ಟೊಮ್ಯಾಟೊ ಬೆಳೆ ಅಂಗಮಾರಿ ರೋಗ ನಿವಾರಣೆ ಹೇಗೆ?
ಟೊಮ್ಯಾಟೊ ಬೆಳೆಗೆ ಬರುವ ರೋಗಗಳಲ್ಲಿ ಇದು ಒಂದು ಪ್ರಮುಖ ರೋಗ. ಈ ರೋಗವು ಪೈಟೋಪ್ಥೋರಾ ಇನ್ಫೆಸ್ಟಾನ್ಸ್ (Phytophthora infestans) ಎನ್ನುವ ಶಿಲೀಂದ್ರದಿಂದ ಬರುತ್ತದೆ.
Recommended Video
ರೋಗದ ಚಿಹ್ನೆಗಳು: ನೀರಿನಿಂದ ಆವೃತವಾದ ಕಂದು ಮಿಶ್ರಿತ ಕಪ್ಪು ಬಣ್ಣದ ಚುಕ್ಕೆಗಳು ಎಲೆ, ಕಾಂಡ ಮತ್ತು ಹಣ್ಣಿನ ತೊಟ್ಟುಗಳಲ್ಲಿ ಕಂಡು ಬರುತ್ತದೆ. ಎಲೆಯ ಮೇಲೆ ಚುಕ್ಕೆಗಳು ಕಂದು ಬಣ್ಣದಿಂದ ಕೂಡಿರುತ್ತದೆ ನಂತರ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಎಲೆಯ ಕೆಳಗಡೆ ಅರಳೆಯಂತಹ ಬಿಳಿ ಬಣ್ಣದ ಶಿಲೀಂದ್ರದ ಬೆಳವಣಿಗೆ ಕಂಡು ಬರುತ್ತದೆ.
ಹೆಚ್ಚು ಆದ್ರ್ರತೆಯುಳ್ಳ ಹವಾಗುಣ ಮತ್ತು ಮೋಡಕವಿದ ವಾತಾವರಣವಿದ್ದಲ್ಲಿ ಚುಕ್ಕೆಗಳು ಒಂದು ಗೂಡಿ ಪೂರ್ತಿ ಎಲೆಯನ್ನು ಆವರಿಸಿ ಎಲೆಯ ದೇಟು ಹಾಗೂ ಗಿಡದ ಕಾಂಡಕ್ಕೂ ಸಹ ಹಬ್ಬಿ ನಂತರ ಗಿಡವು ಒಣಗುತ್ತದೆ.

ಮೋಡಕವಿದ ವಾತಾವರಣ, ತುಂತುರು ಮಳೆಯಾಗುವುದು, ಹೆಚ್ಚು ಆದ್ರ್ರತೆಯುಳ್ಳ ಹವಾಗುಣ ಈ ರೋಗಕ್ಕೆ ಸೂಕ್ತವಾದ ವಾತಾವರಣ. ಇಂತಹ ಸಮಯದಲ್ಲಿ ರೋಗವು ಹೆಚ್ಚು ಉಲ್ಬಣಗೊಳ್ಳುತ್ತದೆ. ಆದ್ದರಿಂದ ಟೊಮ್ಯಾಟೊ ಬೆಳೆಗಾರರು ಅಂತಹ ವಾತಾವರಣ ಇದ್ದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು.
ಅಂಗಮಾರಿ ರೋಗ ಹತೋಟಿ ಕ್ರಮಗಳು: ರೋಗದ ಪ್ರಾರಂಭಿಕ ಹಂತದಲ್ಲಿ 2.0 ಗ್ರಾಂ ಮ್ಯಾಂಕೋಜೆಬ್ ಅಥವಾ 3.0 ಗ್ರಾಂ ತಾಮ್ರದ ಆಕ್ಸಿಕ್ಲೊರೈಡ್ ಅಥವಾ 2.0 ಗ್ರಾಂ ಮೆಟಲಾಕ್ಷಿಲ್ ಮ್ಯಾಂಕೋಜೆಬ್ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.
ನಂತರದ ಹಂತಗಳಲ್ಲಿ/ ರೋಗದ ತೀವ್ರತೆ ಹೆಚ್ಚಾಗಿದ್ದಾಗ 2.0 ಗ್ರಾಂ ಫೊಸ್ಟೈಲ್-ಎಲ್ ಅಥವಾ 1.0 ಗ್ರಾಂ ಡೈಮಿಥೋಮಾರ್ಪ ಜೊತೆಗೆ 2.0 ಗ್ರಾಂ ಮೆಟಿರಾಮ ಅಥವಾ 2.0 ಗ್ರಾಂ ಸೈಮಾಕ್ಸಾನಿಲ್ + ಮ್ಯಂಕೋಜೆಬ್ ಅಥವಾ 3.0 ಗ್ರಾಂ ಫೆನಾಮಿಡೊನ್ ಮ್ಯಾಂಕೋಜೆಬ್ ಅಥವಾ 1.0 ಮಿ.ಲೀ. ಅಜೋಕ್ಸಿಸ್ಟ್ರೋಬಿನ್ ಅಥವಾ 2.0 ಗ್ರಾಂ ಪೈರಾಕ್ಲೋಸ್ಟ್ರೊಬಿನ್ ಮೆಟಿರಾಮ ಅಥವಾ 1.0 ಮಿ.ಲೀ. ಫ್ಯಾಮೊಕ್ಸಾಡೋನ್ ಸೈಮಾಕ್ಸಾನಿಲ್ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೆಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ನಿಮ್ಮ ಜಿಲ್ಲೆಯ ಹಾರ್ಟಿಕ್ಲಿನಿಕ್ ಸಂಪರ್ಕಿಸಬಹುದು.(ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications