ಅಡಿಕೆ ಬೆಳೆಗೆ ಹವಾಮಾನ ಆಧಾರಿತ ವಿಮೆ ಯೋಜನೆ, ಮೊತ್ತದ ವಿವರ
ಚಿತ್ರದುರ್ಗ, ಜೂನ್ 30: ನೈಋತ್ಯ ಮುಂಗಾರು ಹಂಗಾಮು 2024ರ ಕೃಷಿ ಚಟುವಟಿಕೆಗಳು ಆರಂಭವಾಗಿದೆ. ರೈತರಿಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ಯೋಜನೆಯ ಮಾಹಿತಿ ನೀಡಲಾಗಿದೆ. ರೈತರು ಎಷ್ಟು ಪಾವತಿಸಬೇಕು, ಎಷ್ಟು ಮೊತ್ತ ನೀಡಲಾಗುತ್ತದೆ? ಎಂಬ ಮಾಹಿತಿ ಬಿಡುಗಡೆ ಮಾಡಲಾಗಿದೆ.
2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ.

ರೈತರು ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆದ್ರತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ಬೆಳೆ ವಿಮೆ ವಿವರಗಳು: 2024ರ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು, ವಿಮಾ ಮೊತ್ತ ಹಾಗೂ ವಿಮಾ ಕಂತಿನ ವಿವರಗಳನ್ನು ರೈತರ ಅನುಕೂಲಕ್ಕಾಗಿ ನೀಡಲಾಗಿದೆ.
ಮಾವು ಬೆಳೆಗೆ ಪ್ರತಿ ಹೆಕ್ಟೇರ್ಗೆ ರೂ. 80000 ವಿಮಾ ಮೊತ್ತ ನೀಡಲಾಗುವುದು. ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ ರೂ. 4000. ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್ಗೆ ರೂ. 1,27000 ನೀಡಲಾಗುವುದು, ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ ರೂ. 6,350 ರೂ.ಗಳು.
ಅಡಿಕೆ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ಗೆ ರೂ.1,28,000 ವಿಮೆ ಮೊತ್ತ ನೀಡಲಾಗುತ್ತದೆ. ರೈತರು 5 ಕಂತುಗಳಲ್ಲಿ ರೂ. 6,400 ಪಾವತಿಸಬೇಕು. ಬೆಳೆಗಳ ವಿಮೆಯನ್ನು ಬ್ಯಾಂಕ್ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರ ಆರ್ಥಿಕ ಸಂಸ್ಥೆಗಳಲ್ಲಿ ನೋಂದಣಿ ಮಾಡಿಸಬಹುದು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ದಿನಾಂಕ ವಿಸ್ತರಣೆ ಮಾಡಲು ಶಾಸಕರ ಪತ್ರ: 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ನೋಂದಣಿಯ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನಗೆ ಪತ್ರವನ್ನು ಬರೆದಿದ್ದಾರೆ.
ಶಾಸಕರು ಪತ್ರದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಉಡುಪಿ ಜಿಲ್ಲೆಗೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆಗೆ ಒಳಪಡಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಅದರಂತೆ ಪ್ರತಿ ವರ್ಷ ಜೂನ್ 1 ರಿಂದ 30ರ ವರೆಗೆ ವಿಮೆಗೆ ನೋಂದಾವಣಿ ಮಾಡಲು ಕಾಲಾವಕಾಶ ನೀಡಬೇಕಾಗಿರುತ್ತದೆ.
ಆದರೆ ಕಳೆದ ಆರ್ಥಿಕ ವರ್ಷದಲ್ಲೂ ಕೂಡ ವಿಮೆಗೆ ನೋಂದಾವಣಿ ಮಾಡಲು ತೀರಾ ಕಡಿಮೆ ಕಾಲಾವಕಾಶ ಕಲ್ಪಿಸಿ ಅರ್ಹ ರೈತರು ಯೋಜನೆಯಿಂದ ವಂಚಿತರಾಗಿದ್ದು ಅದೇ ರೀತಿ ಈ ವರ್ಷ ಜೂನ್ 26 ರಿಂದ ಜುಲೈ 1 ರವರೆಗೆ ಮಾತ್ರ ರೈತರು ತಮ್ಮ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಾವಣಿ ಮಾಡಲು ಕಾಲಾವಕಾಶ ಕಲ್ಪಿಸಲಾಗಿರುತ್ತದೆ ಎಂದು ಬ್ಯಾಂಕ್ ಶಾಖೆಗಳು ರೈತರಿಗೆ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭಿಸಿದೆ.
ಕಾಲಾವಕಾಶ ತೀರಾ ಕಡಿಮೆ ಇರುವುದರಿಂದ ಎಲ್ಲಾ ಅರ್ಹ ರೈತರು ತಮ್ಮ ಬೆಳೆಗೆ ವಿಮೆ ನೋಂದಾವಣಿ ಮಾಡಿಸುವುದು ಕಷ್ಟವಾಗಿದ್ದು ಸರ್ಕಾರದ ಯೋಜನೆಯಿಂದ ವಂಚಿತರಾಗುವ ಸಾಧ್ಯತೆಗಳಿರುತ್ತದೆ. ಈ ಬಗ್ಗೆ ಈಗಾಗಲೇ ಜಿಲ್ಲಾ ರೈತ ಸಂಘಟನೆ ಹಾಗೂ ರೈತರು ಕಾಲಾವಕಾಶ ವಿಸ್ತರಿಸಲು ಮನವಿ ಮಾಡಿರುತ್ತಾರೆ.
ಆದ್ದರಿಂದ 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಾವಣಿ ಮಾಡಲು ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಶಾಸಕರು ಪತ್ರದಲ್ಲಿ ಮನವಿ ಮಾಡಿದ್ದಾರೆ.
-
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
ಕರ್ನಾಟಕ ಬಜೆಟ್ 2026-27: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ನಾಗರಿಕ - ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ












Click it and Unblock the Notifications