ಬಂಡೀಪುರ ಕಾಡಂಚಿನ ರೈತರ ನಿದ್ದೆಗೆಡಿಸಿದ ಕಾಡಾನೆಗಳು!
ಚಾಮರಾಜನಗರ, ನವೆಂಬರ್ 29: ಕಳೆದೊಂದು ವರ್ಷದಿಂದ ಉತ್ತಮ ಮುಂಗಾರು ಮತ್ತು ಹಿಂಗಾರು ಮಳೆ ಸುರಿದ ಪರಿಣಾಮ ಅರಣ್ಯದಲ್ಲಿರುವ ಕೆರೆಕಟ್ಟೆಗಳು ತುಂಬಿದ್ದು, ಹಸಿರು ಮೇವು ಹೇರಳವಾಗಿ ದೊರಕುತ್ತಿವೆ. ಹೀಗಿದ್ದರೂ ಅರಣ್ಯದಲ್ಲಿರುವ ಕಾಡಾನೆಗಳು ರೈತರ ಜಮೀನಿಗೆ ಲಗ್ಗೆ ಹಾಕುತ್ತಿರುವುದು ರೈತರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.
ಈಗಾಗಲೇ ರೈತರು ಬಾಳೆ, ಭತ್ತ, ಜೋಳ, ರಾಗಿ ಹೀಗೆ ವಿವಿಧ ಬೆಳೆಗಳನ್ನು ಬೆಳೆದಿದ್ದು ಆ ಬೆಳೆಯನ್ನು ಕಾಡಾನೆಗಳಿಂದ ಕಾಪಾಡಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಕಾಡಿನಿಂದ ಬರುವ ಕಾಡಾನೆಗಳ ಹಿಂಡು ಬೆಳೆಯನ್ನು ತಿಂದು ತುಳಿದು ನಾಶ ಮಾಡಿಬಿಡುತ್ತವೆ.
ಇದರಿಂದ ವರ್ಷ ಪೂರ್ತಿ ದುಡಿದು ಸಾಲ ಮಾಡಿ ಬೆಳೆದ ಬೆಳೆ ನಾಶವಾಗಿ ರೈತನ ಹೊಟ್ಟೆಗೆ ತಣ್ಣೀರು ಬಟ್ಟೆ ಎನ್ನುವಂತಾಗಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಬರುತ್ತಿರುವುದರಿಂದ ಕಾಡಾನೆಗಳು ಅರಣ್ಯ ಬಿಟ್ಟು ನಾಡಿನತ್ತ ಬರುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಹಸಿರಾಗಿ ಬೆಳೆದ ಬಾಳೆ, ತೆಂಗು ಬೆಳೆಯನ್ನೇ ಟಾರ್ಗೆಟ್ ಮಾಡಿಕೊಳ್ಳುವ ಕಾಡಾನೆಗಳು ಅದನ್ನು ತಿಂದು ನಾಶ ಮಾಡುತ್ತಿವೆ.

ಇದೀಗ ಬಂಡೀಪುರ ಹುಲಿಯೋಜನೆಯ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ರೈತರು ಬೆಳೆದ ಹುರುಳಿ, ರಾಗಿ, ತೊಗರಿ, ಟೊಮೆಟೊ ಹಾಗೂ ಬಾಳೆಯನ್ನು ನಾಶಪಡಿಸಿವೆ.
ಕಾಡಾನೆಗಳು ಹಾದು ಹೋದ ಹಾದಿಯುದ್ದಕ್ಕೂ ಸಿಗುವ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನೆಲ್ಲ ತುಳಿದು ಹಾಳು ಮಾಡಿವೆ. ಆದರೆ ಇದಕ್ಕೆ ಅರಣ್ಯ ಇಲಾಖೆಯಿಂದ ಯಾವುದೇ ರೀತಿಯ ಪರಿಹಾರ ಸಿಗುವುದಿಲ್ಲ ಎಂಬುದು ರೈತರ ಅಳಲಾಗಿದೆ.
ನೆಮ್ಮದಿಯುಸಿರುಬಿಟ್ಟ ರೈತರು ಇನ್ನೊಂದೆಡೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಯೋಜನೆಯ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಾ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಹುಲಿ ಇದೀಗ ನಿತ್ರಾಣವಾಗಿ ಸಾವಿಗೀಡಾಗಿದ್ದರಿಂದ ಗ್ರಾಮದಲ್ಲಿದ್ದ ಜನರ ಭಯ ಮುಕ್ತರಾಗಿದ್ದಾರೆ.

ಸಾವನ್ನಪ್ಪಿದ ಹುಲಿ 12 ವರ್ಷ ವಯಸ್ಸಿನ ಗಂಡು ಹುಲಿಯಾಗಿದ್ದು, ಇದು ಆಹಾರ ಸಿಗದೆ ನಿತ್ರಾಣಗೊಂಡು ಸಾವನ್ನಪ್ಪಿರಬಹುದು ಎಂಬುದು ಅರಣ್ಯ ಇಲಾಖೆ ತಿಳಿಸಿದೆ.
ಕೆಲವು ದಿನಗಳ ಹಿಂದೆ ಹಂಗಳ ಸಮೀಪದ ಹಿರೀಕೆರೆ ಬಳಿ ಗಸ್ತಿನಲ್ಲಿದ್ದ ಸಿಬ್ಬಂದಿ ಸೋಮನಾಥಪುರ ಬೀಟ್ನಲ್ಲಿದ್ದಾಗ ಹುಲಿಯೊಂದು ಮಲಗಿದ ಸ್ಥಿತಿಯಲ್ಲಿ ಕಾಣಿಸಿತ್ತು. ಆದರೆ ಅದು ಬಹಳ ಸಮಯವಾದರೂ ಕದಲದೆ ಇದ್ದುದರಿಂದ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲಿಸಿದಾಗ ಅದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications