ಹಣದುಬ್ಬರದ ಎರಡು ಅಲುಗಿನ ಕತ್ತಿಗೆ ಸಿಕ್ಕು ಅಧಿಕಾರ ಕಳ್ಕೊಂಡ ಬಿಜೆಪಿ
ಚಿಲ್ಲರೆ ಹಣದುಬ್ಬರ ದರದ ಮೇಲೆ ಆಧಾರವಾದ ಗ್ರಾಹಕ ದರ ಸೂಚ್ಯಂಕವು ಎಷ್ಟು ಮುಖ್ಯ ಎಂಬುದನ್ನು ಈ ಹಿಂದೆ ಹಲವು ಸಲ ವಿವರಿಸಲಾಗಿತ್ತು. ಹಾಗೇ ಇದೊಂದು ಬಗೆಯ ಎರಡು ಅಲುಗಿನ ಕತ್ತಿ ಅಂತಲೂ ತಿಳಿಸಲಾಗಿತ್ತು. ಅದೇ ಈಗ ಬಿಜೆಪಿಯ ಸೋಲಿಗೂ ಕಾರಣವಾಗಿದೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.
ಈ ಹಿಂದೆಲ್ಲ ಹಣದುಬ್ಬರ ವಿಪರೀತ ಹೆಚ್ಚಾಗಿ ಸರಕಾರಗಳು ಉದುರಿಹೋದ ಉದಾಹರಣೆಗಳಿವೆ. ಆದರೆ ಈ ಬಾರಿ ಕೇಂದ್ರ ಸರಕಾರದ ಸ್ಥಿತಿ ನೋಡಿ, ಗ್ರಾಮೀಣ ಭಾಗದ ಆದಾಯಕ್ಕೆ ಬೆಂಬಲ ನೀಡಲಾರದ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ (2.33%) ಕುಸಿದಿದ್ದರಿಂದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸುವಂತಾಗಿದೆ.
ಹಣದುಬ್ಬರಕ್ಕೂ ಆಹಾರ ಧಾನ್ಯಗಳ ಬೆಲೆಗೂ ನೇರವಾದ ಸಂಬಂಧವಿದೆ. ಹಣದುಬ್ಬರ ಕಡಿಮೆ ಇದೆ ಅಂದರೆ ಆಹಾರ ಪದಾರ್ಥಗಳ ಬೆಲೆ ಕಡಿಮೆ ಇದೆ ಅಂತ ಅರ್ಥ. ಇದರಿಂದ ಗ್ರಾಹಕ ದರ ಸೂಚ್ಯಂಕವು ಕಡಿಮೆ ಆಗಿ, ಖರೀದಿದಾರರು ಸಂತೋಷದಿಂದ ಇರುತ್ತಾರೆ. ಆದರೆ ಬೆಳೆಗಾರರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಕಂಗಾಲಾಗುತ್ತಾರೆ.

ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಸತತವಾಗಿ ಚಿಲ್ಲರೆ ಹಣದುಬ್ಬರ ಕಡಿಮೆ ಆಗಿತ್ತು. ಅದರಲ್ಲೂ ಆಹಾರ ಪದಾರ್ಥಗಳ ಬೆಲೆ ಕುಸಿದಿತ್ತು. ಇದರಿಂದ ಕೃಷಿ ಆದಾಯಕ್ಕೆ ಹೊಡೆತ ಬಿದ್ದು, ಗ್ರಾಮೀಣ ಭಾಗದ ಒತ್ತಡ ಬಿತ್ತು. ಇದರಿಂದ ಆಡಳಿತಾರೂಢ ಸರಕಾರದ ವಿರುದ್ಧ ಸಿಟ್ಟು ಕಾರಿಕೊಳ್ಳುವಂತಾಯಿತು. ನೆನಪಿಟ್ಟುಕೊಳ್ಳಿ, ಎಲ್ಲರಿಗೂ ಉದ್ಯೋಗ ಭರವಸೆ ನೀಡಿದ್ದ ಸರಕಾರ ಇದಾಗಿತ್ತು.
ಲೋಕಸಭೆ ಚುನಾವಣೆಗೆ ಇನ್ನು ಆರು ತಿಂಗಳು ಇರುವಾಗ ಈ ಸಮಸ್ಯೆಯನ್ನು ನಿವಾರಿಸುವ ಕಡೆಗೆ ಸರಕಾರ ತುರ್ತಾಗಿ ಗಮನ ಹರಿಸಬೇಕಿದೆ. ಚಿಲ್ಲರೆ ಹಣದುಬ್ಬರದ ಇಳಿಕೆಯಾದರೆ ಹಣಕಾಸು ನೀತಿಯ ಹೊಂದಾಣಿ ಮಾಡುವುದು ಆರ್ ಬಿಐಗೆ ಕಷ್ಟವಾಗಲಾರದು. ಆದರೆ ಅದೇ ಹಣದುಬ್ಬರ ಭಾರೀ ಏರಿಕೆಯಾದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಕಷ್ಟವಾಗುತ್ತದೆ.
ಆ ಕಾರಣಕ್ಕೆ ರೈತರ ಆದಾಯದಲ್ಲಿ ಬಹಳ ಇಳಿಕೆ ಆಗಿದೆ. ಆದರೆ ಅವರು ಸಾಲ ತೆಗೆದುಕೊಳ್ಳುತ್ತಿದ್ದ ಬಡ್ಡಿ ದರದಲ್ಲಿ ಯಾವುದೇ ಇಳಿಕೆ ಆಗಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications