ಕರ್ನಾಟಕ ಬಂದ್ ಮಾಡಲು ಬಿಡೆವು: ಡಿಕೆ ಶಿವಕುಮಾರ್
ಬೆಂಗಳೂರು, ಮೇ 25: ಬಿಜೆಪಿಯು ಕರ್ನಾಟಕ ಬಂದ್ ಮಾಡಲು ನಾವು ಬಿಡುವುದಿಲ್ಲ, ಅದು ಅಸಾಂವಿಧಾನಿಕ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬಂದ್ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಪೋಲು ಮಾಡಲು ಸಾಧ್ಯವಿಲ್ಲ, ಇದಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಬಿಜೆಪಿಯ ಬಂದ್ನಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾದರೆ ಅದಕ್ಕೆ ಅವರೇ ಕಾರಣಕರ್ತರಾಗುತ್ತಾರೆ. ಅವರು ಹೀಗೆ ಸರ್ಕಾರದ ಮೇಲೆ ಒತ್ತಡ ಅಥವಾ ಹೆದರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ನಮ್ಮದು ಜವಾಬ್ದಾರಿಯುತ ಸರ್ಕಾರ, ವಿವೇಚನೆಯಿಂದ ನಾವು ಯೋಜನೆಗಳನ್ನು ಜಾರಿ ಮಾಡುತ್ತೇವೆ. ಬಿಜೆಪಿಯವರ ಹೇಳಿದ ತಾಳಕ್ಕೆ ಕುಣಿಯಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications