದಾರು ಕೋಟಿ ಆದಾಯ!
"ಒಂದು ಕೆಜಿ ಶ್ರೀಗಂಧಕ್ಕೆ ಈಗ ಸರ್ಕಾರದ ದರವೇ 10-15 ಸಾವಿರ ರೂ. ಇದೆ. ಖಾಸಗಿ ದರ 28,000 ರೂ.ಗೂ ಹೆಚ್ಚು. ಆದ್ದರಿಂದ ಒಂದು ಎಕರೆ ಶ್ರೀಗಂಧದಿಂದ ಐದಾರು ಕೋಟಿ ರೂ.ವರೆಗೂ ರೈತ ಆದಾಯ ಪಡೆಯಬಹುದು. ಇವು ಬೆಳೆಯುವವರೆಗೂ ರೈತರು ಬೇರೆ ಬೆಳೆಗಳಿಗೆ ಮಹತ್ವ ನೀಡಿ, ಅವುಗಳಿಂದ ತಿಂಗಳು ತಿಂಗಳು ಆದಾಯ ಪಡೆಯಬಹುದು. ಬಹಳ ಕಷ್ಟದ, ಅಷ್ಟೇ ಸ್ವಾಭಿಮಾನದ ಬದುಕು ಬದುಕುವವನು ರೈತ. ಈ ಜಗತ್ತಿನಲ್ಲಿ ಯಾರು, ಯಾರಿಗೇ ಮೋಸ ಮಾಡಬಹುದು. ಆದರೆ ರೈತ? ಆತ ಮಾತ್ರ ಯಾರಿಗೂ ಮೋಸ ಮಾಡುವುದಕ್ಕೆ ಸಾಧ್ಯವಿಲ್ಲ. ತನಗೇ ತಾನು ಮೋಸ ಮಾಡಿಕೊಂಡು ಮತ್ತೊಬ್ಬರಿಗೆ ಅನ್ನ ನೀಡುವ ತ್ಯಾಗಮಯಿ ಆತ. ಆದರೂ ವ್ಯವಸಾಯವನ್ನು ಕಸುಬಾಗಿ ಸ್ವೀಕರಿಸುವುದಕ್ಕೆ ಯಾರೂ ಸಿದ್ಧರಿಲ್ಲ."

ಕಳ್ಳರ ಕಾಟಕ್ಕೂ ಇದೆ ಪರಿಹಾರ
ರೈತರು ಶ್ರೀಗಂಧದ ಬೆಳೆಯನ್ನು ಬೆಳೆಯುವುದಕ್ಕೆ ಹಿಂಜರಿಯುವುದಕ್ಕೆ ಮುಖ್ಯ ಕಾರಣ ಕಳ್ಳರ ಕಾಟ. ಕಷ್ಟಪಟ್ಟು ಬೆಳೆದಿದ್ದನ್ನು ನಿರಾಯಾಸವಾಗಿ ಕದ್ದು, ಮಾರಾಟ ಮಾಡಿ, ಹಣ ಸಂಪಾದಿಸುವ ಕಳ್ಳರ ಭಯಕ್ಕಾಗಿಯೇ ಈ ಬೆಳೆಯ ಸಹವಾಸವೇ ಸಾಕು ಎನ್ನುವವರಿದ್ದಾರೆ. ಆದರೆ ಅದಕ್ಕೂ ಈಗ ಪರಿಹಾರವಿದೆ. E- protection ಮೂಲಕ ಮರಗಳಿಗೆ ಮೈಕ್ರೋ ಚಿಪ್ ಅಳವಡಿಸಲಾಗುತ್ತದೆ. ಕಳ್ಳ ಎರಡು ಅಡಿ ಮರದ ಹತ್ತಿರ ಸುಳಿದಾಡಿದರೂ ಸೈರನ್ ಕೂಗುತ್ತದೆ. ಇದು ಹತ್ತಿರದ ಪೊಲೀಸ್ ಠಾಣೆಗೂ ಲಿಂಕ್ ಆಗಿರುವುದರಿಂದ ಕಳ್ಳರನ್ನು ಹಿಡಿಯಬಹುದು. ಕದ್ದ ಮಾಲನ್ನು ಕಳ್ಳರು ಎಲ್ಲಿ ಅಡಗಿಸಿಟ್ಟಿದ್ದಾರೆ ಎಂಬುದೂ ಇದರಿಂದ ತಿಳಿಯಲಿದೆ.

ರೈತರಿಗೆ ಕನ್ಯೆ ಸಿಕ್ಕೋಲ್ಲ!
"ಎಸಿ ರೂಮಿನಲ್ಲಿ ತಣ್ಣಗೆ ಕೂತು ಕೆಲಸ ಮಾಡುವವರಿಗೆ ಬೇಡಿಕೆ ಜಾಸ್ತಿ. ಬಿರು ಬಿಸಿಲಲ್ಲೂ ಮೈಬಗ್ಗಿ ಕೆಲಸ ಮಾಡುವ ರೈತ ಯಾರಿಗೂ ಬೇಕಿಲ್ಲ. ಆದ್ದರಿಂದಲೇ ಅವರಿಗೆ ಕನ್ಯೆ ಸಿಕ್ಕುತ್ತಿಲ್ಲ. ಆದರೆ ರೈತರೂ ಎಲ್ಲರಂತೂ ಪ್ರತಿ ತಿಂಗಳೂ ಆದಾಯ ಗಳಿಸುತ್ತ, ಒಂದು ಸದೃಢ ಬದುಕು ಕಂಡುಕೊಂಡರೆ ಆಗ ಈ ವೃತ್ತಿಗೂ ಬೆಲೆ ಬರುತ್ತದೆ. ರೈತ ವೃತ್ತಿಯಂಥ ಸಾರ್ಥಕ ವೃತ್ತಿ ಮತ್ತೊಂದಿಲ್ಲ."ಸಾಲದ ಹೊರೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕವಿತಾ ಅವರ ಮಾತುಗಳು ರೈತರಿಗೆ ಕೊಂಚವಾದರೂ ಆಶಾಕಿರಣ ಅನ್ನಿಸುವುದು ಸತ್ಯ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications