ಮಧ್ಯಪ್ರದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿರುವುದೇಕೆ?
ಮಂಡಸೌರ್ (ಮಧ್ಯಪ್ರದೇಶ), ಜೂನ್ 7: ಮಧ್ಯಪ್ರದೇಶದ ಮಂಡಸೌರ್ ಎಂಬಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಪರಿಣಾಮ ಐವರು ಮೃತಪಟ್ಟ ಘಟನೆ ಕೇಳಿ ಒಮ್ಮೆ ಹೃದಯ ಕಸಿವಿಸಿಗೊಂಡಿರಬಹುದು.
ಅನ್ನದಾತೋ ಸುಖೀಭವ ಎನ್ನುವ ನಮ್ಮ ದೇಶದಲ್ಲಿ, ಅನ್ನ ನೀಡುವ ರೈತನನ್ನೇ ಗುಂಡಿಕ್ಕಿ ಕೊಲ್ಲುವುದು ಎಂದರೆ ಅತ್ಯಂತ ಅಮಾನವೀಯವೇ ಸರಿ. ದೇಶದ ಬೆನ್ನೆಲುಬು ಎಂದೇ ಕರೆಸಿಕೊಳ್ಳುವ ರೈತರ ಸಮಸ್ಯೆಗಳಿಗೆ ಕಿವಿಯಾಗಿ, ಅದರ ಪರಿಹಾರಕ್ಕೆ ಸನ್ನದ್ಧವಾಗಬೇಕಾದ ಸರ್ಕಾರವೇ ಅವರ ಸಾವಿಗೆ ಕಾರಣವಾದರೆ ಅದು ನಿಜಕ್ಕೂ ಶೋಚನೀಯ ಸಂಗತಿ.[ಮಧ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್, ಸಾವಿನ ಸಂಖ್ಯೆ 5ಕ್ಕೆ ಏರಿಕೆ]
ಭೂಪಾಲ್ ನಿಂದ 325 ಕಿ.ಮೀ.ದೂರದಲ್ಲಿರುವ ಮಂಡಸೌರ್ ನಲ್ಲಿ ಇದ್ದಕ್ಕಿದ್ದಂತೆಯೇ ಹೋರಾಟದ ಕಿಚ್ಚು ಹತ್ತಿಕೊಂಡಿತ್ತು. ಜೂನ್ 1 ರಿಂದಲೇ ಆರಂಭವಾಗಿರುವ ಈ ಹೋರಾಟ ದಿನೇ ದಿನೇ ಉಗ್ರರೂಪ ತಾಳುತ್ತಿದೆಯೇ ವಿನಃ, ತಹಬಂದಿಗೆ ಬರುವ ಲಕ್ಷಣಗಳು ಮಾತ್ರ ಗೋಚರವಾಗುತ್ತಿಲ್ಲ.
ಅಷ್ಟಕ್ಕೂ ಮಧ್ಯಪ್ರದೇಶದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದೇಕೆ? ನೇಗಿಲ ಯೋಗಿ ಇದ್ದಕ್ಕಿದ್ದಂತೆ ಬೀದಿಗಳಿದು ಹೋರಾಟಕ್ಕಿಳಿಯುವುದಕ್ಕೆ ಕಾರಣವೇನು? ಸಾತ್ವಿಕ ಹೋರಾಟ ಹಿಂಸೆಯ ರೂಪ ಪಡೆದು, ಕೊನೆಗೆ ಐವರು ಅಮಾಯಕ ರೈತರ ಸಾವಿಗೆ ಕಾರಣವಾಗಿದ್ದೇಕೆ? ಅನ್ನದಾತನ ಹೋರಾಟಕ್ಕೆ ಸರ್ಕಾರ ಏನೆನ್ನುತ್ತದೆ? ಇಲ್ಲಿದೆ ಮಾಹಿತಿ.[ನಾನು ಸಾಲ ಮನ್ನಾ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ- ಸಿದ್ಧರಾಮಯ್ಯ]

ಹೋರಾಟ ಏಕೆ ?

ಬೆಂಬಲ ಹಿಂಪಡೆದ ಬಿಕೆಎಸ್

ಎಗ್ಗಿಲ್ಲದೆ ನಡೆಯುತ್ತಿದೆ ರೈತರ ಆತ್ಮಹತ್ಯೆ
ಮಧ್ಯಪ್ರದೇಶದಲ್ಲಿ ಕಳೆದ 16 ವರ್ಷಗಳಲ್ಲಿ 21000 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಸಮೀಕ್ಷೆಯೊಂದರ ವರದಿ. ಹಾಗೆಯೇ 2016-17 ನೇ ಸಾಲಿನಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಸಂಖ್ಯೆ ಬರೋಬ್ಬರಿ 1982. ಇಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಕೂಗೂ ಕೇಳಿಬರುತ್ತಿದೆ.

ಮುಖ್ಯಮಂತ್ರಿ ಏನಂತಾರೆ?
ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಸಿದ್ಧವಿದೆ. ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿಯೂ ಸರ್ಕಾರ ಬದ್ಧವಾಗಿದೆ. ನಮ್ಮದು ಎಂದಿಗೂ ರೈತ ಪರ ಸರ್ಕಾರ. ರೈತರ ಹೋರಾಟ ಹಿಂಸೆಯ ರೂಪ ತಾಳಿರುವಲ್ಲಿ ವಿರೋಧ ಪಕ್ಷದ ಕೈವಾಡವಿದೆ ಎಂಬುದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನುಡಿ.

ಮುಂದುವರಿದ ಗಲಭೆ
ಶಾಂತ ರೀತಿಯಲ್ಲಿ ಸಾಗುತ್ತಿದ್ದ ರೈತರ ಹೋರಾಟ ಇದ್ದಕ್ಕಿದ್ದಂತೆಯೇ ಹಿಂಸೆಯ ರೂಪ ತಾಳಿದ ಹಿನ್ನೆಲೆಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು. ಇದರಿಂದಾಗಿ ಇದುವರೆಗೂ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹಲವೆಡೆ ಕರ್ಫೂ ಸಹ ಜಾರಿಗೊಳಿಸಲಾಗಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications