ಟೊಮ್ಯಾಟೊ ಬೆಳೆ ಅಂಗಮಾರಿ ರೋಗ ನಿವಾರಣೆ ಹೇಗೆ?
ಟೊಮ್ಯಾಟೊ ಬೆಳೆಗೆ ಬರುವ ರೋಗಗಳಲ್ಲಿ ಇದು ಒಂದು ಪ್ರಮುಖ ರೋಗ. ಈ ರೋಗವು ಪೈಟೋಪ್ಥೋರಾ ಇನ್ಫೆಸ್ಟಾನ್ಸ್ (Phytophthora infestans) ಎನ್ನುವ ಶಿಲೀಂದ್ರದಿಂದ ಬರುತ್ತದೆ.
Recommended Video
ರೋಗದ ಚಿಹ್ನೆಗಳು: ನೀರಿನಿಂದ ಆವೃತವಾದ ಕಂದು ಮಿಶ್ರಿತ ಕಪ್ಪು ಬಣ್ಣದ ಚುಕ್ಕೆಗಳು ಎಲೆ, ಕಾಂಡ ಮತ್ತು ಹಣ್ಣಿನ ತೊಟ್ಟುಗಳಲ್ಲಿ ಕಂಡು ಬರುತ್ತದೆ. ಎಲೆಯ ಮೇಲೆ ಚುಕ್ಕೆಗಳು ಕಂದು ಬಣ್ಣದಿಂದ ಕೂಡಿರುತ್ತದೆ ನಂತರ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಎಲೆಯ ಕೆಳಗಡೆ ಅರಳೆಯಂತಹ ಬಿಳಿ ಬಣ್ಣದ ಶಿಲೀಂದ್ರದ ಬೆಳವಣಿಗೆ ಕಂಡು ಬರುತ್ತದೆ.
ಹೆಚ್ಚು ಆದ್ರ್ರತೆಯುಳ್ಳ ಹವಾಗುಣ ಮತ್ತು ಮೋಡಕವಿದ ವಾತಾವರಣವಿದ್ದಲ್ಲಿ ಚುಕ್ಕೆಗಳು ಒಂದು ಗೂಡಿ ಪೂರ್ತಿ ಎಲೆಯನ್ನು ಆವರಿಸಿ ಎಲೆಯ ದೇಟು ಹಾಗೂ ಗಿಡದ ಕಾಂಡಕ್ಕೂ ಸಹ ಹಬ್ಬಿ ನಂತರ ಗಿಡವು ಒಣಗುತ್ತದೆ.

ಮೋಡಕವಿದ ವಾತಾವರಣ, ತುಂತುರು ಮಳೆಯಾಗುವುದು, ಹೆಚ್ಚು ಆದ್ರ್ರತೆಯುಳ್ಳ ಹವಾಗುಣ ಈ ರೋಗಕ್ಕೆ ಸೂಕ್ತವಾದ ವಾತಾವರಣ. ಇಂತಹ ಸಮಯದಲ್ಲಿ ರೋಗವು ಹೆಚ್ಚು ಉಲ್ಬಣಗೊಳ್ಳುತ್ತದೆ. ಆದ್ದರಿಂದ ಟೊಮ್ಯಾಟೊ ಬೆಳೆಗಾರರು ಅಂತಹ ವಾತಾವರಣ ಇದ್ದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು.
ಅಂಗಮಾರಿ ರೋಗ ಹತೋಟಿ ಕ್ರಮಗಳು: ರೋಗದ ಪ್ರಾರಂಭಿಕ ಹಂತದಲ್ಲಿ 2.0 ಗ್ರಾಂ ಮ್ಯಾಂಕೋಜೆಬ್ ಅಥವಾ 3.0 ಗ್ರಾಂ ತಾಮ್ರದ ಆಕ್ಸಿಕ್ಲೊರೈಡ್ ಅಥವಾ 2.0 ಗ್ರಾಂ ಮೆಟಲಾಕ್ಷಿಲ್ ಮ್ಯಾಂಕೋಜೆಬ್ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.
ನಂತರದ ಹಂತಗಳಲ್ಲಿ/ ರೋಗದ ತೀವ್ರತೆ ಹೆಚ್ಚಾಗಿದ್ದಾಗ 2.0 ಗ್ರಾಂ ಫೊಸ್ಟೈಲ್-ಎಲ್ ಅಥವಾ 1.0 ಗ್ರಾಂ ಡೈಮಿಥೋಮಾರ್ಪ ಜೊತೆಗೆ 2.0 ಗ್ರಾಂ ಮೆಟಿರಾಮ ಅಥವಾ 2.0 ಗ್ರಾಂ ಸೈಮಾಕ್ಸಾನಿಲ್ + ಮ್ಯಂಕೋಜೆಬ್ ಅಥವಾ 3.0 ಗ್ರಾಂ ಫೆನಾಮಿಡೊನ್ ಮ್ಯಾಂಕೋಜೆಬ್ ಅಥವಾ 1.0 ಮಿ.ಲೀ. ಅಜೋಕ್ಸಿಸ್ಟ್ರೋಬಿನ್ ಅಥವಾ 2.0 ಗ್ರಾಂ ಪೈರಾಕ್ಲೋಸ್ಟ್ರೊಬಿನ್ ಮೆಟಿರಾಮ ಅಥವಾ 1.0 ಮಿ.ಲೀ. ಫ್ಯಾಮೊಕ್ಸಾಡೋನ್ ಸೈಮಾಕ್ಸಾನಿಲ್ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೆಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ನಿಮ್ಮ ಜಿಲ್ಲೆಯ ಹಾರ್ಟಿಕ್ಲಿನಿಕ್ ಸಂಪರ್ಕಿಸಬಹುದು.(ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications