ಕಬಿನಿಯಿಂದ ತಮಿಳುನಾಡಿಗೆ ನೀರು: ರೈತರಲ್ಲಿ ತುಂಬಿದೆ ಆತಂಕ
ಮೈಸೂರು, ಜುಲೈ 26: ಮುಂಗಾರು ಮಳೆ ವೈಫಲ್ಯದ ನಡುವೆಯೂ ರಾಜ್ಯದ ಪ್ರಮುಖ ಜಲಾಶಯ ಕಬಿನಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯ ಭರ್ತಿಯಾಗಲು 10 ಅಡಿ ಬಾಕಿ ಇದ್ದರೂ ರೈತರ ಜಮೀನಿಗೆ ಮಾತ್ರ ಸಮರ್ಕವಾಗಿ ನೀರು ಹರಿಸುತ್ತಿಲ್ಲ. ಜೊತೆಗೆ ತಮಿಳುನಾಡಿಗೆ ನೀರು ಬಿಡಬೇಕಿರುವುದು ರೈತರಲ್ಲಿ ಆತಂಕ ಉಂಟು ಮಾಡಿದೆ.
ಕೇರಳದ ವೈನಾಡು ಹಾಗೂ ಕಬಿನಿ ಹಿನ್ನೀರು ಪ್ರದೇಶದಲ್ಲಿ ಕಳೆದ 20 ದಿನಗಳಿಂದ ಪುನರ್ವಸು ಮಳೆ ಸಾಧಾರಣವಾಗಿ ಸುರಿದಿದೆ. ಈ ಕಾರಣದಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ. ನಾಲ್ಕು ದಿನದ ಹಿಂದೆ ಮಳೆಯೂ ಆಗುತ್ತಿರುವುದರಿಂದ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.
ಜಲಾಶಯದ ಗರಿಷ್ಠ ಮಟ್ಟ 84 ಅಡಿ ಇದ್ದು, ಒಂಬತ್ತು ಸಾವಿರ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ 74 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 83 ಅಡಿಗಳಷ್ಟಿತ್ತು. ವಿದ್ಯುತ್ ಉತ್ಪಾದನಾ ಘಟಕದಿಂದ 5 ಸಾವಿರ ಕ್ಯುಸೆಕ್ ನೀರನ್ನು ಹಾಗೂ ಜಲಾಶಯದ ಎರಡು ಕ್ರಸ್ಟ್ ಗೇಟ್ ಗಳಿಂದ 2 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಈ ವರ್ಷದಲ್ಲಿ ಕ್ರಸ್ಟ್ ಗೇಟ್ ತೆರೆದು ಇದೇ ಮೊದಲ ಬಾರಿಗೆ ನೀರು ಬಿಡಲಾಗಿದೆ.

ಇತ್ತ ಮಳೆಯ ಪ್ರಮಾಣ ಸಾಧಾರಣವಾಗಿರುವುದರಿಂದ ಮುಂದಿನ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಕುರಿತು ರೈತರಲ್ಲಿ ಅನುಮಾನ ಮೂಡಿದೆ.
ತಮಿಳುನಾಡಿಗೆ ನೀರು ಬಿಟ್ಟ ಅಧಿಕಾರಿಗಳು ಕೆರೆ-ಕಟ್ಟೆಗಳಿಗೆ ನೀರು ಹರಿಸುವ ಕೆಲಸಕ್ಕೆ ಮುಂದಾಗಿಲ್ಲ. ಕಳೆದ ಬೇಸಿಗೆಯಲ್ಲೂ ಜಲಾಶಯದ ನೀರು ರೈತರು ಮತ್ತು ಜಾನುವಾರುಗಳಿಗೆ ಸಿಗದೇ ಕಷ್ಟದ ಸ್ಥಿತಿ ಎದುರಾಗಿತ್ತು.
ನುಗು, ತಾರಕ, ಹೆಬ್ಬಾಳ ಜಲಾಶಯಗಳಿಂದಲೂ ರೈತರ ಜಮೀನಿಗೆ ನೀರು ಹರಿಸುತ್ತಿಲ್ಲ. ಟಿ ನರಸೀಪುರ, ಚಾಮರಾಜನಗರ, ನಂಜನಗೂಡು, ಕೊಳ್ಳೇಗಾಲ, ಎಚ್ ಡಿ ಕೋಟೆ ವ್ಯಾಪ್ತಿಯ ಜಮೀನಿಗೆ ಸಮರ್ಪಕವಾಗಿ ಒದಗಿಸಿ ರೈತರನ್ನು ರಕ್ಷಿಸಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ ಅಷ್ಟೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications